ಮಹಿಳಾ ಸಬಲೀಕರಣ, ಸಾಮಾಜಿಕ ಸಾಮರಸ್ಯ ಮುಖ್ಯ: ಗೋಪಿ ಜಿ.

KannadaprabhaNewsNetwork |  
Published : Jun 29, 2026, 02:15 AM IST
ಕಾರ್ಯಕ್ರಮದಲ್ಲಿ ಪ್ರಮುಖರಾದ ಗೋಪಿ ಜಿ. ಮಾತನಾಡಿದರು. | Kannada Prabha

ಸಾರಾಂಶ

ಭಾರತೀಯ ಸಂಸ್ಕೃತಿಯಲ್ಲಿ ಮಹಿಳೆಯನ್ನು ಶಕ್ತಿ, ತ್ಯಾಗ, ಸೇವೆ ಮತ್ತು ಸೃಜನಶೀಲತೆಯ ಪ್ರತೀಕವಾಗಿ ಕಾಣಲಾಗುತ್ತದೆ.

ಗದಗ: ಮಹಿಳಾ ಸಬಲೀಕರಣ, ಸಾಮಾಜಿಕ ಸಾಮರಸ್ಯ, ಪರಿಸರ ಸಂರಕ್ಷಣೆ ಹಾಗೂ ಜವಾಬ್ದಾರಿಯುತ ನಾಗರಿಕಪ್ರಜ್ಞೆ ಇಂದಿನ ಸಮಾಜದ ಪ್ರಮುಖ ಅಗತ್ಯಗಳಾಗಿದ್ದು, ಇವುಗಳ ಸಮನ್ವಯದಿಂದಲೇ ಉತ್ತಮ ಸಮಾಜ ಮತ್ತು ಬಲಿಷ್ಠ ರಾಷ್ಟ್ರ ನಿರ್ಮಾಣ ಸಾಧ್ಯ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕರ್ನಾಟಕ ಉತ್ತರ ಪ್ರಾಂತ ಕಾರ್ಯಕಾರಿಣಿ ಸದಸ್ಯ ಹಾಗೂ ಚಿಂತಕ ಗೋಪಿ ಜಿ. ತಿಳಿಸಿದರು.

ನಗರದ ಸೇವಾ ಚೇತನ ಸಭಾಂಗಣದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಜಿಲ್ಲಾ ಘಟಕವು 100 ವರ್ಷರ್ಗಳ ಸಂಘ ಯಾತ್ರೆ ಕಾರ್ಯಕ್ರಮದ ಅಂಗವಾಗಿ ಆಯೋಜಿಸಿದ್ದ ಪ್ರಮುಖ ನಾಗರಿಕರ ಗೋಷ್ಠಿಯಲ್ಲಿ ಮುಖ್ಯ ಉಪನ್ಯಾಸ ನೀಡಿದ ಅವರು, ಇಂದಿನ ಸಮಾಜದಲ್ಲಿ ಮಹಿಳೆಯರ ಗೌರವ, ಸುರಕ್ಷತೆ ಮತ್ತು ಸಮಾನ ಅವಕಾಶಗಳ ಕುರಿತು ಇನ್ನಷ್ಟು ಜಾಗೃತಿ ಮೂಡಬೇಕಿದೆ ಎಂದರು.

ಭಾರತೀಯ ಸಂಸ್ಕೃತಿಯಲ್ಲಿ ಮಹಿಳೆಯನ್ನು ಶಕ್ತಿ, ತ್ಯಾಗ, ಸೇವೆ ಮತ್ತು ಸೃಜನಶೀಲತೆಯ ಪ್ರತೀಕವಾಗಿ ಕಾಣಲಾಗುತ್ತದೆ. ಶಿಕ್ಷಣ, ವಿಜ್ಞಾನ, ಕ್ರೀಡೆ, ರಾಜಕೀಯ, ರಕ್ಷಣಾ ಕ್ಷೇತ್ರ ಸೇರಿದಂತೆ ಎಲ್ಲ ವಲಯಗಳಲ್ಲೂ ಮಹಿಳೆಯರು ಸಾಧನೆಯ ಹೊಸ ಅಧ್ಯಾಯಗಳನ್ನು ಬರೆಯುತ್ತಿದ್ದು, ರಾಷ್ಟ್ರ ನಿರ್ಮಾಣದಲ್ಲಿ ಅವರ ಪಾತ್ರ ನಿರ್ಣಾಯಕವಾಗಿದೆ ಎಂದರು.

