ಮಹಿಳೆಯರು ಸಂಸಾರ ನಿರ್ವಹಣೆ ಜೊತೆಗೆ ಸಮಾಜದ ಮುಖ್ಯವಾಹಿನಿಗೂ ಬರಬೇಕು

KannadaprabhaNewsNetwork |  
Published : May 31, 2026, 01:45 AM IST
ಫೋಟೋ : 30 ಹೆಚ್‌ಎಸ್‌ಕೆ 3 ಮತ್ತು ೪43: ಹೊಸಕೋಟೆ ತಾಲೂಕಿನ ದೊಡ್ಡಘಟ್ಟಿಗನಬ್ಬೆ ಗ್ರಾಮ ಪಂಚಾಯತ್ ವತಿಯಿಂದ ಆಯೋಜಿಸಿದ್ದ ಮಹಿಳಾ ಕ್ರೀಡಾಕೂಟವನ್ನು ಶಾಸಕ ಶರತ್ ಬಚ್ಚೇಗೌಡ ಪತ್ನಿ ಪ್ರತಿಭಾ ಶರತ್ ಉದ್ಘಾಟಿಸಿದರು. | Kannada Prabha

ಸಾರಾಂಶ

ಹೊಸಕೋಟೆ: ಮಹಿಳೆಯರು ಸಂಸಾರ ನಿರ್ವಹಣೆ ಜೊತೆಜೊತೆಗೆ ಸಮಾಜದ ಮುಖ್ಯವಾಹಿನಿಗೆ ಬರಲು ಒಂದು ಹೆಜ್ಜೆ ಮುಂದಡಿ ಇಡಬೇಕು ಎಂದು ಟೀಮ್‌ ಎಸ್‌ಬಿಜಿ ಸಂಚಾಲಕಿ ಪ್ರತಿಭಾ ಶರತ್ ಬಚ್ಚೇಗೌಡ ತಿಳಿಸಿದರು

ಹೊಸಕೋಟೆ: ಮಹಿಳೆಯರು ಸಂಸಾರ ನಿರ್ವಹಣೆ ಜೊತೆಜೊತೆಗೆ ಸಮಾಜದ ಮುಖ್ಯವಾಹಿನಿಗೆ ಬರಲು ಒಂದು ಹೆಜ್ಜೆ ಮುಂದಡಿ ಇಡಬೇಕು ಎಂದು ಟೀಮ್‌ ಎಸ್‌ಬಿಜಿ ಸಂಚಾಲಕಿ ಪ್ರತಿಭಾ ಶರತ್ ಬಚ್ಚೇಗೌಡ ತಿಳಿಸಿದರು.

ತಾಲೂಕಿನ ಕಸಬಾ ಹೋಬಳಿಯ ದೊಡ್ಡಗಟ್ಟಿಗನಬ್ಬೆ ಗ್ರಾಪಂ ಹಮ್ಮಿಕೊಂಡಿದ್ದ ಮಹಿಳಾ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದ ಅವರು, ಮಹಿಳೆಯರಿಗೆ ಸಂಸಾರ, ಮಕ್ಕಳು, ಕುಟುಂಬ ನಿರ್ವಹಣೆ ಸಾಮಾನ್ಯ. ಅದನ್ನು ಹೊರತುಪಡಿಸಿ ಇತರೆ ಚಟುವಟಿಕೆಗಳಲ್ಲಿ ಭಾಗವಹಿಸಬೇಕು. ಈ ನಿಟ್ಟಿನಲ್ಲಿ ಶಾಸಕ ಶರತ್ ಬಚ್ಚೇಗೌಡರು ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿ ಮಹಿಳಾ ಗ್ರಾಮಸಭೆ ಪ್ರಯುಕ್ತ ಮಹಿಳಾ ಕ್ರೀಡಾಕೂಟವನ್ನು ಆಯೋಜಿಸಿ ಮಹಿಳೆಯರಿಗೆ ಸೂಕ್ತ ವೇದಿಕೆ ನಿರ್ಮಿಸಿಕೊಟ್ಟಿದ್ದಾರೆ ಎಂದರು.

