ಕನ್ನಡಪ್ರಭ ವಾರ್ತೆ ಮಂಗಳೂರು
ರಾಜಕೀಯದ ಕನಸು ಕಂಡವನು ನಾನಲ್ಲ. ಆದರೆ ಎಲ್ಲರ ಒತ್ತಾಸೆಯ ಮೇರೆಗೆ ರಾಜಕೀಯಕ್ಕೆ ಬರುವಂತಾಯಿತು. ನಾರಾಯಣ ಗುರುಗಳ ಆದರ್ಶವನ್ನೇ ಮೂಲವಾಗಿಟ್ಟುಕೊಂಡು ಸಾಮಾಜಿಕ ಕಾರ್ಯಗಳಿಗೆ ಮುಂದಾದೆ. ಇಂದು ರಾಜಕೀಯದ ಅವಕಾಶ ದೊರೆತಿದೆ. ಈ ಅವಕಾಶವನ್ನು ಸಮಾಜದ ಹಿಂದುಳಿದ ವರ್ಗದ, ಆರ್ಥಿಕ ಹಿಂದುಳಿದವರ ಶ್ರೇಯೋಭಿವೃದ್ಧಿಗೆ ಬಳಸಿಕೊಳ್ಳುವುದಾಗಿ ತಿಳಿಸಿದರು.
ಮುಂದಿನ ದಿನ ಪ್ರತಿ ಮೂರು ತಿಂಗಳಿಗೊಮ್ಮೆ ಪ್ರತಿಯೊಂದು ಸಮುದಾಯದವರ ಸಭೆ ಕರೆದು, ಅಹವಾಲು ಸ್ವೀಕರಿಸುವ ಕೆಲಸ ಮಾಡಲಾಗುವುದು. ಜತೆಗೆ ಉಚಿತವಾಗಿ ಶಿಕ್ಷಣ, ಆರೋಗ್ಯ ಸೇವೆ ಸಿಗಬೇಕು ಎಂಬ ಆಲೋಚನೆ ನನ್ನದು. ಆ ನಿಟ್ಟಿನಲ್ಲಿ ಪ್ರಯತ್ನ ನಡೆಸುವುದಾಗಿ ಪದ್ಮರಾಜ್ ಹೇಳಿದರು.ಸುರತ್ಕಲ್, ಕೂಳೂರಲ್ಲಿ ಪ್ರಚಾರ:
ನಡು ನಡುವೆ ತೆರೆದ ವಾಹನದಿಂದ ಇಳಿದು ನೇರವಾಗಿ ಮತದಾರರ ಬಳಿಗೆ ತೆರಳಿ ಮಾತನಾಡಿಸಿದರು. ಬಿಸಿಲನ್ನೂ ಲೆಕ್ಕಿಸದೆ ಮಕ್ಕಳು, ಯುವಕರನ್ನು ಮಾತನಾಡಿಸುತ್ತಾ ಸಾಗಿದರು. ಯುವಕ- ಯುವತಿಯರು ಪದ್ಮರಾಜ್ ಅವರ ಕೈಕುಲುಕಿ, ಸೆಲ್ಫಿ ತೆಗೆದು ಶುಭಹಾರೈಸಿದರು. ಹೆಚ್ಚಿನ ಪ್ರದೇಶಗಳಲ್ಲಿ ಅಭ್ಯರ್ಥಿಗೆ ಹೂ ಮಾಲೆ ಹಾಕಿ, ಪಟಾಕಿ ಸಿಡಿಸಿ ಸಂಭ್ರಮ ನೆರವೇರಿತು.
ಪ್ರಚಾರದ ನಡುವೆ ಪದ್ಮರಾಜ್ ಪೂಜಾರಿ ಅವರು ಮುಕ್ಕ ಶ್ರೀ ರಾಮ ಮಂದಿರ, ಪಡ್ರೆ ಶ್ರೀ ಧೂಮಾವತಿ ಬಂಟರ ದೈವಸ್ಥಾನ ಭಂಡಾರ ಮನೆ, ಮುಕ್ಕ ಶ್ರೀ ಸತ್ಯಧರ್ಮ ದೇವಿ ದೇವಸ್ಥಾನ, ಕಾಟಿಪಳ್ಳ ಶ್ರೀ ಮಹಾಗಣಪತಿ ದೇವಸ್ಥಾನ, ಚಿತ್ರಾಪುರ ಶ್ರೀ ಮಹಾವಿಷ್ಣು ಭಜನಾ ಮಂದಿರ, ಕುಂಜತ್ತಬೈಲ್ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ, ಸದ್ಭಾವನಾ ಸಮಿತಿ, ಮುಕ್ಕ ಜುಮ್ಮಾ ಮಸೀದಿ, ಚೊಕ್ಕಬೆಟ್ಟು ಮುಹಿಯುದ್ದೀನ್ ಜುಮಾ ಮಸೀದಿಗೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.