ಕನ್ನಡ ಭಾಷೆ, ಸಂಸ್ಕೃತಿ ಬೆಳವಣಿಗೆಗೆ ಶ್ರಮಿಸಿ: ಪಯ್ಯಪುಲ ವಿಷ್ಣು

KannadaprabhaNewsNetwork |  
Published : Aug 26, 2026, 02:45 AM IST
ಬಳ್ಳಾರಿ ಶ್ರೀ ಚೈತನ್ಯ ಪದವಿ ಕಾಲೇಜಿನಲ್ಲಿ ಆಯೋಜಿಸಿದ್ದ ದತ್ತಿ ಉಪನ್ಯಾಸ ಕಾರ್ಯಕ್ರಮಕ್ಕೆ ಶ್ರೀ ಚೈತನ್ಯ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಪಯ್ಯವುಲ ವಿಷ್ಣು ಚಾಲನೆ ನೀಡಿದರು. | Kannada Prabha

ಸಾರಾಂಶ

ಗಡಿನಾಡಿನಲ್ಲಿ ಕನ್ನಡ ಪ್ರಜ್ಞೆಯನ್ನು ಜಾಗ್ರತಗೊಳಿಸುವ ನಿಟ್ಟಿನಲ್ಲಿ ಪರಿಷತ್ತಿನ ಕಾರ್ಯ ಶ್ಲಾಘನೀಯ ಎಂದು ಶ್ರೀಚೈತನ್ಯ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಪಯ್ಯವುಲ ವಿಷ್ಣು ಅಭಿಪ್ರಾಯಪಟ್ಟರು.

ಬಳ್ಳಾರಿ: ಗಡಿನಾಡಿನಲ್ಲಿ ಕನ್ನಡ ಪ್ರಜ್ಞೆಯನ್ನು ಜಾಗ್ರತಗೊಳಿಸುವ ನಿಟ್ಟಿನಲ್ಲಿ ಪರಿಷತ್ತಿನ ಕಾರ್ಯ ಶ್ಲಾಘನೀಯ ಎಂದು ಶ್ರೀಚೈತನ್ಯ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಪಯ್ಯವುಲ ವಿಷ್ಣು ಅಭಿಪ್ರಾಯಪಟ್ಟರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಗರದ ಶ್ರೀ ಚೈತನ್ಯ ಪದವಿ ಕಾಲೇಜಿನಲ್ಲಿ ಆಯೋಜಿಸಿದ್ದ ಗಾಲಿ ರುಕ್ಮಿಣಮ್ಮ ಮತ್ತು ಗಾಲಿ ಚಂಗಾರೆಡ್ಡಿ ಸ್ಮಾರಕ ದತ್ತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಕನ್ನಡ ಸಂಸ್ಕೃತಿ ಜಗತ್ತಿನ ಶ್ರೇಷ್ಠ ಸಂಸ್ಕೃತಿಗಳಲ್ಲಿ ಒಂದಾಗಿದೆ. ಹೀಗಾಗಿ ಪ್ರತಿಯೊಬ್ಬರೂ ಕನ್ನಡ ಭಾಷೆ ಮತ್ತು ಸಂಸ್ಕೃತಿಯ‌ ಬಗ್ಗೆ ಅಭಿಮಾನ ಹೊಂದಿರಬೇಕು. ಕನ್ನಡ ಭಾಷೆ ಹಾಗೂ ಈ ನೆಲದ ಸಂಸ್ಕೃತಿಯ ಬೆಳವಣಿಗೆಗೆ ಪ್ರತಿಯೊಬ್ಬರೂ ಶ್ರಮಿಸಬೇಕು ಎಂದು ಹೇಳಿದರು.

ವಿಶೇಷ ಉಪನ್ಯಾಸ ನೀಡಿದ ಕುರುಗೋಡು ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ. ತಿಪ್ಪೇರುದ್ರ ಸಂಡೂರು, ಕನ್ನಡದ ಅನೇಕ ಸಾಹಿತಿಗಳು ನೀಡಿರುವ ಸಾಹಿತ್ಯಿಕ ಕೊಡುಗೆಯನ್ನು ಸ್ಮರಿಸಿದರಲ್ಲದೆ, ಭಾಷಾಭಿಮಾನ ಮೈಗೂಡಿಸಿಕೊಳ್ಳದ ಹೊರತು ಸ್ಥಳೀಯ ಭಾಷೆಗಳು ಗಟ್ಟಿಯಾಗಿ ನೆಲೆಗೊಳ್ಳಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟರು.

ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಉಪಾಧ್ಯಕ್ಷ ಸೊಂತಾ ಗಿರಿಧರ, ಅನುದಾನರಹಿತ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಎನ್. ಮರಿಸ್ವಾಮಿ ರೆಡ್ಡಿ, ಮಹಾನಗರ ಪಾಲಿಕೆಯ ಸದಸ್ಯರಾದ ಗುಡಿಗಂಟೆ ಹನುಮಂತ, ಔಷಧ ಪ್ರಯೋಗಾಲಯದ ವೈಜ್ಞಾನಿಕ ಅಧಿಕಾರಿ ಎನ್. ಶ್ರೀನಿವಾಸ ರೆಡ್ಡಿ, ಪ್ರಾಂಶುಪಾಲರಾದ ಸಂದೀಪ್ ಆಚಾರ್ಯ ಉಪಸ್ಥಿತರಿದ್ದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಿಷ್ಠಿ ರುದ್ರಪ್ಪ ಅಧ್ಯಕ್ಷತೆ ವಹಿಸಿದ್ದರು. ಕಸಾಪ ಕೋಶಾಧ್ಯಕ್ಷ ಬಸವರಾಜ ಗದಗಿನ ಪ್ರಾಸ್ತಾವಿಕ ಮಾತನಾಡಿದರು. ಉಪನ್ಯಾಸಕರಾದ ಕೆ. ಶಿವರಾಂ, ಜಿನೇಂದ್ರ ಜೈನ್ ಹಾಗೂ ಕಸಾಪ ಜಿಲ್ಲಾ ಸಂಚಾಲಕ ಕಪ್ಪಗಲ್ಲು ಬಿ. ಚಂದ್ರಶೇಖರ ಆಚಾರ್ ಕಾರ್ಯಕ್ರಮ ನಿರ್ವಹಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮೀಸಲು ಅರಣ್ಯದಲ್ಲಿ ಕಳ್ಳ ಬೇಟೆ ಯತ್ನ: ಮೂವರು ವಶಕ್ಕೆ
ಕೊಡಗಿನಲ್ಲಿ ಮುಸಲಧಾರೆ: ತ್ರಿವೇಣಿ ಸಂಗಮ ಮುಳುಗಡೆ