ಮುಂಡರಗಿ: ಅನ್ನ, ನೀರು, ಜೀವ ಕೊಟ್ಟ ಮೋದಿ ಅವರನ್ನು ಮಹಿಳೆಯರು ಎಂದಿಗೂ ಮರೆಯಬಾರದು ಎಂದು ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಪತ್ನಿ ಚೆನ್ನಮ್ಮ ಬೊಮ್ಮಾಯಿ ಹೇಳಿದರು.
ಗರೀಬ್ ಕಲ್ಯಾಣ ಯೋಜನೆಯಲ್ಲಿ ದೇಶದ 80 ಕೋಟಿ ಬಡವರಿಗೆ ಉಚಿತ ಪಡಿತರ, ಜಲ್ ಜೀವನ್ ಮಿಷನ್ ಯೋಜನೆಯಡಿ ದೇಶದ 11.88 ಕೋಟಿ ಕುಟುಂಬಗಳಿಗೆ ಮನೆ ಮನೆಗೆ ಶುದ್ಧ ಕುಡಿಯುವ ನೀರು, ಭಾರತದ ಪ್ರತಿಯೊಬ್ಬ ನಾಗರಿಕನಿಗೂ ಉಚಿತವಾಗಿ ಕೋವಿಡ್ ಲಸಿಕೆ ಹೀಗೆ ಹಲವು ಯೋಜನೆಗಳನ್ನು ನೀಡಿದ್ದಾರೆ ಎಂದರು.
10 ವರ್ಷಗಳ ಹಿಂದೆ ಅಭಿವೃದ್ಧಿಯಲ್ಲಿ ನಮ್ಮ ದೇಶ ಸಾಕಷ್ಟು ಹಿಂದಿತ್ತು. ಈಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶದ ಸಮಗ್ರ ಅಭಿವೃದ್ಧಿಯ ಕುರಿತು ಮಾತನಾಡಿಕೊಳ್ಳುವಂತಾಗಿದೆ. ಇದಕ್ಕೆಲ್ಲ ಪ್ರಮುಖ ಕಾರಣ ಪ್ರಧಾನಿ ನರೇಂದ್ರ ಮೋದಿ. ಅಂತಹ ಅಭಿವೃದ್ಧಿ ಹರಿಕಾರ ಮತ್ತೊಮ್ಮೆ ಪ್ರಧಾನಿಯಾಗಬೇಕಾದರೆ ಹಾವೇರಿ ಕ್ಷೇತ್ರದಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಕಮಲದ ಗುರುತಿಗೆ ಮತಹಾಕುವ ಮೂಲಕ ಮೋದಿ ಅವರಿಗೆ ಬಲ ತುಂಬಬೇಕು ಎಂದು ಮನವಿ ಮಾಡಿಕೊಂಡರು.ಜಿಲ್ಲಾ ಬಿಜೆಪಿ ಮಹಿಳಾ ಘಟಕದ ಅಧ್ಯಕ್ಷೆ ನಿರ್ಮಲಾ ಕೊಳ್ಳಿ ಮಾತನಾಡಿ, ನಮಗೆಲ್ಲ ಮೋದಿ ಅವರ ಅನ್ನ ಮತ್ತು ಜೀವದ ಋಣ ತೀರಿಸಲು ಸದಾವಕಾಶ ಒದಗಿ ಬಂದಿದೆ. ನಾವು 10 ವರ್ಷಗಳ ಅಭಿವೃದ್ಧಿ ಸಾಧನೆ ಪಟ್ಟಿ ನೀಡಿ ಮತ ಕೇಳುತ್ತೇವೆ. ಕೇವಲ ಪೊಳ್ಳು ಭರವಸೆಗಳ ಆಸೆ ಹಚ್ಚಿಸಿ ಮತ ಕೇಳುವುದಿಲ್ಲ ಎಂದರು.
ಪುರಸಭೆ ಮಾಜಿ ಅಧ್ಯಕ್ಷ ಕವಿತಾ ಉಳ್ಳಾಗಡ್ಡಿ, ಸದಸ್ಯೆ ಜ್ಯೋತಿ ಹಾನಗಲ್, ಮುಂಡರಗಿ ಬಿಜೆಪಿ ಮಹಿಳಾ ಮಂಡಲದ ಅಧ್ಯಕ್ಷೆ ಪವಿತ್ರಾ ಕಲ್ಲಕುಟಗರ್ ಮಾತನಾಡಿದರು.
ಜಿಲ್ಲಾ ಬಿಜೆಪಿ ಮಹಿಳಾ ಬಿಜೆಪಿ ಘಟಕದ ಜಯಶ್ರೀ ಉಗಲಾಟದ, ಅಶ್ವಿನಿ ಜರತಾರ್, ವಿಜಯಲಕ್ಷ್ಮಿ ಮಾನ್ವಿ, ವಂದನಾ, ರತ್ನಾ ಕುರುಗೋಡು, ಕಸ್ತೂರಿ, ಸುನೀತಾ ಹಾರೋಗೇರಿ, ವಿನೋದಾ ಕಳಸಾಪುರ, ಆಶಾ ರೋಣದ, ಮೇರಿಜಾನ್ ಪೂಜಾರ, ಪುಷ್ಪಾ ಉಕ್ಕಲಿ, ವೀಣಾ ಬೂದಿಹಾಳ, ರಾಧಾ ಬಾರಕೇರ, ರೇಖಾ ದೇಸಾಯಿ, ಮಂಜುಳಾ ಹಮ್ಮಿಗಿಮಠ ಉಪಸ್ಥಿತರಿದ್ದರು.ಪ್ರಭಾವತಿ ಬೆಳವಣಕಿಮಠ ಕಾರ್ಯಕ್ರಮ ನಿರೂಪಿಸಿದರು. ಅರುಣಾ ಪಾಟೀಲ ವಂದಿಸಿದರು. ಆನಂತರ ಪಟ್ಟಣದ ವಿವಿಧ ವಾರ್ಡ್ಗಳಿಗೆ ತೆರಳಿ ಮತ ಯಾಚಿಸಿದರು.