ಶೇ.೯೦ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಹೋಬಳಿ ಮಟ್ಟದ ಕಾರ್ಯಕ್ರಮದಲ್ಲಿ ಶಾಸಕ ಶರತ್ ಬಚ್ಚೇಗೌಡರು ಪ್ರತಿಭಾ ಪುರಸ್ಕಾರ ಪ್ರಧಾನ ಮಾಡಲಿದ್ದಾರೆ. ಈ ಮೂಲಕ ಗ್ರಾಮೀಣ ವಿದ್ಯಾರ್ಥಿಗಳನ್ನು ಶೈಕ್ಷಣಿಕವಾಗಿ ಪ್ರೋತ್ಸಾಹಿಸಲಾಗುವುದು ಎಂದರು.

ಗ್ರಾಪಂ ಅಭಿವೃದ್ದಿ ಅಧಿಕಾರಿ ಸುಬ್ರಹ್ಮಣಿ ಮಾತನಾಡಿ, ಗ್ರಾಮೀಣ ಮಹಿಳೆಯರನ್ನು ಸಂಘಟಿಸುವುದು ಹಾಗೂ ಸಮುದಾಯ ಕಾರ್ಯಕ್ರಮಗಳಲ್ಲಿ ಧೈರ್ಯವಾಗಿ ಭಾಗವಹಿಸಲು ಗ್ರಾಪಂ ಮಟ್ಟದಲ್ಲಿ ಕ್ರೀಡಾಕೂಟ ಆಯೋಜಿಸಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಗ್ರಾಪಂ ಆಡಳಿತಾಧಿಕಾರಿ ಡಾ.ಮಂಜುನಾಥ್, ಬಿಎಂಆರ್‌ಡಿಎ ಮಾಜಿ ಅಧ್ಯಕ್ಷ ನಾರಾಯಣಗೌಡ, ಪಿಡಿಒ ಸುಬ್ರಮಣಿ, ಕಾರ್ಯದರ್ಶಿ ಚೌಡರೆಡ್ಡಿ, ಗ್ರಾಪಂ ಮಾಜಿ ಸದಸ್ಯ ಕಣ್ಣೂರಹಳ್ಳಿ ಮುನಿಯಪ್ಪ, ಕೆಪಿಸಿಸಿ ಪರಿಶಿಷ್ಠ ವಿಭಾಗದ ರಾಜ್ಯ ಸಂಚಾಲಕ ಜಿನ್ನಾಗರ ಜಗನ್ನಾಥ್ ಇತರರು ಹಾಜರಿದ್ದರು.

ಫೋಟೋ : 30 ಹೆಚ್‌ಎಸ್‌ಕೆ 3 ಮತ್ತು ೪4

ಹೊಸಕೋಟೆ ತಾಲೂಕಿನ ದೊಡ್ಡಘಟ್ಟಿಗನಬ್ಬೆ ಗ್ರಾಪಂ ಆಯೋಜಿಸಿದ್ದ ಮಹಿಳಾ ಕ್ರೀಡಾಕೂಟವನ್ನು ಟೀಮ್‌ ಎಸ್‌ಬಿಜಿ ಸಂಚಾಲಕಿ ಪ್ರತಿಭಾ ಶರತ್ ಉದ್ಘಾಟಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎನ್‌ಸಿಸಿ ಕೆಡೆಟ್‌ಗಳಿಗೆ ತಿಂಗಳ ಕಾಲ ನಗರದಲ್ಲಿ ತರಬೇತಿ
ರಸ್ತೆ, ಸೇತುವೆಗಳ ದುರಸ್ತಿಗೆ ₹131 ಕೋಟಿ ಅನುದಾನ