ಸ್ತ್ರೀಯರು ಸರ್ಕಾರದ ಹಲವಾರು ಯೋಜನೆ ಸದ್ಭಳಕೆ ಮಾಡಿಕೊಂಡು ಅದಕ್ಕಾಗಿ ನೀಡಲಾಗುವ ತರಬೇತಿ ಪಡೆದು ಬದುಕಿನಲ್ಲಿ ಆರ್ಥಿಕ ಸದೃಢತೆ ಹೊಂದಬೇಕು.
ಗದಗ: ಮಹಿಳೆಯರು ಆರ್ಥಿಕವಾಗಿ ಸದೃಢತೆ ಹೊಂದಬೇಕು. ಕುಟುಂಬ ನಿರ್ವಹಣೆ, ಸಣ್ಣ ಉದ್ಯಮ ಸಹಕಾರಿಯಾಗಿದ್ದು, ಸರ್ಕಾರದ ತರಬೇತಿ ಪಡೆದು ಯಶಸ್ವಿ ಸ್ವ-ಉದ್ಯೋಗಿಗಳಾಗಬೇಕೆಂದು ಜಿಪಂ ಗ್ರಾಮೀಣ ಮತ್ತು ಸಣ್ಣ ಉದ್ಯಮ ವಿಭಾಗದ ಉಪನಿರ್ದೇಶಕ ಕೈಲಾಸ ಮೂರ್ತಿ ಹೇಳಿದರು.
ಅವರು ರಾಜ್ಯ ಜವಳಿ ಮೂಲಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತ ಮಹೇಶ್ವರಿ ವಿವಿದೋದ್ದೇಶಗಳ ಮಹಿಳಾ ಮಂಡಳ ಸಹಯೋಗದಲ್ಲಿ ನಡೆದ ಜವಳಿ ವಲಯದಲ್ಲಿ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮ ಸೂಯಿಂಗ್ ಮಷಿನ್ ಆಪರೇಟರ್ (ಉಚಿತ ತರಬೇತಿ) ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಸ್ತ್ರೀಯರು ಸರ್ಕಾರದ ಹಲವಾರು ಯೋಜನೆ ಸದ್ಭಳಕೆ ಮಾಡಿಕೊಂಡು ಅದಕ್ಕಾಗಿ ನೀಡಲಾಗುವ ತರಬೇತಿ ಪಡೆದು ಬದುಕಿನಲ್ಲಿ ಆರ್ಥಿಕ ಸದೃಢತೆ ಹೊಂದಬೇಕು. ಇದರಿಂದ ಕುಟುಂಬ ನಿರ್ವಹಣೆಗೆ ಸಹಾಯಕವಾಗಲಿದೆ ಎಂದರು.
ಕೈಗಾರಿಕಾ ವಿಸ್ತರಣಾ ಅಧಿಕಾರಿ ಬಿ.ಎಸ್. ಮಳಲಿ ಮಾತನಾಡಿ, ಮಹಿಳೆಯರಿಗಾಗಿಯೇ ಹಲವಾರು ಸ್ವಉದ್ಯೋಗದ ಯೋಜನೆಗಳಿದ್ದು, ಅದಕ್ಕಾಗಿ ನಿರ್ದಿಷ್ಟ ತರಬೇತಿ ಸರ್ಕಾರದ ವತಿಯಿಂದ ಉಚಿತವಾಗಿ ನೀಡಲಾಗುತ್ತಿದ್ದು, ತರಬೇತಿ ಪಡೆದು ಸರ್ಕಾರದಿಂದ ಸಿಗುವ ಆರ್ಥಿಕ ಸೌಲಭ್ಯ ಉಪಯೋಗಿಸಿಕೊಂಡು ಸ್ವ-ಉದ್ಯೋಗಿಗಳಾಗಿ ಎಂದರು.
ಪ್ರೀತಿ ಶಿವಪ್ಪಯ್ಯನಮಠ ಮಾತನಾಡಿ, ಮಹಿಳೆಯರು ತಮ್ಮ ಕುಶಲತೆಗೆ ಸಂಬಂಧಿಸಿದ ಆಸಕ್ತಿವುಳ್ಳ ವಿವಿಧ ತರಬೇತಿ ಪಡೆದು ಸಣ್ಣ ಬಂಡವಾಳದಿಂದ ಪ್ರಾರಂಭಿಸಿ ಬದುಕಿನಲ್ಲಿ ಮುನ್ನಡೆಯಬೇಕು ಎಂದರು.
ಈ ವೇಳೆ ಮೆಕ್ಸಿಕೋದ ಯುನಿವರ್ಸಿಟಿ ಆಫ್ ಟೋಲ್ಸಾ ಸಂಸ್ಥೆಯಿಂದ ಗೌರವ ಡಾಕ್ಟರೇಟ್ ಪಡೆದ ಜಯಶ್ರೀ ಹಿರೇಮಠ ಅವರನ್ನು ಸನ್ಮಾನಿಸಲಾಯಿತು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.