ಕೆಲಸ ಮಾಡಿ ಗೌರವ ಉಳಿಸಿಕೊಳ್ಳಿ: ಎಂಜಿನಿಯರ್‌ಗಳಿಗೆ ಪೊನ್ನಣ್ಣ ಸೂಚನೆ

KannadaprabhaNewsNetwork |  
Published : Feb 26, 2024, 01:33 AM IST
ಚಿತ್ರ : 25ಎಂಡಿಕೆ7 : ಭಾಗಮಂಡಲದಲ್ಲಿ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಎ.ಎಸ್. ಪೊನ್ನಣ್ಣ.  | Kannada Prabha

ಸಾರಾಂಶ

ಪ್ರಾಮಾಣಿಕವಾಗಿ ಕೆಲಸ ಮಾಡುವ ಮೂಲಕ ಎಂಜಿನಿಯರ್‌ಗಳು ಗೌರವ ಉಳಿಸಿಕೊಳ್ಳಬೇಕು.

ಕನ್ನಡಪ್ರಭ ವಾರ್ತೆ ಮಡಿಕೇರಿಭೂಮಿಪೂಜೆ ಮಾಡಿದ ನಂತರ ತಕ್ಷಣ ಕಾಮಗಾರಿ ಆರಂಭಿಸಬೇಕು. ಪ್ರಾಮಾಣಿಕವಾಗಿ ಕೆಲಸ ಮಾಡುವ ಮೂಲಕ ಎಂಜಿನಿಯರ್‌ಗಳು ಗೌರವ ಉಳಿಸಿಕೊಳ್ಳಬೇಕು. ಕೆಲಸ ಮಾಡದ ಎಂಜಿನಿಯರ್‌ಗಳು ನಮಗೆ ಬೇಡ ಎಂದು ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ತಿಳಿಸಿದ್ದಾರೆ.

ಭಾಗಮಂಡಲದ ಮೇಲು ಸೇತುವೆಯ ಕೆಳಗಿನ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ನಿಗದಿತ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸಿದರೆ ಗೌರವ ಸಿಗುತ್ತದೆ, ಇಲ್ಲದಿದ್ದಲ್ಲಿ ಕೆಲಸ ಮಾಡದ ಎಂಜಿನಿಯರ್‌ಗಳು ನಮಗೆ ಬೇಡ ಎನ್ನುವ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ ಎಂದರು.

ಯಾವುದೇ ಕಾರಣಕ್ಕೂ ಕಾಮಗಾರಿ ನಿಲ್ಲಬಾರದು, ಇರುವ ಅನುದಾನದಲ್ಲಿ ಗುಣಮಟ್ಟದ ಕಾಮಗಾರಿ ಮಾಡಬೇಕು. ಈಗಾಗಲೇ ಕಾಟಕೇರಿಯಲ್ಲಿ 1 ಮತ್ತು ಪೆರಾಜೆಯಲ್ಲಿ ಎರಡು ಕಾಮಗಾರಿ ಶೇ.90 ರಷ್ಟು ಪೂರ್ಣಗೊಂಡಿದೆ. ಕಾಮಗಾರಿ ಆರಂಭಿಸಲು ವಿಳಂಬ ಮಾಡಿದ ಎಂಜಿನಿಯರ್‌ನನ್ನು ಅಮಾನತು ಮಾಡಲು ಮುಂದಾಗಿದ್ದೆ. ಕೆಲಸ ಮಾಡದ ಎಂಜಿನಿಯರ್‌ಗಳು ನಮಗೆ ಯಾಕೆ ಬೇಕು ಎಂದು ಪ್ರಶ್ನಿಸಿದರು.

ಭಾಗಮಂಡಲ ಆಟೋ ಚಾಲಕರ ಬೇಡಿಕೆಗೆ ಸ್ಪಂದಿಸಿದ ಶಾಸಕರು, ಸುಸಜ್ಜಿತ ಆಟೋ ನಿಲ್ದಾಣ ನಿರ್ಮಾಣಕ್ಕೆ ಶಾಸಕರ ನಿಧಿಯಿಂದ ಅನುದಾನ ಒದಗಿಸುವುದಾಗಿ ಭರವಸೆ ನೀಡಿದರು.

