ಸಮನ್ವತೆಯಿಂದ ಕೆಲಸ ನಿರ್ವಹಿಸಿ

KannadaprabhaNewsNetwork |  
Published : Apr 11, 2024, 12:46 AM IST
(ಪೋಟೊ 10 ಬಿಕೆಟಿ 4, ಆಯೋಗದ ಉಪ ಚುನಾವಣಾ ಆಯುಕ್ತರ ಅಧ್ಯಕ್ಷತೆಯಲ್ಲಿ ನಡೆದ ಮತದಾನ ಪೂರ್ವ ಸಿದ್ದತೆ ಕುರಿತು ವಿಡಿಯೋ ಸಂವಾದ ಸಭೆಯ ಬಳಿಕ ಮಾತನಾಡಿದ ಜಾನಕಿ ಕೆ.ಎಂ,) | Kannada Prabha

ಸಾರಾಂಶ

ಮತಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ತಮ್ಮ ವ್ಯಾಪ್ತಿಯಲ್ಲಿ ಬರುವ ಅಧಿಕಾರಿ ಮತ್ತು ಸಿಬ್ಬಂದಿಗೆ ಚುನಾವಣಾ ಕಾರ್ಯಗಳ ಬಗ್ಗೆ ತರಬೇತಿ ಮತ್ತೊಮ್ಮೆ ನೀಡಿ ಚುರುಕಾಗಿ ಕೆಲಸ ನಿರ್ವಹಿಸಲು ನಿರ್ದೇಶನ ನೀಡಲು ತಿಳಿಸಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಚುನಾವಣೆಯ ಪ್ರತಿ ಕಾರ್ಯದಲ್ಲಿ ಎಲ್ಲರೂ ಸಮನ್ವತೆಯಿಂದ ಕೆಲಸ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಆಗಿರುವ ಜಿಲ್ಲಾ ಚುನಾವಣಾಧಿಕಾರಿ ಜಾನಕಿ ಕೆ.ಎಂ ಅಧಿಕಾರಿಗಳಿಗೆ ಸೂಚಿಸಿದರು

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಮಂಗಳವಾರ ಚುನಾವಣಾ ಆಯೋಗದ ಉಪ ಚುನಾವಣಾ ಆಯುಕ್ತರ ಅಧ್ಯಕ್ಷತೆಯಲ್ಲಿ ನಡೆದ ಮತದಾನ ಪೂರ್ವ ಸಿದ್ದತೆ ಕುರಿತು ವಿಡಿಯೋ ಸಂವಾದ ಸಭೆ ನಡೆಸಲಾಯಿತು. ಸಭೆಯ ಬಳಿಕ ಮಾತನಾಡಿದ ಅವರು, ಆಯಾ ಮತಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ತಮ್ಮ ವ್ಯಾಪ್ತಿಯಲ್ಲಿ ಬರುವ ಅಧಿಕಾರಿ ಮತ್ತು ಸಿಬ್ಬಂದಿಗೆ ಚುನಾವಣಾ ಕಾರ್ಯಗಳ ಬಗ್ಗೆ ತರಬೇತಿ ಮತ್ತೊಮ್ಮೆ ನೀಡಿ ಚುರುಕಾಗಿ ಕೆಲಸ ನಿರ್ವಹಿಸಲು ನಿರ್ದೇಶನ ನೀಡಲು ತಿಳಿಸಿದರು.

ಚುನಾವಣಾ ಅಕ್ರಮಗಳ ಬಗ್ಗೆ ಕೇವಲ ಚೆಕ್‌ಪೋಸ್ಟ್‌ಗಳಲ್ಲಿ ನಿಗಾವಹಿಸಬೇಕು. ಅದರ ಜೊತೆಗೆ ತಮ್ಮ ವ್ಯಾಪ್ತಿಯಲ್ಲಿ ನಡೆಯುವ ದೇವಸ್ಥಾನ, ಮಂಗಲ ಕಾರ್ಯಾಲಯ, ಜಾತ್ರೆ ಪಲ್ಲಕ್ಕಿ ಉತ್ಸವದಂತ ಕಾರ್ಯಗಳಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಗಳ ಬಗ್ಗೆ ಹೆಚ್ಚಿನ ನಿಗಾವಹಿಸಬೇಕು. ಅಲ್ಲದೆ ಕೃಷಿ ಮಾರುಕಟ್ಟೆ, ಫುಡ್ ಕಾರ್ಪೊರೇಷನ್‌ಗೆ ಸಂಬಂಧಿಸಿದ ದಾಸ್ತಾನು ಸಂಗ್ರಹ ಸ್ಥಳಗಳಿಗೆ ಭೇಟಿ ನೀಡಿ ನೀತಿ ಸಂಹಿತೆಗೆ ಉಲ್ಲಂಘನೆಯಾಗದಂತೆ ಚಟುವಟಿಕೆಗಳ ನಡೆಯದಂತೆ ಎಚ್ಚರಿಕೆ ನೀಡಲು ತಿಳಿಸಿದರು. ಇನ್ನು ಹೆಚ್ಚಿನ ರೀತಿಯಲ್ಲಿ ಕೆಲಸ ಮಾಡಬೇಕು ಎಂದರು.

