ಉದ್ಯೋಗ ಸ್ಥಳದಲ್ಲಿ ಮಹಿಳೆಯರಿಗೆ ಸುರಕ್ಷಿತ ವಾತಾವರಣ ಅಗತ್ಯ: ಪಲ್ಲವಿ

KannadaprabhaNewsNetwork |  
Published : Mar 31, 2026, 03:00 AM IST
ಕೆಬಿಎಲ್‌ ಸಾರ್ವಜನಿಕ ಸಂಪರ್ಕಾಧಿಕಾರಿ ಪಲ್ಲವಿ ಟಿ.ಎಸ್‌.ಉದ್ಘಾಟನೆ  | Kannada Prabha

ಸಾರಾಂಶ

ಮಹಿಳೆಯರಿಗೆ ಕೆಲಸದ ಸ್ಥಳದಲ್ಲಿ ಸುರಕ್ಷಿತ ವಾತಾವರಣವನ್ನು ಕಲ್ಪಿಸುವುದರಿಂದ ಅವರು ಸಮರ್ಥವಾಗಿ ಜವಾಬ್ದಾರಿ ನಿರ್ವಹಿಸಬಲ್ಲರು. ಕೆಲಸದ ಸ್ಥಳಗಳಲ್ಲಿ ಅನೇಕ ಮಹಿಳೆಯರು ಲೈಂಗಿಕ ಕಿರುಕುಳ ಅನುಭವಿಸುತ್ತಿದ್ದು, ಸಮಸ್ಯೆಯನ್ನು ಇನ್ನೊಬ್ಬರ ಬಳಿ ಹೇಳಿಕೊಳ್ಳಲಾಗದೆ ಮಾನಸಿಕ ಒತ್ತಡ ಅನುಭವಿಸುತ್ತಿದ್ದಾರೆ ಎಂದು ಕರ್ಣಾಟಕ ಬ್ಯಾಂಕ್ ಮುಖ್ಯ ವ್ಯವಸ್ಥಾಪಕಿ ಹಾಗೂ ಸಾರ್ವಜನಿಕ ಸಂಪರ್ಕ ಅಧಿಕಾರಿ ಪಲ್ಲವಿ ಟಿ. ಎಸ್. ಹೇಳಿದರು.

ಮಂಗಳೂರು: ಮಹಿಳೆಯರಿಗೆ ಕೆಲಸದ ಸ್ಥಳದಲ್ಲಿ ಸುರಕ್ಷಿತ ವಾತಾವರಣವನ್ನು ಕಲ್ಪಿಸುವುದರಿಂದ ಅವರು ಸಮರ್ಥವಾಗಿ ಜವಾಬ್ದಾರಿ ನಿರ್ವಹಿಸಬಲ್ಲರು. ಕೆಲಸದ ಸ್ಥಳಗಳಲ್ಲಿ ಅನೇಕ ಮಹಿಳೆಯರು ಲೈಂಗಿಕ ಕಿರುಕುಳ ಅನುಭವಿಸುತ್ತಿದ್ದು, ಸಮಸ್ಯೆಯನ್ನು ಇನ್ನೊಬ್ಬರ ಬಳಿ ಹೇಳಿಕೊಳ್ಳಲಾಗದೆ ಮಾನಸಿಕ ಒತ್ತಡ ಅನುಭವಿಸುತ್ತಿದ್ದಾರೆ. ಕೆಲಸದ ಸ್ಥಳದಲ್ಲಿ ಲೈಂಗಿಕ ಕಿರುಕುಳವನ್ನು ಎದುರಿಸಿದರೆ ಆಂತರಿಕ ದೂರು ಸಮಿತಿಗೆ ದೂರು ನೀಡಬೇಕು ಎಂದು ಕರ್ಣಾಟಕ ಬ್ಯಾಂಕ್ ಮುಖ್ಯ ವ್ಯವಸ್ಥಾಪಕಿ ಹಾಗೂ ಸಾರ್ವಜನಿಕ ಸಂಪರ್ಕ ಅಧಿಕಾರಿ ಪಲ್ಲವಿ ಟಿ. ಎಸ್. ಹೇಳಿದರು. ಅವರು ನಗರದ ಮಲ್ಲಿಕಟ್ಟೆ ಲಯನ್ಸ್ ಸೇವಾ ಮಂದಿರದಲ್ಲಿ ಶುಕ್ರವಾರ ನಡೆದ ಸ್ಥಳೀಯ ದೂರು ಸಮಿತಿ (ದೂರವಾಣಿ -2013), ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ದ.ಕ., ಮನಶಾಂತಿ ಸಮಾಲೋಚನೆ, ಸಂಶೋಧನೆ ಮತ್ತು ತರಬೇತಿ ಕೇಂದ್ರ, ಲಯನ್ಸ್ ಕ್ಲಬ್ ಮಂಗಳೂರು ಇವರ ಸಹಕಾರದಲ್ಲಿ ಕರ್ಣಾಟಕ ಬ್ಯಾಂಕ್ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ಕೆಲಸದ ಸ್ಥಳಗಳಲ್ಲಿನ ಲೈಂಗಿಕ ಕಿರುಕುಳದಿಂದಾಗಿ ಮಹಿಳೆಯರ ಮಾನಸಿಕ ಆರೋಗ್ಯದ ಮೇಲೆ ಬೀರುವ ಪರಿಣಾಮಗಳು ಹಾಗೂ ಪೆರೇಶ್ ಕಾಯ್ದೆ 2013 ರ ಕುರಿತು ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.

