ಕನ್ನಡದ ಉಳಿವಿಗಾಗಿ ಶ್ರಮಿಸಿ: ಫಾ.ಲಾರೆನ್ಸ್ ಡಿಸಿಲ್ವ

KannadaprabhaNewsNetwork |  
Published : Jun 29, 2025, 01:32 AM IST
ಸ | Kannada Prabha

ಸಾರಾಂಶ

ಕನ್ನಡಕ್ಕೆ ಹಿಂದಿನಿಂದಲೂ ಕ್ರಿಶ್ಚಿಯನ್ ಮಿಷನರಿಗಳ ಕೊಡುಗೆ ಅಪಾರವಾದದ್ದು. ನಾವು ಕೂಡ ಆ ಬಗ್ಗೆ ಅತ್ಯಂತ ಕಾಳಜಿ ವಹಿಸೋಣ

ಭಟ್ಕಳ: ಅಕ್ಷರ ನಾದ ಕಲೆ ಸಾಹಿತ್ಯ ಸಾಂಸ್ಕೃತಿಕ ವೇದಿಕೆ, ಕರ್ನಾಟಕ ವತಿಯಿಂದ ಬೇಂಗ್ರೆಯ ಮಂಜುನಾಥ ಸಭಾಗ್ರಹದಲ್ಲಿ ಎರ್ಪಡಿಸಲಾಗಿದ್ದ ಕವಿ ನುಡಿ ಸಂಭ್ರಮ ಆವೃತ್ತಿ೪ ಹಾಗೂ ಎಚ್.ಎಸ್.ವಿ. ಕವಿನ ನಮನ, ಜಿಲ್ಲಾಧ್ಯಕ್ಷೆ ಡಾ. ನೀವಿಯಾ ಗೋಮ್ಸ್ ಅವರ ಪದಗ್ರಹಣ ಮತ್ತು ಕನ್ನಡ ಸಾಧಕರಿಗೆ ಅಕ್ಷರ ನಾದ ಕರಾವಳಿ ರತ್ನ ಪ್ರಶಸ್ತಿ ವಿತರಣಾ ಸಮಾರಂಭವನ್ನು ಭಟ್ಕಳ-ಹೊನ್ನಾವರ ಭಾಗದ ಡೀನ್ ಫಾ.ಲಾರೆನ್ಸ್ ಡಿಸಿಲ್ವ ಉದ್ಘಾಟಿಸಿದರು.ನಂತರ ಮಾತನಾಡಿದ ಅವರು, ಕನ್ನಡದ ಬಗ್ಗೆ ಅತ್ಯಂತ ಹೆಮ್ಮೆ ಇರುವ ನಾವು ಕನ್ನಡದ ಉಳಿವಿಗಾಗಿ ಶ್ರಮಿಸಬೇಕಾಗಿದೆ. ಕನ್ನಡದ ಬೆಳವಣಿಗೆಗೆ ನಮ್ಮ ನಮ್ಮ ಕೊಡುಗೆಗಳನ್ನು ನೀಡುವುದು ಅತೀ ಮುಖ್ಯವಾಗಿದೆ ಎಂದ ಅವರು ಓರ್ವ ಅನ್ಯ ಭಾಷಿಕರಾದ ಶೃತಿ ಮಧುಸೂದನ್ ಅವರು ಕನ್ನಡದ ಬಗ್ಗೆ ಹೊಂದಿದ ಕಾಳಜಿ, ಅವರು ಕಟ್ಟಿ ಬೆಳೆಸಿದ ಸಂಸ್ಥೆ ತುಂಬಾ ಹೆಮ್ಮೆ ಪಡುವಂತಹದ್ದು ಎಂದರು. ಕನ್ನಡಕ್ಕೆ ಹಿಂದಿನಿಂದಲೂ ಕ್ರಿಶ್ಚಿಯನ್ ಮಿಷನರಿಗಳ ಕೊಡುಗೆ ಅಪಾರವಾದದ್ದು. ನಾವು ಕೂಡ ಆ ಬಗ್ಗೆ ಅತ್ಯಂತ ಕಾಳಜಿ ವಹಿಸೋಣ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಅಕ್ಷರ ನಾದ ಕಲೆ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಕರ್ನಾಟಕ ಇದರ ಅಧ್ಯಕ್ಷೆ ಶೃತಿ ಮಧುಸೂದನ್ ವೇದಿಕೆಯ ಉತ್ತರ ಕನ್ನಡ ಜಿಲ್ಲಾ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ ನೀವಿಯಾ ಗೋಮ್ಸ್ ಅವರಿಗೆ ಅಧ್ಯಕ್ಷ ಸ್ಥಾನವನ್ನು ನೀಡಿ ಪ್ರಮಾಣ ವಚನ ಬೋಧಿಸಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ನಿವೃತ್ತ ಡಿ.ವೈ.ಎಸ್.ಪಿ. ವೆಲೆಂಟೈನ್ ಡಿಸೋಜ ಮಾತನಾಡಿ, ಕನ್ನಡ ಮಣ್ಣಿನ ಗುಣಧರ್ಮ ಅತ್ಯಂತ ಎತ್ತರಕ್ಕೆ ಏರಿಸುವಂತದ್ದು. ಈ ಭಾಗದಲ್ಲಿ ಹುಟ್ಟಿದ ಖ್ಯಾತನಾಮರಾದ ಅನಂತನಾಗ್ ಹಾಗೂ ಶಂಕರ್‌ನಾಗ್ ಸೇರಿದಂತೆ ಇತರರನ್ನು ಸ್ಮರಿಸಿದ ಅವರು, ಅನೇಕ ಕವಿಗಳು, ಸಾಹಿತಿಗಳು ಗಣ್ಯರು ಈ ನೆಲದಿಂದ ಬಂದವರು ಎಂದು ಸ್ಮರಿಸಿದರು.

