ಹುಕ್ಕೇರಿ ವಿದ್ಯುತ್ ಸಂಘದ ಪ್ರಗತಿಗೆ ಶ್ರಮಿಸಿ

KannadaprabhaNewsNetwork |  
Published : Jul 06, 2025, 11:49 PM IST
ಹುಕ್ಕೇರಿ ವಿದ್ಯುತ್ ಸಹಕಾರಿ ಸಂಘದ ಸಿಬ್ಬಂದಿಗೆ ನೇಮಕಾತಿ ಆದೇಶ ಪತ್ರವನ್ನು ಸಚಿವ ಸತೀಶ ಜಾರಕಿಹೊಳಿ ಹಾಗೂ ಆಡಳಿತ ಮಂಡಳಿ ನಿರ್ದೇಶಕರು ವಿತರಿಸಿದರು. | Kannada Prabha

ಸಾರಾಂಶ

ವಿದ್ಯುತ್ ಸಂಘದಲ್ಲಿ ಕಳೆದ ಹತ್ತು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಎಲ್ಲ ಸಿಬ್ಬಂದಿಗೆ ಹಂತ ಹಂತವಾಗಿ ನೇಮಕಾತಿ ಪತ್ರ ನೀಡಲಾಗುವುದು.

ಕನ್ನಡಪ್ರಭ ವಾರ್ತೆ ಹುಕ್ಕೇರಿ

ಸಹಕಾರಿ ತತ್ವದಡಿ ದೇಶದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘವನ್ನು ಸರ್ಕಾರದಿಂದ ಸಿಗುವ ಸೌಲಭ್ಯ ಪಡೆದು ಲಾಭದತ್ತ ಮುನ್ನಡಸಲು ಎಲ್ಲರೂ ಪ್ರಯತ್ನಿಸೋಣವೆಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘಕ್ಕೆ ಭೇಟಿ ನೀಡಿ ಸಿಬ್ಬಂದಿಗೆ ಕಾಯಂ ನೇಮಕಾತಿ ಆದೇಶ ಪತ್ರ ವಿತರಿಸಿ ಅವರು ಮಾತನಾಡಿದರು. ವಿದ್ಯುತ್ ಸಂಘದಲ್ಲಿ ಕಳೆದ ಹತ್ತು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಎಲ್ಲ ಸಿಬ್ಬಂದಿಗೆ ಹಂತ ಹಂತವಾಗಿ ನೇಮಕಾತಿ ಪತ್ರ ನೀಡಲಾಗುವುದು. ಸಿಬ್ಬಂದಿ ಹಾಗೂ ಕುಟುಂಬದವರಿಗೆ ಸೇವಾ ಭದ್ರತೆ (ವಿಮೆ), ಬೋನಸ್ ಅನ್ನು ಆಡಳಿತ ಮಂಡಳಿಯವರು ಸೌಲಭ್ಯ ಒದಗಿಸಬೇಕು. ಸಂಘಕ್ಕೆ ಗ್ರಾಪಂಗಳಲ್ಲಿ ಬಾಕಿ ಇರುವ ₹12 ಕೋಟಿಯಲ್ಲಿ ₹4 ಕೋಟಿ ವಸೂಲಾಗಿದೆ. ಸರ್ಕಾರದಿಂದ ಗಂಗಾ ಕಲ್ಯಾಣ ಹಾಗೂ ಅತಿವೃಷ್ಟಿಗಳಿಂದ ಬಾಕಿ ಹಣ ಉಳಿದ ಬಿಲ್‌ಗಳನ್ನು ಹಂತ ಹಂತವಾಗಿ ಭರಣಾ ಮಾಡುವ ವ್ಯವಸ್ಥೆ ಮಾಡುವುದಾಗಿ ತಿಳಿಸಿದರು.

ಖಾಸಗಿ ವಿದ್ಯುತ್ ಉತ್ಪದನಾ ಕಂಪನಿಯವರಿಂದ ಕಡಿಮೆ ದರದಲ್ಲಿ ವಿದ್ಯುತ್ ಖರೀದಿಸಿ ವಿತರಿಸಿದರೆ ಸಂಘಕ್ಕೆ ಇನ್ನು ಹೆಚ್ಚಿನ ಲಾಭವಾಗಲಿದೆ. ತೋಟಪಟ್ಟಿ ನಿರಂತರ ಯೋಜನೆಯನ್ನು ₹2 ಕೋಟಿ ವೆಚ್ಚದಲ್ಲಿ ಎಲಿಮುನ್ನೋಳಿ ಗ್ರಾಮದಲ್ಲಿ ಪ್ರಾಯೋಗಿಕವಾಗಿ ಪ್ರಾರಂಭ ಮಾಡಲಾಗಿದೆ. 5 ಕಡೆ ವಿದ್ಯುತ್ ಉಪಕೇಂದ್ರಗಳ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಸಹಕಾರಿ ಮಹರ್ಷಿ ದಿ.ಅಪ್ಪಣಗೌಡ ಪಾಟೀಲ ಅವರು ಸ್ಥಾಪಿಸಿದ ಸಂಘಕ್ಕೆ ಅವರ ಹೆಸರು ಇಡುವುದು ಸೂಕ್ತ ಎಂದು ಹೇಳಿದರು.

