ಕನ್ನಡಪ್ರಭ ವಾರ್ತೆ ಹನೂರು
ತಾಲೂಕಿನ ಬೈಲೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಅರೆ ಕಡವಿನ ದೊಡ್ಡಿ ಮತ್ತು ಗಡಿ ಗ್ರಾಮದ ಅರ್ಧನಾರೀಪುರ ಗ್ರಾಮದಲ್ಲಿ ಹನಿ ನೀರಿಗಾಗಿ ನಿವಾಸಿಗಳ ಪರದಾಟ ಸಮಸ್ಯೆ ಪರಿಹರಿಸುವಂತೆ ನಿವಾಸಿಗಳು ಗ್ರಾಪಂ ಅಭಿವೃದ್ಧಿ ಅಧಿಕಾರಿಗೆ ಗಮನಕ್ಕೆ ತರಲಾಗಿದ್ದರು, ಕುಡಿಯುವ ನೀರಿನ ಸಮಸ್ಯೆ ಪರಿಹಾರ ನೀಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.ಬೈಲೂರು ಗ್ರಾಪಂ ವ್ಯಾಪ್ತಿಯ ಅರ್ಧನಾರೀಪುರ ತಮಿಳುನಾಡಿನ ಗಡಿ ಭಾಗದಲ್ಲಿರುವ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವುದರಿಂದ ತೊಂಬೆಗಳ ಮುಂದೆ ಕಾಲಿ ಕೊಡಗಳನ್ನು ಹಿಡಿದು ಮಹಿಳೆಯರು ನೀರು ಸಂಗ್ರಹಿಸಲು ಕೆಲಸ ಕಾರ್ಯಗಳನ್ನು ಬಿಟ್ಟು ಪರದಾಡುವಂತೆ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.
ಬೈಲೂರು ವ್ಯಾಪ್ತಿಯ ಅರ್ಧನಾರೀಪುರ ಮತ್ತು ಅರೆ ಕಡವಿನ ದೊಡ್ಡಿ ಗ್ರಾಮದ ಮಹಿಳೆಯರು ಕುಡಿಯುವ ನೀರಿನ ಸಮಸ್ಯೆ ಪರಿಹರಿಸುವಂತೆ ಗ್ರಾಮ ಪಂಚಾಯಿತಿ ಕಚೇರಿ ಮುಂಭಾಗ ಮಹಿಳೆಯರು ನೀರಿಗಾಗಿ ಕಾಲಿಕೊಡ ಪ್ರದರ್ಶನ ಮಾಡುವ ಮೂಲಕ ಜನಪ್ರತಿನಿಧಿ ಅಧಿಕಾರಿಗಳ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದು, ಕೂಡಲೇ ಸಂಬಂಧಪಟ್ಟ ಜಿಲ್ಲಾ ಆಡಳಿತ ಇತ್ತ ಗಮನ ಹರಿಸಿ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಉಗ್ರವಾದ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ನಿವಾಸಿಗಳು ತಿಳಿಸಿದ್ದಾರೆ.---15ಸಿಎಚ್ಎನ್52