ಕನ್ನಡಪ್ರಭ ವಾರ್ತೆ ಕೊಪ್ಪಳ
ಮಂಗಳಕರವಾದ ಬಾಗೀನ ಕೊಡುವ ಮೂಲಕ ಉಡಿ ಮಹಿಳೆಯರು ಪರಸ್ಪರ ಉಡಿ ತುಂಬಿದರು. ಅಪಾರ ಪ್ರಮಾಣದಲ್ಲಿ ಮಹಿಳೆಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಇಷ್ಟಾರ್ಥಗಳ ಶೀಘ್ರ ಈಡೇರಿಕೆಗಾಗಿ, ಕುಟುಂಬದಲ್ಲಿ ಸುಖ, ಶಾಂತಿ, ಸಮೃದ್ಧಿ ನೆಲೆಸಲಿ ಎಂಬ ಸಂಕಲ್ಪದೊಂದಿಗೆ ತಾಯಂದಿರು ಅನ್ನಪೂರ್ಣೇಶ್ವರಿ ದೇವಿಗೆ ಉಡಿ ತುಂಬುವ ಈ ಮೂಲಕ ಹರಕೆ ಮಾಡಿಕೊಂಡರು. ನಗರದ ಮಹೇಶ್ವರ ದೇವಸ್ಥಾನದ ಅಕ್ಕನ ಬಳಗದವರು, ಪ್ಯಾಟಿ ಈಶ್ವರ ದೇವಸ್ಥಾನದ ಅಕ್ಕನ ಬಳಗದವರು ಹಾಗೂ ಕೊಪ್ಪಳ ನಗರದ ಹಾಗೂ ಸುತ್ತಲಿನ ಗ್ರಾಮದ ಮಹಿಳೆಯರು ಅಪಾರ ಪ್ರಮಾಣದಲ್ಲಿ ಭಾಗವಹಿಸಿದ್ದರು.ಸಂಭ್ರಮದ ಲಘು ರಥೋತ್ಸವ:
ಗವಿಮಠದ ಆವರಣದಲ್ಲಿ ಲಘು ರಥೋತ್ಸವಕ್ಕೆ ಪೂಜೆ ಸಲ್ಲಿಸಲಾಯಿತು. ಭಕ್ತಿಯಿಂದ ಲಘು ರಥೋತ್ಸವ ಜರುಗಿತು. ನಂದಿಕೋಲು, ಪಂಜು, ಇಲಾಲುಗಳು, ವಾದ್ಯಗಳು, ಲಘು ರಥೋತ್ಸವಕ್ಕೆ ಮೆರಗು ತಂದವು. ಗವಿಸಿದ್ಧೇಶ್ವರ ಜಯಘೋಷ ಮೊಳಗಿದವು. ಅಪಾರ ಭಕ್ತರಿದ್ದರು.
ಗವಿಮಠದ ಕೈಲಾಸ ಮಂಟಪದಲ್ಲಿ ಶ್ರೀ ಗವಿಸಿದ್ದೇಶ್ವರ ಸಂಗೀತ ವಿದ್ಯಾಪೀಠ ವಿದ್ಯಾರ್ಥಿಗಳಿಂದ ಸಂಗೀತ ಕಾರ್ಯಕ್ರಮ ಜರುಗಿತು. ಹೂವಿನಹಡಗಲಿಯ ಡಾ. ಹಿರಿಶಾಂತವೀರ ಸ್ವಾಮೀಜಿ, ಸಿದ್ದೇಶ್ವರ ಸ್ವಾಮೀಜಿ, ಚನ್ನಮಲ್ಲ ಸ್ವಾಮೀಜಿ, ಚಿಕ್ಕಮ್ಯಾಗೇರಿಯ ಶ್ರೀ ಗುರು ಶಾಂತವೀರ ಶಿವಾಚಾರ್ಯರು ಸಾನಿಧ್ಯ ವಹಿಸಿದ್ದರು.