ಮಾದಕ ವಸ್ತುಗಳ ನಿಯಂತ್ರಣದ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ವೆಂಕಟೇಶ್ ಸೂಚನೆಕನ್ನಡಪ್ರಭ ವಾರ್ತೆ ಚಿತ್ರದುರ್ಗ
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ NCORD (Narco Coordination center) ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಅಬಕಾರಿ, ಅರಣ್ಯ, ಕೃಷಿ ಹಾಗೂ ತೋಟಗಾರಿಕೆ ಅಧಿಕಾರಿಗಳು ಗಾಂಜಾ ಬೆಳೆಯುವ ಪ್ರದೇಶಗಳಲ್ಲಿ ಕಣ್ಗಾವಲು ಇರಿಸುವುದರೊಂದಿಗೆ, ಕೂಂಬಿಂಗ್ ಕಾರ್ಯಾಚರಣೆ ನಡೆಸಬೇಕು ಎಂದು ನಿರ್ದೇಶಿಸಿದರು
ಶಾಲಾ ಕಾಲೇಜುಗಳ ಆಡಳಿತ ಸಂಸ್ಥೆಗಳು ತಮ್ಮ ಶಿಕ್ಷಣ ಸಂಸ್ಥೆ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳ ಮಾರಾಟ ಹಾಗೂ ಬಳಕೆ ಬಗ್ಗೆ ತೀವ್ರ ನಿಗಾ ವಹಿಸಬೇಕು. ಯಾವುದೇ ಅಕ್ರಮ ಚಟುವಟಿಕೆಗಳು, ವಿದ್ಯಾರ್ಥಿಗಳ ವರ್ತನೆಯಲ್ಲಿ ಅನುಮಾನ ಕಂಡುಬಂದರೆ ಕೂಡಲೆ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡುವಂತೆ ಸೂಚನೆ ನೀಡಿದರು.ಹಿರಿಯೂರು ತಾಲೂಕು ಕಂದಿಕೆರೆ ಗ್ರಾಮದ ಪ್ರಾವಿಜನ್ ಸ್ಟೋರ್ ಒಂದರಲ್ಲಿ ಮದ್ಯ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಈಗಾಗಲೇ ಪ್ರಕರಣ ದಾಖಲಿಸಲಾಗಿದೆ. ಪ್ರಾವಿಜನ್ ಸ್ಟೋರ್ಗೆ ಮದ್ಯ ಸರಬರಾಜು ಮಾಡಿದ ಮದ್ಯದ ಅಂಗಡಿಯ ಲೈಸೆನ್ಸ್ (ಸನ್ನದು) ಅಮಾನತು ಮಾಡಲು ಶಿಫಾರಸ್ಸು ಮಾಡುವಂತೆ ಜಿಲ್ಲಾಕಾರಿ ಟಿ.ವೆಂಕಟೇಶ್ ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಮಾತನಾಡಿ, ಮಾದಕ ವ್ಯಸನ ಹಾಗೂ ಅಪರಾಧ ಕೃತ್ಯಗಳಿಗೆ ನೇರ ಸಂಬಂಧಿದೆ. ಮಾದಕ ವ್ಯಸನಿಗಳು ಮಾನಸಿಕ ಸ್ಥಿಮಿತ ಕಳೆದುಕೊಳ್ಳುವುದರಿಂದ ಕೊಲೆ, ಅತ್ಯಾಚಾರ ಮುಂತಾದ ಅಪರಾಧ ಕೃತ್ಯವೆಸಗುತ್ತಾರೆ. ಮಾದಕ ಸೇವನೆಯ ದುಷ್ಪರಿಣಾಮ, ಅಪರಾಧ ಹಾಗೂ ಕಾನೂನಿನ ಬಗ್ಗೆ ರಜೆಯ ಬಳಿಕ ಶಾಲಾ ಕಾಲೇಜುಗಳು ಪ್ರಾರಂಭಗೊಂಡ ನಂತರ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಜಿಲ್ಲೆಯಾದ್ಯಂತ ಹಮಿಕೊಳ್ಳಲಾಗುವುದು ಎಂದು ಹೇಳಿದರು.
ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೋಮಶೇಖರ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜೆ.ಕುಮಾರಸ್ವಾಮಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಭಾರತಿ ಬಣಕಾರ್, ಜಿಲ್ಲಾ ಔಷಧ ನಿಯಂತ್ರಕ ಗಿರೀಶ್ ಸೇರಿದಂತೆ ವಿವಿಧ ಶಾಲಾ ಕಾಲೇಜುಗಳು ಪ್ರಾಂಶುಪಾಲರು ಉಪಸ್ಥಿತರಿದ್ದರು.