ಲೈಂಗಿಕ ಕಿರುಕುಳಗಳು ವಿವಿಧ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ದೌರ್ಜನ್ಯದ ಬಗ್ಗೆ ಮೌನವಾಗಿರದೆ ಸಮಸ್ಯೆಯನ್ನು ಎದುರಿಸಿ ಪರಿಹರಿಸಿಕೊಳ್ಳಬೇಕು. ಮಹಿಳೆಯರಿಗೂ ಗೌರವಯುತವಾದ ಕೆಲಸ ಮಾಡುವ ಹಕ್ಕು ಒದಗಿಸಬೇಕು ಎಂದು ಅವರು ಹೇಳಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಉಸ್ಮಾನ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಲೈಂಗಿಕ ಕಿರುಕುಳ ಮಾನಸಿಕವಾಗಿ, ದೈಹಿಕವಾಗಿ ಗಂಭೀರ ಪರಿಣಾಮ ಬೀರುತ್ತದೆ. ಲೈಂಗಿಕ ಕಿರುಕುಳ ಆಗದಂತೆ ಮಹಿಳೆಯರಿಗೆ ರಕ್ಷಣೆ ನೀಡಲು ಎಲ್ಲ ಕಚೇರಿಗಳಲ್ಲಿ ಆಂತರಿಕ ದೂರು ಸಮಿತಿಯನ್ನು ಕಡ್ಡಾಯವಾಗಿ ರಚಿಸಬೇಕು. ಅಶ್ಲೀಲ ಪದ ಬಳಕೆ, ಅಶ್ಲೀಲ ವರ್ತನೆ, ಅಸಹ್ಯಕರ ದೈಹಿಕ ವರ್ತನೆ ಇಂತಹ ಲೈಂಗಿಕ ದೌರ್ಜನ್ಯಕ್ಕೊಳಗಾದ ಮಹಿಳೆಯರು ಮುಜುಗರಪಡದೆ ಆಂತರಿಕ ದೂರು ಸಮಿತಿಗೆ ದೂರು ನೀಡಿ ಸಮಸ್ಯೆಯನ್ನು ಪರಿಹರಿಸುವ ಮೂಲಕ ಪ್ರಯೋಜನ ಪಡೆದುಕೊಳ್ಳಬಹುದು ಎಂದು ಹೇಳಿದರು. ಲಯನ್ಸ್ ಕ್ಲಬ್ ಅಧ್ಯಕ್ಷ ರಾಜೇಶ್ ಕಾಮತ್, ಹರೀಶ್ ಅಡ್ಯಾರ್, ಸ್ಥಳೀಯ ದೂರು ಸಮಿತಿ ಅಧ್ಯಕ್ಷೆ ಡಾ.ರಮೀಳಾ ಶೇಖರ್, ಸ್ಥಳೀಯ ದೂರು ಸಮಿತಿ ಸದಸ್ಯೆ ಮೆರ್ಲಿನ್ ಮಾರ್ಟಿಸ್, ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ಪ್ರಾಧ್ಯಾಪಕಿ ಡಾ.ಅರಣಾ ಯಡಿಯಾಳ್ ಮತ್ತಿತರರು ಇದ್ದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಭಿವೃದ್ಧಿ ನಿರೀಕ್ಷಕಿ ಚಂದ್ರಿಕಾ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದೇವರ ನಾಡಿನಲ್ಲಿ ಮಹಾ ಸಮರಕ್ಕೆ ಅಖಾಡ ಸಿದ್ಧ
ಉಪ್ಪಿನಂಗಡಿ ಸರ್ಕಾರಿ ಕಾಲೇಜು ಸಭಾಂಗಣಕ್ಕೆ ಶಿಲಾನ್ಯಾಸ