ಮಹಿಳೆಯರ ವಿರುದ್ಧದ ಹಿಂಸೆ, ಲಿಂಗ ತಾರತಮ್ಯ, ವರದಕ್ಷಿಣೆ, ಬಾಲ್ಯವಿವಾಹ ಹಾಗೂ ಆರ್ಥಿಕ ಅಸಮಾನತೆಗಳಂತಹ ಸಮಸ್ಯೆಗಳು ಇನ್ನೂ ಮುಂದುವರಿದಿರುವುದು ಕಳವಳಕಾರಿ ಸಂಗತಿಯಾಗಿದೆ. ಮಹಿಳಾ ಸಬಲೀಕರಣ ಕೇವಲ ಕಾನೂನುಗಳ ಮೂಲಕ ಸಾಧ್ಯವಲ್ಲ, ಸಮಾಜದ ಮನೋಭಾವದಲ್ಲಿ ಸಕಾರಾತ್ಮಕ ಬದಲಾವಣೆ ಮೂಡಿದಾಗ ಮಾತ್ರ ನಿಜವಾದ ಪರಿವರ್ತನೆ ಸಾಧ್ಯ ಎಂದರು.

ನಾಗರಿಕ ಶಿಕ್ಷಣದ ಮಹತ್ವವನ್ನು ಒತ್ತಿ ಹೇಳಿದ ಅವರು, ಮನೆ ಹೇಗೆ ನಮ್ಮದೇ ಎಂಬ ಭಾವನೆಯಿಂದ ಕಾಪಾಡಿಕೊಳ್ಳುತ್ತೇವೆಯೋ, ಅದೇ ರೀತಿ ಸಮಾಜ ಮತ್ತು ಸಾರ್ವಜನಿಕ ಆಸ್ತಿಗಳನ್ನು ಸಂರಕ್ಷಿಸುವ ಹೊಣೆಗಾರಿಕೆಯೂ ಪ್ರತಿಯೊಬ್ಬ ನಾಗರಿಕನ ಮೇಲಿದೆ. ಸಂಚಾರ ನಿಯಮಗಳ ಪಾಲನೆ, ಸ್ವಚ್ಛತೆ, ಸಾರ್ವಜನಿಕ ಆಸ್ತಿಗಳ ರಕ್ಷಣೆ ಹಾಗೂ ಸಾಮಾಜಿಕ ಕರ್ತವ್ಯಗಳ ನಿರ್ವಹಣೆ ಉತ್ತಮ ನಾಗರಿಕತೆಯ ಲಕ್ಷಣಗಳಾಗಿವೆ ಎಂದರು.

ನಂತರ ಸಂವಾದ ಮತ್ತು ಸಮಾರೋಪ ಸಮಾರಂಭ ಜರುಗಿತು. ಜಿಲ್ಲಾ ಸಂಘಚಾಲಕ ಮಾರುತಿ ಕಟ್ಟಿಮನಿ ಉಪಸ್ಥಿತರಿದ್ದರು. ರವಿ ಬಡಿಗೇರ ಸ್ವಾಗತಿಸಿದರು. ಡಾ. ಉಮೇಶ ಹಾದಿ ನಿರೂಪಿಸಿದರು. ಬಸವರಾಜ ಪಟ್ಟಣಶೆಟ್ಟಿ ವಂದಿಸಿದರು. ಕಾರ್ಯಕ್ರಮದಲ್ಲಿ ಗಣ್ಯರು, ಚಿಂತಕರು, ರಾಷ್ಟ್ರೀಯ ಸ್ವಯಂಸೇವಕರು, ಮಹಿಳೆಯರು ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಾವೇರಿ ಜಿಲ್ಲಾಸ್ಪತ್ರೆಗೆ ಇರುವುದು ಒಂದೇ ಆ್ಯಂಬುಲೆನ್ಸ್
ಹೊರಗುತ್ತಿಗೆ ನೌಕರರ ನೂತನ ಕನಿಷ್ಠ ವೇತನ ಆದೇಶ ತಕ್ಷಣ ಜಾರಿಗೊಳಿಸಲು ಆಗ್ರಹ