ಕನ್ನಡಪ್ರಭ ವಾರ್ತೆ ಪಾಂಡವಪುರ
ಪಟ್ಟಣದ ತಾಲೂಕು ಪಂಚಾಯ್ತಿ ಕಚೇರಿ ಸಭಾಂಗಣದಲ್ಲಿ ಆರೋಗ್ಯ ಇಲಾಖೆಯಿಂದ ಗ್ರಾಪಂ ಅಧಿಕಾರಿಗಳು ಹಾಗೂ ಅಧ್ಯಕ್ಷರು, ಉಪಾಧ್ಯಕ್ಷರಿಗೆ ಡೆಂಘೀ ಜ್ವರ ನಿಯಂತ್ರಣ ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಡೆಂಘೀ ಜ್ವರ ದಿನೇ ದಿನೇ ಅಪಾಯಕಾರಿಯಾಗುತ್ತಿದೆ. ಜ್ವರಕ್ಕೆ ಹಲವು ಮಂದಿ ಸಾವನಪ್ಪಿದ್ದಾರೆ. ಆದ್ದರಿಂದ ತಾಲೂಕಿನ ಡೆಂಘೀ ಜ್ವರ ನಿಯಂತ್ರಣಕ್ಕೆ ತರುವ ಮೂಲಕ ಸಾವು ನೋವುಗಳನ್ನು ತಪ್ಪಿಸಲು ಕೆಲಸ ಮಾಡಬೇಕು ಎಂದರು.ಡೆಂಘೀ ಜ್ವರಕ್ಕೆ ಕಾರಣವಾಗುವ ಸೊಳ್ಳೆ, ಅಶುದ್ಧ ನೀರಿನಲ್ಲಿ ಉತ್ಪತ್ತಿಯಾಗುವುದರಿಂದ ಮನೆ ಹಾಗೂ ಅಕ್ಕಪಕ್ಕದಲ್ಲಿ ಜಾಗದಲ್ಲಿ ಸಂಗ್ರಹವಾಗಿ ನೀರನ್ನು ಸ್ವಚ್ಛಗೊಳಿಸಬೇಕು. ಮನೆ ತೊಟ್ಟಿಗಳಲ್ಲಿ ಸಂಗ್ರಹಿಸಿರುವ ನೀರನ್ನು 2-3 ದಿನಕ್ಕೊಮ್ಮೆ ಬದಲಾವಣೆ ಮಾಡಿ ಸ್ವಚ್ಛವಾಗಿಟ್ಟುಕೊಳ್ಳಬೇಕು. ಮಲಗಲು ಸೊಳ್ಳೆಪರದೆ ಕಟ್ಟಿಕೊಳ್ಳಬೇಕು. ಗ್ರಾಪಂ ವ್ಯಾಪ್ತಿಯ ಹಳ್ಳಿಗಳಲ್ಲಿ ಸ್ವಚ್ಛತೆ ಆದ್ಯತೆ, ಗ್ರಾಪಂ ಅಧಿಕಾರಿಗಳು ಸಾರ್ವಜನಿಕರಿಗೆ ಅರಿವು ಮೂಡಿಸಬೇಕು ಎಂದರು.
ಡೆಂಘೀ ಬಗ್ಗೆ ಆರೋಗ್ಯ ಇಲಾಖೆಯ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ, ಪಂಚಾಯ್ತಿಯಿಂದ ಅರಿವು ಮೂಡಿಸಲು ಬಂದರೆ ಸಾರ್ವಜನಿಕರು ಸಹಕಾರ ನೀಡಬೇಕು. ಕಳೆದ 10 ವರ್ಷದ ಹಿಂದೆ ಡೆಂಘೀ ಜ್ವರ ಹೆಚ್ಚಾಗಿ ನಗರ ಪ್ರದೇಶದಲ್ಲಿ ಕಾಣಿಸಿಕೊಳ್ಳುತ್ತಿತ್ತು. ಈಗ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಾಗಿರುವುದರಿಂದ ಗ್ರಾಪಂ ಅಧಿಕಾರಿಗಳು, ಸದಸ್ಯರು ಹೆಚ್ಚಿನ ಜವಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು ಎಂದರು.