ಅಬಕಾರಿ ಇಲಾಖೆ ಹಾಗೂ ವಾಣಿಜ್ಯ ತೆರಿಗೆ ಇಲಾಖೆಯವರು ಸಮನ್ವತೆಯಿಂದ ಕಾರ್ಯನಿರ್ವಹಿಸಬೇಕು. ಚುನಾವಣೆಗೆ ನಿಯೋಜಿತ ಸಂಬಂಧಿಸಿದ ಅಧಿಕಾರಿಗಳು ಇನ್ನು ಮುಂದೆ ಹೆಚ್ಚಿನ ಜವಾಬ್ದಾರಿಯಿಂದ ಕೆಲಸಗಳು ಆಗಬೇಕು. ಚೆಕ್‌ಪೋಸ್ಟ್‌ಕ್ಕಿಂತ ಉಳಿದ ಕಡೆಗಳಲ್ಲಿ ಹೆಚ್ಚಿನ ನಿಗಾವಹಿಸಿ ವಹಿಸಬೇಕು. ಚುನಾವಣಾ ಅಕ್ರಮಗಳನ್ನು ನಡೆಯದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಮತಗಟ್ಟೆ ಅಧಿಕಾರಿ ಹಾಗೂ ಸಹಾಯಕ ಮತಗಟ್ಟೆ ಅಧಿಕಾರಿಗಳ ಪ್ರಥಮ ಹಂತದ ತರಬೇತಿ ಕಾರ್ಯ ಯಶಸ್ವಿಯಾಗಿ ನಡೆಸಿದಕ್ಕೆ ಜಿಲ್ಲಾಧಿಕಾರಿಗಳು ಸಂತೋಷ ವ್ಯಕ್ತಪಡಿಸಿದರು.

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಎಂಸಿಸಿ ಮತ್ತು ಸ್ವೀಪ್ ನೋಡಲ್ ಅಧಿಕಾರಿ ಶಶಿಧರ ಕುರೇರ ಮಾತನಾಡಿ, ಆಯಾ ಮತಕ್ಷೇತ್ರದ ಸಹಾಯಕ ಚುನಾವಣಾಧಿಕಾರಿಗಳು ತಮ್ಮ ಕಾರ್ಯಗಳ ಜೊತೆಗೆ ಪ್ಲೈಯಿಂಗ್ ಸ್ಕ್ವಾಡ್, ಸ್ಟಾಟಿಕ್ ಸರ್ವೆಲೆನ್ಸ್ ತಂಡಗಳ ಕಾರ್ಯಗಳ ಮೇಲೆ ಗಮನ ಹರಿಸುವ ಕಾರ್ಯವಾಗಬೇಕು. ಏ.12 ರಿಂದ ನಾಮಪತ್ರ ಪಡೆಯುವ ಪ್ರಕ್ರಿಯೆ ಕಾರ್ಯ ಪ್ರಾರಂಭವಾಗುತ್ತಿದ್ದು, ರಾಜಕೀಯ ಪಕ್ಷಗಳ ರ್‍ಯಾಲಿ, ಮೆರವಣಿಗೆ ಬಗ್ಗೆ ಹೆಚ್ಚಿನ ನಿಗಾವಹಿಸುವಂತೆ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ, ಅಪರ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ ಸೇರಿದಂತೆ ಆಯಾ ಮತಕ್ಷೇತ್ರಗಳ ಸಹಾಯಕ ಚುನಾವಣಾಧಿಕಾರಿಗಳು, ತಹಸೀಲ್ದಾರರು, ವಿವಿಧ ನೋಡಲ್ ಅಧಿಕಾರಿಗಳು ಇದ್ದರು. ಕೋಟ್..

ಜಿಲ್ಲೆಯಲ್ಲಿ ಬಿಸಿಲಿನ ತಾಪ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಆದ್ದರಿಂದ ಬಿಸಿಲಿನಲ್ಲಿ ಕೆಲಸ ಮಾಡುತ್ತಿರುವ ವಿವಿಧ ಚೆಕ್‌ಪೋಸ್ಟ್‌ ಸಿಬ್ಬಂದಿಗೆ ಕ್ಯಾಪ್‌ಗಳ ಜೊತೆಗೆ ಎಲ್ಲ ರೀತಿಯ ಅಗತ್ಯ ಸೌಲಭ್ಯಗಳನ್ನು ನೀಡಲಾಗುತ್ತಿದೆ.

ಜಾನಕಿ ಕೆ.ಎಂ, ಜಿಲ್ಲಾ ಚುನಾವಣಾಧಿಕಾರಿ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಬ್ಬು ಬೆಳೆಗಾರರಿಗೆ ₹300 ಕೋಟಿ ಬಿಡುಗಡೆ
ಮಾ.2ಕ್ಕೆ 10ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