ಎಲ್ಲ ಕ್ಷೇತ್ರಗಳಲ್ಲಿ ಮಹಿಳೆ ಸಾಧನೆ-ನ್ಯಾಯಾಧೀಶ ತಳವಾರ

KannadaprabhaNewsNetwork |  
Published : Mar 21, 2026, 02:15 AM IST
ಪೊಟೋ ಪೈಲ್ ನೇಮ್ ೧೮ಎಸ್‌ಜಿವಿ೧ ಶಿಗ್ಗಾಂವಿ ಪಟ್ಟಣದ ಡಾ: ಬಿ ಆರ್ ಅಂಬೇಡ್ಕರ್ ಸರ್ಕಾರಿ ಕಛೇರಿಗಳ ಸಂಕೀರ್ಣದ ಸಭಾಭವನದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ   ತಾಲೂಕು ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ  ಗಿಡಕ್ಕೆ ನೀರೆರಿಯುವ ಮೂಲಕ ಕಾರ್ಯಕ್ರಮವನ್ನು -ಶಿಗ್ಗಾಂವಿ ಜೆಎಂಎಫ್‌ಸಿ ದಿವಾಣಿ ನ್ಯಾಯಾದೀಶರಾದ ಸುನೀಲ ಎಸ್.ತಳವಾರ ಉದ್ಘಾಟಿಸಿ ಮಾತನಾಡಿದರು | Kannada Prabha

ಸಾರಾಂಶ

ಮಹಿಳೆಯರಿಗೆ ಸಂವಿಧಾನದಲ್ಲಿ ಸಮಾನತೆ ಹಕ್ಕು ಹಾಗೂ ವಿಶೇಷ ಕಾನೂನುಗಳನ್ನು ನೀಡಲಾಗಿದೆ. ಮಹಿಳೆಯರು ಕುಟುಂಬದ ಜವಾಬ್ದಾರಿಯೊಂದಿಗೆ ಎಲ್ಲ ಕ್ಷೇತ್ರಗಳಲ್ಲಿ ಯಶಸ್ವಿಯಾಗಿ ಸಾಧನೆ ಮಾಡುತ್ತಿದ್ದಾರೆ ಎಂದು ಶಿಗ್ಗಾಂವಿ ಜೆಎಂಎಫ್‌ಸಿ ದಿವಾಣಿ ನ್ಯಾಯಾಧೀಶ ಸುನೀಲ ಎಸ್. ತಳವಾರ ಹೇಳಿದರು.

ಶಿಗ್ಗಾಂವಿ: ಮಹಿಳೆಯರಿಗೆ ಸಂವಿಧಾನದಲ್ಲಿ ಸಮಾನತೆ ಹಕ್ಕು ಹಾಗೂ ವಿಶೇಷ ಕಾನೂನುಗಳನ್ನು ನೀಡಲಾಗಿದೆ. ಮಹಿಳೆಯರು ಕುಟುಂಬದ ಜವಾಬ್ದಾರಿಯೊಂದಿಗೆ ಎಲ್ಲ ಕ್ಷೇತ್ರಗಳಲ್ಲಿ ಯಶಸ್ವಿಯಾಗಿ ಸಾಧನೆ ಮಾಡುತ್ತಿದ್ದಾರೆ ಎಂದು ಶಿಗ್ಗಾಂವಿ ಜೆಎಂಎಫ್‌ಸಿ ದಿವಾಣಿ ನ್ಯಾಯಾಧೀಶ ಸುನೀಲ ಎಸ್. ತಳವಾರ ಹೇಳಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾವೇರಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಶಿಗ್ಗಾಂವಿ ತಾಲೂಕು ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಸರ್ಕಾರಿ ಕಚೇರಿಗಳ ಸಂಕೀರ್ಣದ ಸಭಾಭವನದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಶಿಗ್ಗಾಂವಿ ಜೆಎಂಎಫ್‌ಸಿ ನ್ಯಾಯಾಧೀಶ ಅಶ್ವಿನಿ ಚಂದ್ರಕಾಂತ ಮಾತನಾಡಿ, ಸಮಾಜದಲ್ಲಿ ಮಹಿಳೆಯರಿಗೆ ಪೂಜ್ಯ ಸ್ಥಾನ ಇದೆ. ಮಹಿಳೆಯರಿಗೆ ಸಮಾನತೆ ಹಾಗೂ ಶಿಕ್ಷಣ ನೀಡುವುದರಿಂದ ಎಲ್ಲ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯವಾಗುವುದು ಎಂದು ಹೇಳಿದರು.

