ಹೆಂಗಸರ ಜಗಳ ಕೊಲೆಯಲ್ಲಿ ಅಂತ್ಯ

KannadaprabhaNewsNetwork |  
Published : Nov 23, 2023, 01:45 AM IST

ಸಾರಾಂಶ

ರಾಮನಗರ: ಅಕ್ಕಪಕ್ಕದ ಮನೆಯ ಹೆಂಗಸರ ಜಗಳ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ಬೆಂಗಳೂರು ದಕ್ಷಿಣ ತಾಲೂಕು ಕೆಂಗೇರಿ ಹೋಬಳಿ ಹೊಸಬೈರೋಹಳ್ಳಿಯ ಸ್ವಾಮಿ ಇಟ್ಟಿಗೆ ಫ್ಯಾಕ್ಟರಿಯಲ್ಲಿ ನಡೆದಿದೆ.

ರಾಮನಗರ: ಅಕ್ಕಪಕ್ಕದ ಮನೆಯ ಹೆಂಗಸರ ಜಗಳ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ಬೆಂಗಳೂರು ದಕ್ಷಿಣ ತಾಲೂಕು ಕೆಂಗೇರಿ ಹೋಬಳಿ ಹೊಸಬೈರೋಹಳ್ಳಿಯ ಸ್ವಾಮಿ ಇಟ್ಟಿಗೆ ಫ್ಯಾಕ್ಟರಿಯಲ್ಲಿ ನಡೆದಿದೆ. ಹನುಮಂತ ಪೂಜಾರಿ ಪತ್ನಿ ನಿಂಗಮ್ಮ (40)ಮೃತರು. ಮೌನೇಶ್ ಪತ್ನಿ ರತ್ನಮ್ಮ ಕೃತ್ಯ ಎಸಗಿದವರು. ಇಟ್ಟಿಗೆ ಫ್ಯಾಕ್ಟರಿಯಲ್ಲಿ ಹನುಮಂತ ಪೂಜಾರಿ, ಮೌನೇಶ್ ಸೇರಿದಂತೆ ಮೂರು ಕುಟುಂಬಗಳು ಕೆಲಸ ಮಾಡಿಕೊಂಡು ಲೇಬರ್ ಶೆಡ್‌ನಲ್ಲಿ ವಾಸವಾಗಿವೆ. ಮೌನೇಶ್ ಪತ್ನಿ ರತ್ನಮ್ಮ ನೀರು ಹಿಡಿಯುವ ಮತ್ತು ಓಡಾಡುವ ವಿಚಾರವಾಗಿ ಹನುಮಂತನ ಪತ್ನಿ ನಿಂಗಮ್ಮ ಅವರೊಂದಿಗೆ ಜಗಳ ಆಡುತ್ತಿದ್ದರು. ಕಳೆದ ನ.16ರಂದು ಜಗಳ ವಿಕೋಪಕ್ಕೆ ತಿರುಗಿ, ರತ್ನಮ್ಮ ಬಿಸಿಬಿಸಿ ನೀರನ್ನು ನಿಂಗಮ್ಮರ ಮೇಲೆ ಎರಚಿದ್ದಾಳೆ. ತಕ್ಷಣ ಆಕೆಯನ್ನು ರಾಜರಾಜೇಶ್ವರಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯಲಾದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ನಿಂಗಮ್ಮ ಪತಿ ಹನುಮಂತ ಪೂಜಾರಿ ಕುಂಬಳಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಇನ್ನೂ 1 ವರ್ಷ ಸಲೀಂ ರಾಜ್ಯ ಪೊಲೀಸ್ ಬಾಸ್‌
ಸಂಪುಟ ಪುನಾರಚನೆ ಸರ್ಕಸ್; ಶಾಸಕರು- ಸುರ್ಜೇವಾಲ ಭೇಟಿ