ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ನಗರದ 23ನೇ ವಾರ್ಡಿನ ಹಳೆ ಕೆನರಾ ಬ್ಯಾಂಕ್ ಕಟ್ಟಡದಲ್ಲಿನ ಐ ಸಾಪ್ಟೆಕ್ ಅಕಾಡಮಿ ಪ್ರೈ ಲಿಮಿಟೆಡ್ ವತಿಯಿಂದ ನಡೆದ ಕೌಶಲ ಕರ್ನಾಟಕ ಯೋಜನೆಯಡಿ ಮೂರು ತಿಂಗಳ ಹೊಲಿಗೆ ತರಬೇತಿ ಪಡೆದ 90 ಮಂದಿ ಮಹಿಳೆಯರಿಗೆ ಪ್ರಮಾಣ ಪತ್ರಗಳನ್ನು ವಿತರಿಸಿ ಮಾತನಾಡಿದರು.
ಸ್ವಂತ ಉದ್ಯಮ ಆರಂಭಿಸಿಮಹಿಳೆಯರಿಗಾಗಿ ಸರ್ಕಾರ ಹತ್ತು ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸಿವೆ. ಈ ಯೋಜನೆಗಳ ಪ್ರಯೋಜನ ಪಡೆಯುವುದರ ಜೊತೆಗೆ ತಾವು ಮೂರು ತಿಂಗಳ ಹೊಲಿಗೆ ತರಬೇತಿ ಪಡೆದ ನೀವು ತಮ್ಮ ಸ್ವಂತ ಉದ್ಯಮಿಗಳನ್ನ ಪ್ರಾರಂಭಿಸುವಂತಹ ಸಶಕ್ತ ಮಹಿಳೆಯರಾಗಿ ಹೊರಹೊಮ್ಮಬೇಕು. ಆ ಮೂಲಕ ವಿದ್ಯಾವಂತ ನಿರುದ್ಯೋಗಿಗಳಿಗೆ ಯಾವುದೇ ಉದ್ಯೋಗದ ಖಾತ್ರಿ ಇಲ್ಲದವರಿಗೆ ನಮ್ಮ ಕೈಲಾದ ಸಹಾಯ ಸಹಾನುಭೂತಿಯನ್ನ ನೀಡುವುದರ ಜೊತೆಗೆ ಅವರನ್ನು ಸಹ ಸಮಾಜದ ಮುಖ್ಯ ವಾಹಿನಿಗೆ ತರಬೇಕು ಎಂದರು.
ಮಹಿಳೆಗೂ ಸಾಕಷ್ಟು ಅವಕಾಶ
ಐ ಸಾಪ್ಟೆಕ್ ಅಕಾಡಮಿ ಪ್ರೈ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕ ಜಿ.ಗೋವಿಂದ್ ಮಾತನಾಡಿ, ಹಿಂದೆ ಹೆಣ್ಣು ಮಗು ಹುಟ್ಟಿದರೆ ಮೂಗು ಮುರಿಯುವ ಕಾಲವಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಇದು ಬದಲಾಗಿದೆ. ಸಮಾಜದಲ್ಲಿ ಹೆಣ್ಣಿಗೆ ಗಂಡಿನಷ್ಟೇ ಸಮಾನ ಅವಕಾಶಗಳಿದ್ದು, ಹೆಣ್ಣು ಮಕ್ಕಳಿಗೆ ಒಳ್ಳೆಯ ಮತ್ತು ಕಡ್ಡಾಯ ಶಿಕ್ಷಣ ನೀಡುವಂತಾಗಬೇಕು, ಮಹಿಳೆಯರು ದುಡಿಯುವಂತಾಗಬೇಕು. ದುಡಿದು ಬದುಕಿದರೆ ಆರ್ಥಿಕವಾಗಿ ಸ್ವಾವಲಂಬಿಗಳಾಗಬಹುದು, ಇದರಿಂದ ಆತ್ಮಾಭಿಮಾನ ಮತ್ತು ಆತ್ಮಸ್ಥೈರ್ಯ ಹೆಚ್ಚಲಿದೆ ಎಂದರು.ಭಾರತದ ಸಂವಿಧಾನದಲ್ಲಿ ಮಹಿಳೆಯರು ಸೇರಿದಂತೆ ಪ್ರತಿಯೊಬ್ಬರಿಗೂ ಸಮಾನ ಅವಕಾಶಗಳು ಇದ್ದು, ಅವುಗಳನ್ನು ಬಳಸಿಕೊಳ್ಳುವಂತಾಗಬೇಕು. ಕಾನೂನಿನಲ್ಲಿ ಮಹಿಳೆಯರಿಗೆ ವಿಶೇಷ ರಕ್ಷಣೆ ಒದಗಿಸಿದೆ. ಇಂದಿರಾ ಗಾಂಧಿ, ಕಲ್ಪನಾ ಚಾವ್ಲಾ ಮತ್ತಿತರ ಮಹಿಳೆಯರು ರಾಷ್ಟ್ರದಲ್ಲಿ ಮಹಾನ್ ಸಾಧನೆ ಮಾಡಿದ್ದಾರೆ. ಅಂತಹವರ ಹಾದಿಯಲ್ಲಿ ಮುನ್ನುಗ್ಗಬೇಕು ಎಂದರು.
ಕುಲಸಚಿವರಿಗೆ ಸನ್ಮಾನಇದೆ ವೇಳೆ ಸಾಫ್ಟೇಕ್ ಗೋವಿಂದ ಅವರು ಬೆಂಗಳೂರು ವಿವಿಗೆ ನೂತನವಾಗಿ ನೇಮಕಗೊಂಡ ಕುಲಸಚಿವ ಡಾ. ಎನ್. ಲೋಕನಾಥ್ ಹಾಗೂ ವಾಲ್ಮೀಕಿ ರತ್ನ ಪ್ರಶಸ್ತಿ ಪಡೆದ ಪತ್ರಕರ್ತ ಎಂ.ಕೃಷ್ಣಪ್ಪ ಅವರನ್ನು ಗೌರವಿಸಿ ಸನ್ಮಾನಿಸಿದರು.
ಸಂದರ್ಭದಲ್ಲಿ ಐ ಸಾಫ್ಟಕ್ ಅಕಾಡೆಮಿ ಪ್ರವೇಟ್ ಲಿ. ವ್ಯವಸ್ಥಾಪಕ ನಿರ್ದೇಶಕ ಸಾಫ್ಟಕ್ ಗೋವಿಂದ್, ಆಡಳಿತ ವಿಭಾಗದ ಶ್ವೇತ, ಗೌತಮಿ, ಅರ್ಪಿತ, ಚೈತನ್ಯ, ಬೋಧನಾ ವಿಭಾಗದ ಶಶಿಕಲಾ, ರಮ್ಯಾ ವೇಧ, ನಾಜಿಯಾ, ಮತ್ತಿತರರು ಇದ್ದರು.