ನಕ್ಷತ್ರ ಸಂಜೀವಿನಿ ಒಕ್ಕೂಟದಿಂದ ಮಹಿಳೆಯರ ಆರ್ಥಿಕ ಸ್ವಾಲಂಬನೆ: ನುಗ್ಗೇಹಳ್ಳಿ ಗ್ರಾಪಂ ಅಧ್ಯಕ್ಷ ಮಂಜುನಾಥ್

KannadaprabhaNewsNetwork |  
Published : Sep 22, 2025, 01:00 AM IST
21ಎಚ್ಎಸ್ಎನ್7 : ನುಗ್ಗೇಹಳ್ಳಿ ಗ್ರಾಮದ  ಪುರಾಣಪ್ರಸಿದ್ಧ  ಶ್ರೀ ಲಕ್ಷ್ಮಿ ನರಸಿಂಹಸ್ವಾಮಿ  ದೇವಾಲಯ ಮುಂಭಾಗದ  ಹಳೆ ಗ್ರಂಥಾಲಯದಲ್ಲಿ ನಕ್ಷತ್ರ ಸಂಜೀವಿನಿ ಮಹಿಳಾ ಒಕ್ಕೂಟದ 5ನೇ ವರ್ಷದ  ವಾರ್ಷಿಕ ಮಹಾಸಭೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷ ಎನ್ಎಸ್ ಮಂಜುನಾಥ್ ( ಸ್ವಾಮಣ್ಣ) ಉದ್ಘಾಟಿಸಿದರು. | Kannada Prabha

ಸಾರಾಂಶ

ನುಗ್ಗೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನುಗ್ಗೇಹಳ್ಳಿ ಟೌನ್ ಮತ್ತು ಹೊನ್ನ ಮಾರನಹಳ್ಳಿ, ವೀರುಪಾಕ್ಷಪುರ, ಹೂವಿನಹಳ್ಳಿ ಗ್ರಾಮಗಳ ವ್ಯಾಪ್ತಿಗಳಲ್ಲಿ ಹಾಗೂ ಇನ್ನಿತರ ಗ್ರಾಮಗಳು ಒಳಗೊಂಡಂತೆ ನಕ್ಷತ್ರ ಸಂಜೀವಿನಿ ಮಹಿಳಾ ಒಕ್ಕೂಟ ಮಹಿಳೆಯರ ಆರ್ಥಿಕ ಸ್ವಾವಲಂಬನೆಗಾಗಿ ಕಾರ್ಯನಿರ್ವಹಿಸುತ್ತಿದೆ.

ಕನ್ನಡಪ್ರಭ ವಾರ್ತೆ ನುಗ್ಗೇಹಳ್ಳಿ

ನಕ್ಷತ್ರ ಸಂಜೀವಿನಿ ಮಹಿಳಾ ಒಕ್ಕೂಟ ಸಂಘದಿಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸ್ತ್ರೀಶಕ್ತಿ ಹಾಗೂ ಸ್ವಸಹಾಯ ಸಂಘಗಳ ಮಹಿಳೆಯರ ಆರ್ಥಿಕ ಬಲವರ್ಧನೆಗೆ ಗ್ರಾಮ ಪಂಚಾಯಿತಿ ವತಿಯಿಂದ ಹೆಚ್ಚಿನ ಅನುದಾನ ನೀಡಲಾಗುತ್ತಿದೆ ಎಂದು ನುಗ್ಗೇಹಳ್ಳಿ ಗ್ರಾಪಂ ಅಧ್ಯಕ್ಷ ಎನ್. ಎಸ್. ಮಂಜುನಾಥ್ ( ಸ್ವಾಮಣ್ಣ) ತಿಳಿಸಿದರು.

ಗ್ರಾಮದ ಪುರಾಣ ಪ್ರಸಿದ್ಧ ಶ್ರೀಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯ ಮುಂಭಾಗದ ಹಳೆ ಗ್ರಂಥಾಲಯದಲ್ಲಿ ನಡೆದ ನಕ್ಷತ್ರ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

ನುಗ್ಗೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನುಗ್ಗೇಹಳ್ಳಿ ಟೌನ್ ಮತ್ತು ಹೊನ್ನ ಮಾರನಹಳ್ಳಿ, ವೀರುಪಾಕ್ಷಪುರ, ಹೂವಿನಹಳ್ಳಿ ಗ್ರಾಮಗಳ ವ್ಯಾಪ್ತಿಗಳಲ್ಲಿ ಹಾಗೂ ಇನ್ನಿತರ ಗ್ರಾಮಗಳು ಒಳಗೊಂಡಂತೆ ನಕ್ಷತ್ರ ಸಂಜೀವಿನಿ ಮಹಿಳಾ ಒಕ್ಕೂಟ ಮಹಿಳೆಯರ ಆರ್ಥಿಕ ಸ್ವಾವಲಂಬನೆಗಾಗಿ ಕಾರ್ಯನಿರ್ವಹಿಸುತ್ತಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಬ್ಸಿಡಿ ಸಾಲ ಮತ್ತು ಗ್ರಾಮ ಪಂಚಾಯಿತಿ ಮೂಲಕವೂ ಇನ್ನಿತರ ಸೌಲಭ್ಯಗಳನ್ನು ಶ್ರೀ ಶಕ್ತಿ ಹಾಗೂ ಸ್ವ ಸಹಾಯ ಸಂಘಗಳ ಸದಸ್ಯರಿಗೆ ತಲುಪಿಸುವ ಕೆಲಸವನ್ನು ಮಾಡುತ್ತಿದೆ. ಈ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳುವ ಮೂಲಕ ಮಹಿಳೆಯರು ಆರ್ಥಿಕವಾಗಿ ಸದೃಢಗೊಳ್ಳುವಂತೆ ತಿಳಿಸಿದರು.