ಪ್ಯಾನಲ್ ವಕೀಲರಾದ ಚೆನ್ನಮ್ಮ ಬಡ್ಡಿ ಅವರು, ವರದಕ್ಷಿಣೆ ನಿಷೇಧ ಕಾಯ್ದೆ ಹಾಗೂ ಕೌಟುಂಬಿಕ ದೌರ್ಜನ್ಯ ಕಾಯ್ದೆ ಕುರಿತು ಮಾಹಿತಿ ನೀಡಿದರು. ವಕೀಲರಾದ ವಸಂತಾ ಬಾಗೂರ ಮಾತನಾಡಿ, ಹೆಣ್ಣು ಕುಟುಂಬದ ಕಣ್ಣು, ಹೆಣ್ಣಿಲ್ಲದ ಕುಟುಂಬದ ಸ್ಥಿತಿ ಊಹಿಸಿಕೊಳ್ಳಲು ಅಸಾಧ್ಯ. ಸಮಾಜದ ಸುಧಾರಣೆ ಮಹಿಳೆಯರಿಂದ ಮಾತ್ರ ಸಾಧ್ಯ ಎಂದು ಹೇಳಿದರು.

ಶಿಗ್ಗಾಂವಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗಣೇಶ ಆರ್. ಲಿಂಗನಗೌಡ್ರ ಅಧ್ಯಕ್ಷತೆ ವಹಿಸಿ ಮಾತನಾಡಿ, ಇಲಾಖೆಯಲ್ಲಿ ಹೆಣ್ಣು ಮಕ್ಕಳಿಗೆ ಇರುವ ಯೋಜನೆಗಳು, ಮಕ್ಕಳ ಹಕ್ಕುಗಳು, ಹೆಣ್ಣುಮಕ್ಕಳು ತಮ್ಮ ಮೇಲೆ ಆಗುತ್ತಿರುವ ದೌರ್ಜನ್ಯಗಳಿಂದ ರಕ್ಷಣೆ ಮಾಡಿಕೊಳ್ಳುವ ಬಗ್ಗೆ, ಮಹಿಳಾ ಸಹಾಯವಾಣಿ ಬಗ್ಗೆ ಮಾಹಿತಿ ನೀಡಿದರು.

೨೦೨೫-೨೦೨೬ನೇ ಸಾಲಿನಲ್ಲಿ ವಯೋನಿವೃತ್ತಿ ಹೊಂದಿದ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರನ್ನು ಸನ್ಮಾನಿಸಲಾಯಿತು.

ಮೇಲ್ವಿಚಾರಕಿಯರಾದ ಶೈಲಜಾ ತಳವಾರ ಪ್ರಾಸ್ತಾವಿಕವಾಗಿ ಮಾತನಾಡಿದರು. ಲಲಿತಾ ಪಾಟೀಲ ಪ್ರಾರ್ಥಿಸಿದರು. ದೀಪಾ ಭಜಂತ್ರಿ ಸ್ವಾಗತಿಸಿದರು. ಜಯಶ್ರೀ ಕಾವಲಕೊಪ್ಪ ವಂದಿಸಿದರು. ಲಕ್ಷ್ಮೀಬಾಯಿ ಬಗಾಡೆ ಕಾರ್ಯಕ್ರಮ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನೈಸಿಯಾ ಘೋಷಣೆ ಕ್ರೈಸ್ತ ಬಂಧುಗಳಿಗೆ ವಿಶ್ವಾಸದ ಅಡಿಪಾಯ: ಬಿಷಪ್ ಜೆರಾಲ್ಡ್ ಲೋಬೊ
ಶರಣರ ತತ್ವಗಳು ಬದುಕಿಗೆ ಪ್ರೇರಣೆ: ಡಾ. ಸವಿತಾ ಸಿದ್ದನೂರ