ಮಹಿಳಾ ಸುರಕ್ಷತೆ ಅತ್ಯಗತ್ಯ

KannadaprabhaNewsNetwork |  
Published : Mar 20, 2024, 01:17 AM IST
ಗದಗ ಹಾಲಕೇರಿ ಶಾಖಾ ಮಠದಲ್ಲಿ ಮಂಗಳವಾರ ಪಂಚಮಸಾಲಿ ಸಮಾಜದ ಮಹಿಳಾ ಘಟಕದಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಸಮಾಜದ ಸಾಧಕ ಮಹಿಳೆಯರಿಗೆ ಸನ್ಮಾನ ಸಮಾರಂಭ ನಡೆಯಿತು. | Kannada Prabha

ಸಾರಾಂಶ

ಮಹಿಳೆಯರು ಮಾಡುವ ಕೆಲಸದಲ್ಲಿ ಕಾಯಕ ನಿಷ್ಠರು ಹೀಗಾಗಿ ಹಠ ಬಿಡದಂತೆ ಅವರು ಕೈಗೊಳ್ಳುವ ಎಲ್ಲ ಕೆಲಸ ಕಾರ್ಯಗಳು ಯಶಸ್ವಿಯಾಗುತ್ತಿವೆ

ಗದಗ: ಇಂದಿನ ದಿನಮಾನಗಳಲ್ಲಿ ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದರೂ ಅಭದ್ರತೆ ಕಾಡುತ್ತಿದೆ, ಮಹಿಳಾ ಸುರಕ್ಷತೆಯು ಅತ್ಯಗತ್ಯ ಎಂದು ಹಿರಿಯ ಜೀವಿ ನೀಲಮ್ಮ ಹುಣಶಿಕಟ್ಟಿ ಹೇಳಿದರು.

ನಗರದ ಹಾಲಕೇರಿ ಶಾಖಾ ಮಠದಲ್ಲಿ ಮಂಗಳವಾರ ಪಂಚಮಸಾಲಿ ಸಮಾಜದ ಮಹಿಳಾ ಘಟಕದಿಂದ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಸಮಾಜದ ಸಾಧಕ ಮಹಿಳೆಯರಿಗೆ ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಮೂಲತಃ ಪಂಚಮಸಾಲಿ ಸಮುದಾಯದವರು ಒಕ್ಕಲಿಗರು, ರೈತಾಪಿ ಬದುಕನ್ನು ನಡೆಸುತ್ತ ಇಂದು ದೊಡ್ಡ ದೊಡ್ಡ ಉದ್ಯಮಿಗಳಾಗಿ, ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಜತೆಗೆ ಶಿಕ್ಷಣಕ್ಕೂ ಹೆಚ್ಚಿನ ಒತ್ತು ನೀಡಬೇಕೆಂದರು.

ಕಸ್ತೂರಿ ದಾನಪ್ಪಗೌಡ್ರ ಮಾತನಾಡಿ, ಮಹಿಳೆಯರು ಮಾಡುವ ಕೆಲಸದಲ್ಲಿ ಕಾಯಕ ನಿಷ್ಠರು ಹೀಗಾಗಿ ಹಠ ಬಿಡದಂತೆ ಅವರು ಕೈಗೊಳ್ಳುವ ಎಲ್ಲ ಕೆಲಸ ಕಾರ್ಯಗಳು ಯಶಸ್ವಿಯಾಗುತ್ತಿವೆ ಎಂದರು.