ನೂತನ ಮೇಲು ಸೇತುವೆ ಕಾಮಗಾರಿ ಮತ್ತು ತ್ರಿವೇಣಿ ಸಂಗಮದ ಬಳಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳನ್ನು ಪರಿಶೀಲಿಸಿದ ಅವರು, ಕುಡಿಯುವ ನೀರಿವ ಪೂರೈಕೆ, ಗ್ರಾಮದ ಅಭಿವೃದ್ಧಿ ಮತ್ತು ಸ್ವಚ್ಛತೆ ಕುರಿತು ಗ್ರಾಮ ಪಂಚಾಯಿತಿ ಆಡಳಿತ ಮಂಡಳಿಯೊಂದಿಗೆ ಸಮಾಲೋಚನೆ ನಡೆಸಿದರು.

ಆಟೋ ಚಾಲಕರು ಮಾಲೀಕರು ಹಾಗೂ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದರು. ಭಾಗಮಂಡಲ ಶ್ರೀ ಭಗಂಡೇಶ್ವರ ತೋಟಗಾರಿಕಾ ಸಂಘಕ್ಕೆ ಭೇಟಿ ನೀಡಿದರು.

ಭಾಗಮಂಡಲ ತಲಕಾವೇರಿ ದೇವಸ್ಥಾನದ ಅರ್ಚಕರು, ಸಿಬ್ಬಂದಿ ವರ್ಗ, ಪಂಚಾಯಿತಿ ಆಡಳಿತ ಮಂಡಳಿ, ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು, ಪೊಲೀಸ್ ಠಾಣಾಧಿಕಾರಿಗಳು ಹಾಗೂ ಗುತ್ತಿಗೆದಾರರಿಂದ ವಿವಿಧ ವಿಚಾರಗಳ ಕುರಿತು ಮಾಹಿತಿ ಪಡೆದರು.

ಪ್ರಮುಖರಾದ ಬೇಕಲ್ ರಮಾನಾಥ್, ಕೆ.ಎ.ಇಸ್ಮಾಯಿಲ್ ನೆರವಂಡ ಉಮೇಶ್, ಕರಿಕೆ ಗ್ರಾ.ಪಂ. ಅಧ್ಯಕ್ಷ ಬಾಲಚಂದ್ರ ನಾಯರ್, ಡಿಸಿಸಿ ಸದಸ್ಯರಾದ ಸುನಿಲ್ ಪತ್ರಾವೋ, ಹ್ಯಾರೀಸ್ ಚೆಟ್ಟಿಮಾನಿ, ಕೊಡಗನ ತೀರ್ಥ ಪ್ರಸಾದ್, ಬಶೀರ್ ಚೇರಂಬಾಣೆ, ವಲಯಾಧ್ಯಕ್ಷ ದೇವಂಗೋಡಿ ಹರ್ಷ, ಎಮ್ಮೆಮಾಡುವ ವಲಯಾಧ್ಯಕ್ಷ ಹಂಸ, ಕಾರ್ಯಾಧ್ಯಕ್ಷ ಕೋಳಿಬೈಲು ವೆಂಕಟೇಶ್, ಡಿಪ್ಪು, ಅಶೋಕ್, ರಂಗಪ್ಪ ನಿಡ್ಯಮಲೆ ದಾಮೋದರ, ಅಬ್ದುಲ್ ಲತೀಫ್, ಹ್ಯಾರಿಸ್, ನೌಫಲ್, ಬಾರಿಕೆ ಲೋಕೇಶ್, ಶರತ್, ಕುದುಕೊಳಿ ಶಬರೀಶ್, ಸಾಮಾಜಿಕ ಜಾಲತಾಣದ ಅಧ್ಯಕ್ಷ ಸೂರಜ್ ಹೊಸೂರು, ನಿಡ್ಯಮಲೆ ಸುರೇಶ್, ಬಾರಿಕೆ ಮಿಥುನ್, ಅನಿಲ್, ನಾರಾಯಣ, ಪೊನ್ನಪ್ಪ, ದೇವಂಗೋಡಿ ಯೋಗೇಂದ್ರ, ದಂಡಿನ ಪೂರ್ಣೇಶ್, ಎಮ್ಮೆಮಾಡು ಪಂಚಾಯಿತಿ ಸದಸ್ಯರಾದ ಈಜು, ಚೆಟ್ಟಿಮಾನಿಯ ಕೆ.ಕೆ.ಹಂಸ, ಬಡ್ಡೀರ ನಂದಕುಮಾರ್, ಕರಿಕೆ ರಮೇಶ್, ಗುತ್ತಿಗೆದಾರ ಸಿ.ಎಸ್.ರಶೀದ್ ಮತ್ತಿತರರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