ಕನ್ನಡಪ್ರಭ ವಾರ್ತೆ ಚಡಚಣ
ಶಾಲಾ ಆವರಣದಲ್ಲಿ ದನ ಕರುಗಳನ್ನು ಕಟ್ಟಲಾಗುತ್ತಿದೆ. ಶಾಲಾ ಆವರಣದಲ್ಲಿಯೇ ರಾಶಿ ಮಾಡುವದು, ಶೌಚ ಮಾಡುವುದು, ಮದ್ಯೆ ಸೇವಿಸುವುದು ಸೇರಿದಂತೆ ಅನೈತಿಕ ಚಟುವಟಿಕೆಗಳು ನಡೆಯುತ್ತಿವೆ. ಈ ಎಲ್ಲ ಕಾಮಗಾರಿಗಳನ್ನು ಅರ್ಧಕ್ಕೆ ನಿಲ್ಲಿಸಿರುವದನ್ನು ನೋಡಿದರೇ ಅದರ ಹಿಂದೆ ಅವ್ಯವಹಾರ ನಡೆದಿರುವ ಬಗ್ಗೆ ಆರೋಪ ಮಾಡಿದ್ದಾರೆ.
ಈ ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಲ್.ಎಫ್.ನದಾಫ, ಆಟದ ಮೈದಾನಕ್ಕೆ ₹ 16.5 ಲಕ್ಷ ಮಂಜೂರಾತಿ ದೊರಕ್ಕಿದ್ದು, ಎನ್ಆರ್ಇಜಿ ಅಡಿಯಲ್ಲಿ ಕಾಮಗಾರಿಕೈಗೊಳ್ಳಲಾಗಿದೆ. ಖೋ ಖೋ, ಕಬಡ್ಡಿ, ವಾಲಿಬಾಲ್, ಬಾಸ್ಕೆಟ್ ಬಾಲ್, ರನ್ನಿಂಗ್ ಟ್ರ್ಯಾಕ್ ನಿರ್ಮಾಣ ಕಾರ್ಯ ಶೇ.75 ರಷ್ಟು ಪೂರ್ಣಗೊಂಡಿದೆ. ಕಾಮಗಾರಿಗೆ ತಕ್ಕಂತೆ ₹ 12 ಲಕ್ಷ ಹಣವನ್ನು ಗುತ್ತಿಗೆದಾರರಿಗೆ, ಕಾರ್ಮಿಕರಿಗೆ ಬಿಡುಗಡೆಗೊಳಿಸಲಾಗಿದೆ. ಕಂಪೌಂಡ್ ನಿರ್ಮಾಣಕ್ಕೆ ₹ 32 ಲಕ್ಷ ಹಣ ಮಂಜೂರಾಗಿದೆ. ಕಂಪೌಂಡ್ ನಿರ್ಮಾಣದ ಕಾಮಗಾರಿ ಪ್ರಗತಿಯಲ್ಲಿದ್ದು, ಅದರಲ್ಲಿ ಶೇ.30 ರಷ್ಟು ಹಣ ಬಿಡುಗಡೆಯಾಗಿದೆ. ವಿದ್ಯಾರ್ಥಿನಿಯರ ಶೌಚಾಲಯಕ್ಕೆ ₹ 8 ಲಕ್ಷ ಹಣ ಮಂಜೂರಾಗಿದ್ದು, 2 ಶೌಚಾಲಯ ನಿರ್ಮಿಸಲಾಗಿದೆ. ಕಾಮಗಾರಿ ಮುಕ್ತಾಯದ ಹಂತದಲ್ಲಿದ್ದು ಸುಮಾರು ₹ 5 ಲಕ್ಷ ಹಣ ಬಿಡುಗಡೆಗೊಳಿಸಿದೆ. ಆದರೆ, ಬಾಕಿ ಬಿಲ್ ತಡೆ ಹಿಡಿಯಲಾಗಿದೆ ಎಂದು ತಿಳಿಸಿದ ಅವರು, ಕಾಮಗಾರಿ ಅರ್ಧಕ್ಕೆ ನಿಲ್ಲಿಸಿ ಹಣ ಲಪಟಾಯಿಸಲಾಗಿದೆ ಎಂಬ ಅರೋಪ ಸತ್ಯಕ್ಕೆ ದೂರವಾಗಿದೆ ಎಂದು ಸ್ಪಷ್ಟಪಡಿಸಿದರು.----------
ಉಮರಜ ಗ್ರಾಮ ಪಂಚಾಯಿತಿಯ ವ್ಯಾಪ್ತಿಯ ಪ್ರೌಢ ಶಾಲೆಯಲ್ಲಿ ವಿವಿಧ ಕಾಮಗಾರಿಗಳ ಕಾರ್ಯ ಪ್ರಗತಿಯಲ್ಲಿವೆ. ಕೂಡಲೇ ಈ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು.
- ಕೆವೆಸನ್ ಸಾವಳೆ, ಗ್ರಾಪಂ ಅಧ್ಯಕ್ಷ