ಬರುವ ಮೂರು ತಿಂಗಳಿನಲ್ಲಿ ಆಡಳಿತ ಮಂಡಳಿಗೆ ಚುನಾವಣೆ ನಡೆಯಲಿದೆ. ಸಚಿವ, ಶಾಸಕ, ಮುಖಂಡರ ಶಿಪಾರಸ್ಸು ಇಲ್ಲದೆ ರೈತರ ಕೆಲಸಗಳು ಆಗಬೇಕು. ಆ ರೀತಿ ಆಡಳಿತ ಮಂಡಳಿಯವರು ಗ್ರಾಹಕರೊಂದಿಗೆ ಸ್ಪಂದಿಸಿ ಜನಮನ್ನಣೆ ಪಡೆಯಬೇಕು. ವಿರೋಧಿ ಬಣ ಈಗಾಗಲೆ ಚುನಾವಣೆಯ ತಾಲೀಮು ನಡೆಸಿದ್ದು, ತಾವೂ ಕೂಡ ಅದನ್ನು ಗಮನದಲ್ಲಿಟ್ಟುಕೊಂಡು 50 ಸಾವಿರ ಮತದಾರರ ಮನಸ್ಸು ಗೆಲ್ಲಲು ಪ್ರಯತ್ನಿಸಿ ಎಂದು ತಿಳಿಸಿದರು.

ಮಾಜಿ ಸಚಿವ ಶಶಿಕಾಂತ ನಾಯಿಕ ನಿರ್ದೇಶಕ ಶಶಿರಾಜ ಪಾಟೀಲ ಮಾತನಾಡಿದರು. ಅಧ್ಯಕ್ಷ ಜಯಗೌಡ ಪಾಟೀಲ, ಉಪಾದ್ಯಕ್ಷ ವಿಷ್ನು ರೇಡೆಕರ, ನಿರ್ದೇಶಕರಾದ ರವಿಂದ್ರ ಹಿಡಕಲ್, ಕುನಾಲ್ ಪಾಟೀಲ, ಬಸಗೌಡ ಮಗೆಣ್ಣವರ ಸೋಮಲಿಂಗ ಪಾಟೀಲ, ಜೋಮಲಿಂಗ ಪಟೋಳಿ, ರವಿಂದ್ರ ಅಸೋದೆ, ಈರಪ್ಪಾ ಬಂಜಿರಾಮ ಪುರಸಭೆ ಅಧ್ಯಕ್ಷ ಇಮ್ರಾನ ಮೋಮಿನ್. ಹುಕ್ಕೇರಿ ಪುರಸಭೆ ಅಧ್ಯಕ್ಷ ಇಮ್ರಾನ ಮೋಮಿನ್ ರಿಷಭ್ ಪಾಟೀಲ, ಮೌನೇಶ ಪೋತದಾರ ಮತ್ತಿತರರು ಇದ್ದರು. ವ್ಯವಸ್ಥಾಪಕ ನಿರ್ದೆಶಕ ರವೀಂದ್ರ ಪಾಟೀಲ, ಪ್ರಾಸ್ತಾವಿಕವಾಗಿ ಮಾತನಾಡಿದರು. ಸ್ಥಾನಿಕ ಅಭಿಯಂತ ನೇಮಿನಾಥ ಖೇಮಲಾಪುರೆ ಕಾರ್ಯಕ್ರಮ ನಿರೂಪಿಸಿದರು. ಸಹಾಯಕ ವ್ಯವಸ್ಥಾಪಕ ದುರದುಂಡಿ ನಾಯಿಕ ಉದಯ ಮಗದುಮ್ಮ ಸಹಕರಿಸಿದರು. ರವಿಂದ್ರ ಹಿಡಕಲ್ ವಂದಿಸಿದರು.

ಇದಕ್ಕೂ ಮೊದಲು ಹುಕ್ಕೇರಿ ಪುರಸಭೆಗೆ ತೆರಳಿ ಸಾರ್ವಜನಿಕರ ಸಾರ್ವಜನಿಕರ ಕುಂದುಕೊರತೆ ಆಲಿಸಿ ಪರಿಹಾರಕ್ಕೆ ಅಧಿಕಾರಿಗಳಿಗೆ ಸೂಚಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿದ್ದರಾಮಯ್ಯ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ : ಕುತೂಹಲ!
ಬೆಂಗ್ಳೂರಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಪಬ್‌ ಮೇಲೆ ಐಟಿ ದಾಳಿ