ಉಡುಪಿ ನಗರಸಭೆಯಲ್ಲಿ ಮಹಿಳಾ ದಿನಾಚರಣೆ

KannadaprabhaNewsNetwork |  
Published : Mar 30, 2025, 03:00 AM IST
29ನಗರ | Kannada Prabha

ಸಾರಾಂಶ

ಉಡುಪಿ ನಗರಸಭೆಯ ವತಿಯಿಂದ ನಗರಸಭೆಯ ಸತ್ಯಮೂರ್ತಿ ಸಭಾಂಗಣದಲ್ಲಿ ಇತ್ತೀಚೆಗೆ ಮಹಿಳಾ ದಿನ ಆಚರಿಸಲಾಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ಉಡುಪಿ ನಗರಸಭೆಯ ವತಿಯಿಂದ ನಗರಸಭೆಯ ಸತ್ಯಮೂರ್ತಿ ಸಭಾಂಗಣದಲ್ಲಿ ಇತ್ತೀಚೆಗೆ ಮಹಿಳಾ ದಿನ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಮಹಿಳಾ ಆಯೋಗದ ಮಾಜಿ ಅಧ್ಷಕ್ಷೆ ಶಾಮಲಾ ಕುಂದರ್ ಮಾತನಾಡಿ, ಮಹಿಳೆಯರು ವಿವಿಧ ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸುತ್ತಿರುವ ಉದಾಹರಣೆಯನ್ನು ನೀಡಿ ಸಮಾಜದಲ್ಲಿ ಮಹಿಳಾ ಶಕ್ತಿಯ ಬಗ್ಗೆ ಮಾಹಿತಿಯನ್ನು ನೀಡಿದರು. ಹಾಗೂ ಮಹಿಳೆಯರು ಸಮಾಜದಲ್ಲಿ ಅವರಿಗಾಗಿ ಇರುವ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.ಈ ಸಂದರ್ಭ ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳಾ ಪೌರಕಾರ್ಮಿಕರು ಹಾಗೂ ಕಚೇರಿಯಲ್ಲಿ ಹೊರಗುತ್ತಿಗೆ ನೌಕರರಾಗಿ ಕಾರ್ಯ ನಿರ್ವಹಿಸುತ್ತಿರುವ ಮಹಿಳಾ ಸಿಬ್ಬಂದಿಗೆ ನಗರಸಭಾ ಅಧ್ಯಕ್ಷ ಪ್ರಭಾಕರ ಪೂಜಾರಿ ಸ್ಮರಣಿಕೆ ನೀಡಿ ಗೌರವಿಸಿದರು.

ಕಾರ್ಯಕ್ರಮದಲ್ಲಿ ನಗರಸಭಾ ಸದಸ್ಯರು ಮಹಿಳಾ ದಿನಾಚರಣೆ ಕುರಿತು ತಮ್ಮ ಅನಿಸಿಕೆ ಅಭಿಪ್ರಾಯಗಳನ್ನು ಹಂಚಿಕೊಂಡರು. ಈ ಸಂದರ್ಭದಲ್ಲಿ ನಗರಸಭಾ ಉಪಾಧ್ಯಕ್ಷೆ ರಜನಿ ಹೆಬ್ಬಾರ್, ಸ್ಥಾಯಿ ಸಮಿತಿಯ ಅಧ್ಯಕ್ಷ ಸುಂದರ್ ಕಲ್ಮಾಡಿ, ಕಂದಾಯ ಅಧಿಕಾರಿ ಸಂತೋಷ್ ಎಸ್.ಡಿ, ನಗರಸಭಾ ಸದಸ್ಯರು ಹಾಗೂ ನಗರಸಭೆಯ ಅಧಿಕಾರಿಗಳು, ಸಿಬ್ಬಂದಿ, ಮಹಿಳಾ ಪೌರಕಾರ್ಮಿಕರು ಉಪಸ್ಥಿತರಿದ್ದರು.

ಆರೋಗ್ಯ ನಿರೀಕ್ಷಕ ಪ್ರಕಾಶ್ ಪ್ರಭು ಸ್ವಾಗತಿಸಿದರು. ಪರಿಸರ ಅಭಿಯಂತರರಾದ ಸ್ನೇಹ ಕೆ.ಎಸ್. ನಿರೂಪಿಸಿದರು. ನಗರಸಭೆಯ ಸಿಬ್ಬಂದಿ ಸೌಮ್ಯ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!