ಸಾಹಿತಿ ಶಂಭು ಹೆಗಡೆ ಮಾತನಾಡಿ, ಅಕ್ಷರ ನಾದ ಸಂಸ್ಥೆಯ ಅಧ್ಯಕ್ಷರ ಕಾರ್ಯವನ್ನು ಶ್ಲಾಘಿಸುತ್ತಾ ಕನ್ನಡ ಮಾತನಾಡುವಾಗ ನಾವು ಆಂಗ್ಲ ಭಾಷೆಯನ್ನು ಬಳಸದಂತೆ ಜಾಗೃತೆ ವಹಿಸಬೇಕು. ಪುಸ್ತಕ ಪ್ರಕಾಶನದ ಕಾರ್ಯ ತುಂಬ ಕಷ್ಟದ ಕೆಲಸವಾಗಿದ್ದು ಸಂಘಟಕರ ಶ್ರಮ ಸಾರ್ಥಕವಾಗಿದೆ ಎಂದರು.

ಸೈಂಟ್ ಮಿಲಾಗ್ರಿಸ್ ಸೌಹಾರ್ದ ಸಹಕಾರಿಯ ಅಧ್ಯಕ್ಷ ಜಾರ್ಜ ಫೆರ್ನಾಂಡೀಸ್ ಮಾತನಾಡಿ, ತಮ್ಮ ಮಾತೃಭಾಷೆ ಕೊಂಕಣಿಯಾದರೂ ಕನ್ನಡ ಭಾಷೆಯಲ್ಲಿ ಅವರು ಸಾಹಿತ್ಯ ಕೃಷಿ ಮಾಡುತ್ತಿರುವುದು ಸಂತಸದ ಸಂಗತಿಯಾಗಿದೆ. ನಮ್ಮ ಜಿಲ್ಲೆ ಸಾಹಿತಿಗಳ ಜಿಲ್ಲೆಯಾಗಿದ್ದು ಇಲ್ಲಿ ನೂರಾರು ಪುಸ್ತಕಗಳನ್ನು ರಚಿಸಿದ ಅನೇಕರಿದ್ದಾರೆ. ಅಕ್ಷರ ನಾದ ಸಂಸ್ಥೆ ನಮ್ಮ ಉತ್ತರ ಕನ್ನಡದಲ್ಲಿಯೂ ಕನ್ನಡದ ಕಾರ್ಯ ಮಾಡಲಿ ಎಂದು ಹಾರೈಸಿದರು.

ಪತ್ರಕರ್ತ ರಾಧಾಕೃಷ್ಣ ಭಟ್ಟ, ಸಾಹಿತಿ ಸವಿತಾ ನಾಯ್ಕ ಮಾತನಾಡಿದರು. ಸಮಾಜ ಸೇವಕ ಗಣೇಶ ಶಿಲ್ಪಿ ಉಪಸ್ಥಿತರಿದ್ದರು. ವೇದಿಕೆಯಲ್ಲಿ ಹತ್ತಕ್ಕೂ ಹೆಚ್ಚು ಕವಿಗಳು ಕವಿತೆ ವಾಚಿಸಿದರು. ಅಕ್ಷರ ನಾದ ಕಲೆ ಸಾಹಿತ್ಯ ಸಾಂಸ್ಕೃತಿಕ ವೇದಿಕೆ, ಕರ್ನಾಟಕ ಇದರ ವತಿಯಿಂದ ಹಲವಾರು ಸಾಧಕರಿಗೆ ಅಕ್ಷರ ನಾದ ಕರಾವಳಿ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ವೇದಿಕೆಯ ಕಾರ್ಯನಿರ್ವಾಹಕಿ ಡಾ. ತಾರಾ ಸಂತೋಷ್ ಮೆರವಾಡೆ ಸ್ವಾಗತಿಸಿದರು. ನಂತರ ನಡೆದ ಕವಿಗೋಷ್ಟಿಯನ್ನು ಫೆಲಿಕ್ಸ್ ಫೆರ್ನಾಂಡೀಸ್ ನಿರ್ವಹಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