ಮಹಿಳೆಯರು ಸಮಾಜದ ಅಭಿವೃದ್ದಿಗೆ ಜೊತೆಗೆ ಆರೋಗ್ಯದ ಕಡೆ ನಿಗಾ ವಹಿಸಿ : ಡಾ. ಶ್ವೇತಾ ಶಶಿಧರ್

KannadaprabhaNewsNetwork |  
Published : Mar 31, 2026, 02:15 AM IST
ಶ್ರಿ ಬಸವರಾಜೇಂದ್ರ ಅಸ್ಪತ್ರೆಯ ಸ್ತ್ರೀ ರೋಗ ತಜ್ಞೆ ಡಾ. ಶ್ವೇತಾ ಶಶಿಧರ್ ತಿಳಿಸಿದರು. | Kannada Prabha

ಸಾರಾಂಶ

ಕೇಂದ್ರ ಸರ್ಕಾರ ಜನಪರ ಯೋಜನೆಗಳನ್ನು ತಿಳಿಸುವ ಜೊತೆಗೆ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು. ಪ್ರಧಾನಿ ನರೇಂದ್ರ ಮೋದಿ ಅವರು ಶೇ. ೩೩ರಷ್ಟು ಮೀಸಲಾತಿ ಕಲ್ಪಿಸಿ, ಮುಖ್ಯವಾಹಿನಿ ತರಲು ಶ್ರಮಿಸುತ್ತಿದ್ದಾರೆ.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಮಹಿಳೆಯರು ಎಲ್ಲಾ ರಂಗದಲ್ಲಿಯೂ ಸಹ ಮುಂಚೂಣಿಯಲ್ಲಿದ್ದು, ಇದರ ಜೊತೆಗೆ ತಮ್ಮ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ಹೊಂದಿ, ಆರೋಗ್ಯವಂತ ಸಮಾಜ ನಿರ್ಮಾಣ ಮಾಡಲು ಗಮನಹರಿಸಬೇಕು ಎಂದು ಶ್ರಿ ಬಸವರಾಜೇಂದ್ರ ಆಸ್ಪತ್ರೆಯ ಸ್ತ್ರೀ ರೋಗ ತಜ್ಞೆ ಡಾ. ಶ್ವೇತಾ ಶಶಿಧರ್ ತಿಳಿಸಿದರು.

ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಮಹಿಳಾ ಮೋರ್ಚಾದಿಂದ ನಡೆದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ, ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಮಹಿಳೆಯರಿಗೆ ಮೀಸಲಾತಿ ಜಾರಿ ಹಾಗೂ ಮಹಿಳೆಯರು ಹೆಚ್ಚಿನ ಪ್ರಮಾಣದಲ್ಲಿ ವಿದ್ಯಾವಂತರಾಗುತ್ತಿದ್ದಾರೆ. ಇದರ ಪರಿಣಾಮ ಅವರಿಗೆ ಸಾಮಾಜಿಕ ಜವಾಬ್ದಾರಿ ಹೆಚ್ಚಾಗುತ್ತಿದೆ. ಮನೆ ಹಾಗೂ ಹೊರಗಡೆಯೂ ಮಹಿಳೆ ಹೆಚ್ಚು ದುಡಿಯುತ್ತಿರುವ ಕಾರಣದಿಂದ ತಮ್ಮ ವೈಯಕ್ತಿಕ ಆರೋಗ್ಯ ಕಡೆ ಗಮನ ನೀಡಲು ಸಾಧ್ಯವಾಗುತ್ತಿಲ್ಲ. ಇದನ್ನು ನಿರ್ಲಕ್ಷ್ಯ ಮಾಡದೇ ಪ್ರತಿಯೊಬ್ಬರೂ ತಮ್ಮ ಆರೋಗ್ಯ ಕಡೆ ನಿಗಾ ವಹಿಸಬೇಕು. ಸಣ್ಣ ಪುಟ್ಟ ಸಮಸ್ಯೆಗಳು ಕಾಣಿಸಿಕೊಂಡ ತಕ್ಷಣ ವೈದ್ಯರ ಸಲಹೆ, ಮಾರ್ಗದರ್ಶನ ಪಡೆದುಕೊಳ್ಳುವುದು ಒಳಿತು ಎಂದು ಸಲಹೆ ನೀಡಿದರು.

ವಿಶೇಷವಾಗಿ ಮಹಿಳೆಯರು ೪೦ ವರ್ಷ ದಾಟುತ್ತಿದ್ದಂತೆ ಅನೇಕ ಸಮಸ್ಯೆಗಳು ಬರುತ್ತಿವೆ. ಪ್ರಮುಖವಾಗಿ ಗರ್ಭಕೋಶ ಕ್ಯಾನ್ಸರ್‌ನಿಂದ ಬಳಲುವವರ ಸಂಖ್ಯೆ ಹೆಚ್ಚಿದೆ. ಹೀಗಾಗಿ ತಾವೆಲ್ಲರೂ ಆಗಿದ್ದಾಂಗ್ಗೆ ಪರೀಕ್ಷೆ ಮಾಡಿಸಿಕೊಳ್ಳುವ ಮೂಲಕ ಪ್ರಾಥಮಿಕ ಹಂತದಲ್ಲಿಯೇ ಚಿಕಿತ್ಸೆಯನ್ನು ಪಡೆದುಕೊಳ್ಳಬೇಕು. ಕೇಂದ್ರ ಸರ್ಕಾರ ಕ್ಯಾನ್ಸರ್ ತಡೆಯುವ ಸಲುವಾಗಿ ಉಚಿತವಾಗಿ ಹೆಣ್ಣು ಮಕ್ಕಳಿಗೆ ಲಸಿಕೆ ಹಾಕುತ್ತಿದೆ. ಇದನ್ನು ತಪ್ಪದೇ ಮಕ್ಕಳಿಗೆ ಹಾಕಿಸಿ, ಇದರಿಂದ ಕ್ಯಾನ್ಸರ್‌ ತಡೆಯಲು ಸಾಧ್ಯವಿದೆ. ವೈದ್ಯೆಯಾಗಿ ನಾನು ಸಹ ನಮ್ಮ ಮಕ್ಕಳಿಗೆ ಈ ಲಸಿಕೆ ಹಾಕಿಸಿದ್ದೇನೆ. ಯಾವುದೇ ಅಪಪ್ರಚಾರಕ್ಕೆ ಕಿವಿಗೊಡಬೇಡಿ ಎಂದರು.

ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ನಂತರ ಬಹಳಷ್ಟು ಗಮನಾರ್ಹ ಬದಲಾವಣೆ ಮಾಡಿದೆ. ಮಹಿಳೆಯರ ಸ್ವಾವಲಂಬನೆ ಬದುಕಿಗಾಗಿ ಅನೇಕ ಯೋಜನೆಗಳು ಜಾರಿಯಲ್ಲಿವೆ. ಜೊತೆಗೆ ಮಹಿಳೆಯರ ಸಬಲೀಕರಣಕ್ಕಾಗಿ ಕೌಶಲ್ಯ ತರಬೇತಿ ನೀಡಿ, ಸ್ವಂತ ಉದ್ಯೋಗವನ್ನು ಹೊಂದಲು ಸಹಕಾರ ನೀಡಿದೆ ಎಂದರು.

ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಹಾಗೂ ಮಹಿಳಾ ಮೋರ್ಚಾದ ಪ್ರಭಾರಿ ರೂಪೇಶ್ ಮಾತನಾಡಿ, ಕೇಂದ್ರ ಸರ್ಕಾರ ಜನಪರ ಯೋಜನೆಗಳನ್ನು ತಿಳಿಸುವ ಜೊತೆಗೆ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು. ಪ್ರಧಾನಿ ನರೇಂದ್ರ ಮೋದಿ ಅವರು ಶೇ. ೩೩ರಷ್ಟು ಮೀಸಲಾತಿ ಕಲ್ಪಿಸಿ, ಮುಖ್ಯವಾಹಿನಿ ತರಲು ಶ್ರಮಿಸುತ್ತಿದ್ದಾರೆ ಎಂದರು.

ಮಹಿಳಾ ಮೋರ್ಚಾ ಅಧ್ಯಕ್ಷೆ ಮಲೆಯೂರು ಕಮಲಮ್ಮ ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರತಿ ವರ್ಷವೂ ವಿಶ್ವ ಮಹಿಳಾ ದಿನವನ್ನು ಆಚರಣೆ ಮಾಡುವ ಜೊತೆಗೆ ಸಾಧಕ ಮಹಿಳೆಯರನ್ನು ಗುರುತಿಸಿ ಸನ್ಮಾನಿಸಲಾಗುತ್ತಿದೆ. ಈ ಬಾರಿ ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಡಾ. ಶ್ವೇತಾ ಶಶಿಧರ್, ರೈಫಲ್ ಶ್ಯೂಟಿಂಗ್ ನಲ್ಲಿ ಪ್ರಶಸ್ತಿ ಪಡೆದಿರುವ ಸತ್ಯಭಾಮ ಅವರನ್ನು ಸನ್ಮಾನಿಸಲಾಗುತ್ತದೆ. ಇಂಥ ಸಾಧಕರ ಪರಿಚಯವನ್ನು ಮಾಡುವ ಜೊತೆಗೆ ಮಹಿಳೆಯರನ್ನು ಸಂಘಟಿಸಲು ಶ್ರಮಿಸಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಎಂ. ಶೈಲಾ, ಮಮತಾ, ಜಿಲ್ಲಾ ಉಪಾಧ್ಯಕ್ಷರಾದ ಪದ್ಮ ಉತ್ತುವಳ್ಳಿ, ಜಯಶೀಲಾ ರಾಜಶೇಖರ್, ಕಾಗಲವಾಡಿ ಜ್ಯೋತಿ, ಮಂಡಲದ ಅಧ್ಯಕ್ಷರಾದ ಚಾ.ನಗರ ಉಷಾ, ಕೊಳ್ಳೇಗಾಲ ಕಲಾವತಿ, ಯಳಂದೂರು ಸುಧಾ, ಮಹದೇಶ್ವರ ಮಂಡಲದ ಮೀನಾ, ಉಪಾಧ್ಯಕ್ಷೆ ಕುಮಚಹಳ್ಳಿ ಪಾರ್ವತಮ್ಮ, ಅಂಬಿಕಾ, ಮೊದಲಾದವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜೀವಮಾನದ ಕಲಾಶ್ರೇಷ್ಠ ಸಾಧಕರ ಪ್ರಶಸ್ತಿಗೆ ನಾಡೋಜ ಡಾ.ವಿ.ಟಿ. ಕಾಳೆ ಆಯ್ಕೆ
ಸಾಂಸ್ಕೃತಿಕ ಪರಂಪರೆ ಉಳಿಸಿಕೊಳ್ಳಲು ರಂಗಭೂಮಿ ಸಹಕಾರಿ: ಜೆ. ನರಸಿಂಹಮೂರ್ತಿ