ಮಾಜಿ ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಹಾಗೂ ನಕ್ಷತ್ರ ಸಂಜೀವಿನಿ ಮಹಿಳಾ ಒಕ್ಕೂಟದ ಕಾರ್ಯದರ್ಶಿ ಮಹದೇವಮ್ಮ ಶಂಕರ್ ಮಾತನಾಡಿ, ಕಳೆದ ಅನೇಕ ವರ್ಷಗಳಿಂದ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನಕ್ಷತ್ರ ಸಂಜೀವಿನಿ ಮಹಿಳಾ ಒಕ್ಕೂಟವು ಮಹಿಳೆಯರಿಗೆ ರಾಷ್ಟ್ರೀಕೃತ ಬ್ಯಾಂಕುಗಳ ಮೂಲಕ ಹಾಗೂ ಸಹಕಾರ ಸಂಘಗಳ ಮೂಲಕ ಸಾಲ ಸೌಲಭ್ಯ ಕಲ್ಪಿಸುವುದರ ಜೊತೆಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಚ್ಛತೆಗೂ ಹೆಚ್ಚಿನ ಆದ್ಯತೆ ನೀಡಿದೆ. ಗ್ರಾಮೀಣ ಪ್ರದೇಶದಲ್ಲಿ ಮಹಿಳೆಯರು ಆರ್ಥಿಕವಾಗಿ ಹೆಚ್ಚು ಅಭಿವೃದ್ಧಿ ಹೊಂದುವ ಸಲುವಾಗಿ ಈ ಮಹಿಳಾ ಒಕ್ಕೂಟ ಸರ್ಕಾರ ಮತ್ತು ಗ್ರಾಮ ಪಂಚಾಯಿತಿ ನಡುವೆ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಪಿಡಿಒ ಶಿವರಾಮ್, ನಕ್ಷತ್ರ ಸಂಜೀವಿನಿ ಮಹಿಳಾ ಒಕ್ಕೂಟದ ಅಧ್ಯಕ್ಷೆ ಸುಜಾತ ಮಹೇಶ್, ಖಜಾಂಚಿ ಮಂಜುಳಾ ರಾಮೇಗೌಡ, ಗ್ರಾಪಂ ಸದಸ್ಯೆ ರಮ್ಯಾ ಲೋಕೇಶ್, ಗ್ರಾಪಂ ಕಾರ್ಯದರ್ಶಿ ಭವಾನಿ, ತಾಲೂಕು ನೋಡಲ್ ಅಧಿಕಾರಿ ಪುಣ್ಯ, ಸಂಘದ ಸಂಪನ್ಮೂಲ ವ್ಯಕ್ತಿಗಳಾದ ಭಾವನ, ಯಶಸ್ವಿನಿ, ಸ್ಥಳೀಯ ಬ್ಯಾಂಕ್ ನ ನೋಡಲ್ ಅಧಿಕಾರಿ ಕೃಷ್ಣ ಸಿಂಚನ, ಎಂಬಿಕೆ ನೋಡಲ್ ಅಧಿಕಾರಿ ಅನುಪಮಾ ಮಂಜುನಾಥ್, ಎಲ್ ಸಿ ಆರ್ ಪಿಗಳಾದ ಆಶಾ ಮಹೇಶ್, ಸುನಂದ ಸುರೇಶ್, ಹೇಮಾವತಿ ಮಹಿಳಾ ಸಮಾಜದ ಅಧ್ಯಕ್ಷೆ ರೇಣುಕಮ್ಮ, ಒಕ್ಕೂಟದ ಪ್ರಮುಖರಾದ ದಾಕ್ಷಾಯಿಣಿ, ಎನ್. ಎಸ್. ಕಿರಣ್ ಕುಮಾರ್, ರೂಪ ನಟರಾಜ್, ಪಶು ಸಖಿಗಳಾದ ಪ್ರತಿಮಾ ಮಾಸ್ತಿಗೌಡ, ರಾಜೇಶ್ವರಿ ವಿರುಪಾಕ್ಷ, ಸೇರಿದಂತೆ ಸ್ತ್ರೀಶಕ್ತಿ ಸ್ವ-ಸಹಾಯ ಸಂಘಗಳ ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು ಹಾಗೂ ಇತರರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಾಲು ಸಾಲು ರಜೆ, ಪ್ರವಾಸಿ ತಾಣ ರಷ್‌
ಭೂಮಿ ಮಾರಿದ ಇನ್ಫಿ ಬಗ್ಗೆ ಕಾರ್ತಿ ತೀವ್ರ ಆಕ್ರೋಶ