ಅಧ್ಯಕ್ಷತೆ ವಹಿಸಿದ ಜಯಶ್ರೀ ಉಗಲಾಟ ಮಾತನಾಡಿ, ಸಮಾಜದ ಉನ್ನತಿಗಾಗಿ ನಾವೆಲ್ಲರೂ ಶ್ರಮಿಸಬೇಕಾಗಿದೆ. ಮಕ್ಕಳಿಗೆ ಶೈಕ್ಷಣಿಕವಾಗಿ ಅಭಿವೃದ್ಧಿಪಡಿಸುವ ಸಲುವಾಗಿ ಯೋಜನೆಯೊಂದನ್ನು ರೂಪಿಸಿ ಅದನ್ನು ಯಶಸ್ಸುಗೊಳಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಸಮಾಜದ ಹಿರಿಯರಾದ ಪಾರ್ವತೆಮ್ಮ ಸಂಕಣ್ಣವರ, ನೀಲಮ್ಮ ಹುಣಶೀಕಟ್ಟಿ, ಕಸ್ತೂರಿ ದಾನಪ್ಪಗೌಡ್ರ, ಲಲಿತಾ ಪಾಟೀಲ ಹಾಗೂ ಸಾಧಕ ಮಹಿಳೆಯರಾದ ಕವಿತಾ ದಂಡಿನ, ವಿಜಯಲಕ್ಷ್ಮೀ ದಿಂಡೂರ, ನಾಗರತ್ನಾ ಮಾರನಬಸರಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಮಹಿಳೆಯರಿಗಾಗಿ ಏರ್ಪಡಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಸುಮಾ ಪಾಟೀಲ ವಚನ ನೃತ್ಯ ಹಾಗೂ ಭಾರ್ಗವಿ ಪರ್ವತಗೌಡ್ರ ಕಿತ್ತೂರ ಚೆನ್ನಮ್ಮನ ಏಕಪಾತ್ರಾಭಿನಯ, ಶಾರದಾ ಕರಮುಡಿ ಅವರ ವಚನ ಗಾಯನ ಗಮನ ಸೆಳೆಯಿತು.

ವಿಮಲಾ ಪರ್ವತಗೌಡ್ರ, ರೇಖಾ ಕಲ್ಲನಗೌಡ್ರ, ಶಾರದಾ ಬೊಮ್ಮಸಾಗರ, ಪ್ರೇಮಾ ಕುರಡಗಿ, ಉಮಾ ಕವಳಿಕಾಯಿ, ನಿರ್ಮಲಾ ಪಾಟೀಲ, ಲಲಿತಾ ಕುರಡಗಿ, ಜ್ಯೋತಿ ಉಗಲಾಟ, ಸುಜಾತಾ ತಂಗೂಡಿ, ನಿರ್ಮಲಾ ಮಟ್ಟಿ, ಸುಧಾ ಹುಣಶಿಕಟ್ಟಿ, ಮಂಜುಳಾ ತಂಗೂಡಿ, ಸಾಗರಿಕಾ ಅಕ್ಕಿ, ಶುಭಾ ಕುಂದಗೋಳ, ಗೀತಾ ಉಗಲಾಟ ಸೇರಿದಂತೆ ಪಂಚಮಸಾಲಿ ಮಹಿಳಾ ಘಟಕದ ಪದಾಧಿಕಾರಿಗಳು, ಸದಸ್ಯರು ಇದ್ದರು.

ವಿಜಯಶ್ರೀ ಇಳಕಲ್ಲ ಪ್ರಾರ್ಥಿಸಿದರು. ಜಯಶ್ರೀ ಪಾಟೀಲ ಸ್ವಾಗತಿಸಿದರು. ಶಿವಲೀಲಾ ಅಕ್ಕಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಜ್ಯೋತಿ ದಾನಪ್ಪಗೌಡ್ರ, ಸುಜಾತಾ ಗುಡಿಮನಿ, ಗಂಗಾ ತಂಗೂಡಿ, ದೀಪಾ ಉಗಲಾಟ ಪರಿಚಯಿಸಿದರು. ಶಾಂತಾ ತುಪ್ಪದ ನಿರೂಪಿಸಿದರು. ರೇಣುಕಾ ಅಮಾತ್ಯ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

80 ಶಾಸಕರ ಬೆಂಬಲ ಇದೆ ಎಂಬುದು ಪ್ರಶ್ನೆಯಲ್ಲ: ಸತೀಶ್‌
ನಮ್ಮ ಪ್ರಚೋದಿಸಬೇಡಿ- ಡಿಕೆ ಸಿಎಂ ಮಾಡಿ ಅಂತ 90 ಶಾಸಕರು ಕೇಳಿದ್ದೇವೆ : ಯತೀಂದ್ರಗೆ ಇಕ್ಬಾಲ್‌