ಸುಂಟಿಕೊಪ್ಪ: ಚರ್ಚ್ ಆಫ್ ಸೌತ್ ಇಂಡಿಯಾದ ದಕ್ಷಿಣ ಪ್ರಾಂತ್ಯದ ಸುಂಟಿಕೊಪ್ಪದ ಇಮ್ಮಾನುವೆಲ್ ದೇವಾಲಯದಲ್ಲಿ ಕ್ರಿಸ್ಮಸ್ ಆಚರಣೆ ಅಂಗವಾಗಿ ಕೊಡಗು ವಲಯದ ವಿವಿಧ ದೇವಾಲಯಗಳಿಂದ ಮಹಿಳಾ ಕ್ರಿಸ್ಮಸ್ ಆಚರಿಸಲಾಯಿತು.
ಸಮಾರಂಭವನ್ನು ಚರ್ಚ್ ಆಫ್ ಸೌತ್ ಇಂಡಿಯಾದ ದಕ್ಷಿಣ ಪ್ರಾಂತ್ಯದ ಬಿಷಪ್ ಹೇಮಚಂದ್ರ ಅವರ ಪತ್ನಿ ಮಂಗಳೂರು ಪ್ರಾಂತಿಯ ಮಹಿಳಾ ಅಧ್ಯಕ್ಷೆ ಬಾಲಭಾರತಿ ಅವರು ಉದ್ಘಾಟಿಸಿದರು.
ಮಹಿಳೆಯರು ಒಂದಾಗಿ ಸಮಾರಂಭವನ್ನು ಆಯೋಜಿಸಿರುವುದು ಉತ್ತಮ ಬೆಳವಣಿಗೆ. ಇದರಿಂದ ಅವರಲ್ಲಿರುವ ಪ್ರತಿಭೆಗಳನ್ನು ಹೊರ ತರಲು ವೇದಿಕೆ ಒದಗಿಸಿದಂತಾಗಿದೆ ಎಂದು ಅವರು ಆಭಿಪ್ರಾಯಪಟ್ಟರು.ಮಡಿಕೇರಿ ಶಾಂತಿ ದೇವಾಲಯದ ಧರ್ಮಗುರು ಮಧುಕಿರಣ್, ಕುಶಾಲನಗರದ ಮೆಡಕ್ ದೇವಾಲಯದ ಧರ್ಮಗುರು ಶ್ಯಾಮ್ವೆಲ್ ಮನೋಜ್ ಕುಮಾರ್, ಸೋಮವಾರಪೇಟೆ ಸಂತ ಜಾನ್ ದೇವಾಲಯದ ಧರ್ಮಗುರು ಪ್ರಿಯದರ್ಶಿನಿ, ಮಂಗಳೂರು ಪ್ರಾಂತಿಯ ಮಹಿಳಾ ಕಾರ್ಯದರ್ಶಿ ಸುಲೋಚನ ನಿರಂಜನ್, ಮಹಿಳಾ ವಲಯಾಧ್ಯಕ್ಷೆ ಅಕ್ಷಜೈಸನ್, ಸುಂಟಿಕೊಪ್ಪ ಇಮ್ಮಾನುವೆಲ್ ದೇವಾಲಯದ ಧರ್ಮಗುರು ಹಾಗೂ ವಲಯ ಅಧ್ಯಕ್ಷ ಜೈಸನ್ ಗೌಡ, ಆನಂದಪುರ ದೇವಾಲಯದ ಧರ್ಮಗುರು ಹಾಗೂ ವಲಯ ಕಾರ್ಯದರ್ಶಿ ಮಿಲನ್ ಚಕ್ರವರ್ತಿ, ಪಾಲಿಬೆಟ್ಟ ದೇವಾಲಯದ ಧರ್ಮಗುರು ಶಶಿಕುಮಾರ್ ಪಾಲ್ಗೊಂಡಿದ್ದರು.