ಧಾರ್ಮಿಕ, ಸಾಂಸ್ಕೃತಿಕ ಬುನಾದಿಯನ್ನು ಗಟ್ಟಿಗೊಳಿಸುವ ಕಾರ್ಯ ನಡೆಯಲಿ: ಶಾಸಕ ಮಾನೆ

KannadaprabhaNewsNetwork |  
Published : Dec 04, 2025, 02:15 AM IST
ಫೋಟೊ: 3ಎಚ್‌ಎನ್‌ಎಲ್4 | Kannada Prabha

ಸಾರಾಂಶ

ಮಾನಸಿಕ ಶಾಂತಿ ಕದಡುವ ಪಾಶ್ಚಿಮಾತ್ಯ ಸಂಸ್ಕೃತಿಯ ಅನುಕರಣೆಗೆ ಯುವಕರು ಮುಗಿಬೀಳುತ್ತಿದ್ದಾರೆ ಎಂದು ಶಾಸಕ ಶ್ರೀನಿವಾಸ ಮಾನೆ ವಿಷಾದ ವ್ಯಕ್ತಪಡಿಸಿದರು.

ಹಾನಗಲ್ಲ: ಪ್ರಸ್ತುತ ಸಂದರ್ಭದಲ್ಲಿ ಆಧುನಿಕತೆಯ ಪ್ರಭಾವ ಯುವ ಸಮೂಹವನ್ನು ಆವರಿಸಿದ್ದು, ಧಾರ್ಮಿಕ ಕಾರ್ಯಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ದೂರ ಸರಿಯುತ್ತಿದ್ದಾರೆ. ಮಾನಸಿಕ ಶಾಂತಿ ಕದಡುವ ಪಾಶ್ಚಿಮಾತ್ಯ ಸಂಸ್ಕೃತಿಯ ಅನುಕರಣೆಗೆ ಯುವಕರು ಮುಗಿಬೀಳುತ್ತಿದ್ದಾರೆ ಎಂದು ಶಾಸಕ ಶ್ರೀನಿವಾಸ ಮಾನೆ ವಿಷಾದ ವ್ಯಕ್ತಪಡಿಸಿದರು.

ತಾಲೂಕಿನ ನರೇಗಲ್ ಗ್ರಾಮದಲ್ಲಿ ವೀರಭದ್ರೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ನಡೆದ ಧರ್ಮಸಭೆಯಲ್ಲಿ ಮಾತನಾಡಿದರು.ಇಂದಿನ ಸಂದಿಗ್ಧ ಸಂದರ್ಭದಲ್ಲಿ ಧಾರ್ಮಿಕ ಮತ್ತು ಸಾಂಸ್ಕೃತಿಕ ಬುನಾದಿಯನ್ನು ಗಟ್ಟಿಗೊಳಿಸುವ ಕಾರ್ಯ ಪ್ರಾಮಾಣಿಕವಾಗಿ ನಡೆಯಬೇಕಿದೆ. ಮಠ, ಮಂದಿರಗಳ ಸಾಮಿಪ್ಯದಿಂದ ಮಾನಸಿಕ ನೆಮ್ಮದಿ ಕಂಡುಕೊಳ್ಳಬಹುದು ಎನ್ನುವ ಸತ್ಯದ ಅರಿವನ್ನು ಯುವಕರಿಗೆ ಮಾಡಿಸುವ ಅನಿವಾರ್ಯತೆ ಇದೆ. ಪ್ರಪಂಚದ ಕೆಲವು ದೇಶಗಳು ಸಂಪತ್ತಿನಲ್ಲಿ ಶ್ರೀಮಂತವಾಗಿರಬಹುದು. ಆದರೆ ಅಂಥ ದೇಶಗಳ ಜನರು ಜೀವನದಲ್ಲಿ ಶಾಂತಿ, ನೆಮ್ಮದಿ ಅರಸಿ ಭಾರತಕ್ಕೆ ಆಗಮಿಸುತ್ತಿದ್ದಾರೆ. ಇಲ್ಲಿನ ಸಾಮರಸ್ಯದ ಬದುಕು ಇಡೀ ಪ್ರಪಂಚಕ್ಕೆ ಮಾದರಿಯಾಗಿದ್ದು, ಸಂಸ್ಕೃತಿ ಶ್ರೀಮಂತವಾಗಿದೆ. ಅದನ್ನು ಉಳಿಸಿ-ಬೆಳೆಸುವ ಮಹತ್ವದ ಹೊಣೆಗಾರಿಕೆ ಪ್ರತಿಯೊಬ್ಬರ ಮೇಲಿದೆ ಎಂದರು.

ಸಾನ್ನಿಧ್ಯ ವಹಿಸಿದ್ದ ಹಾವೇರಿಯ ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ ಮಾತನಾಡಿ, ಶರಣರ ನಾಡಿನಲ್ಲಿ ಇಂದು ಜಾತಿ, ಧರ್ಮ, ಪಂಥ ಎಂದು ಬೇಧ ಎಣಿಸುವ ಮೂಲಕ ಸಾಮರಸ್ಯದ ಅಡಿಪಾಯಕ್ಕೆ ಕೊಡಲಿಪೆಟ್ಟು ಹಾಕಲಾಗುತ್ತಿದೆ. ಶಸ್ತಾಸ್ತ್ರದಿಂದ ಸಮಾಜ ಪರಿವರ್ತನೆ ಮಾಡಲು ಸಾಧ್ಯವಿಲ್ಲ. ಶಾಸ್ತ್ರದಿಂದ ಮಾತ್ರ ಪತಿವರ್ತನೆ ಸಾಧ್ಯವಿದೆ ಎನ್ನುವ ಸತ್ಯವನ್ನು ಪ್ರತಿಯೊಬ್ಬರೂ ಅರಿಯಬೇಕಿದೆ. ಆಧುನಿಕ ಜೀವನಶೈಲಿ ರೂಢಿಸಿಕೊಂಡ ನಾವಿಂದು ನಮ್ಮ ಪರಂಪರೆ ಮರೆತ ಪರಿಣಾಮ ನಮ್ಮದೇ ಆಚಾರ, ವಿಚಾರಗಳು ಅಳಿವಿನ ಅಂಚಿಗೆ ಬಂದು ತಪುಲಿವೆ. ಪಾಶ್ಚಾತ್ಯ ಸಂಸ್ಕೃತಿಗೆ ಮಾರುಹೋದ ಇಂದಿನ ನವ ಜನಾಂಗ ಬಹುಮಾಧ್ಯಮ, ಜಾಗತೀಕರಣ, ಉದಾರೀಕರಣಗಳ ತೆವಲಿಗೆ ಸಿಕ್ಕು ತಂದೆ-ತಾಯಿಯನ್ನು ನಿರ್ಲಕ್ಷಿಸುತ್ತಿರುವ ಪರಿಣಾಮವಾಗಿ ಕೌಟುಂಬಿಕ ಪ್ರೀತಿ, ವಾತ್ಸಲ್ಯ, ಸಹಬಾಳ್ವೆ, ಹೊಂದಾಣಿಕೆಗಳಿಂದ ವಿಮುಖರಾಗಿದ್ದಾರೆ. ಆತ್ಮೋನ್ನತಿಯ ದಿವಾಳಿತನದ ಅಂಚಿನಲ್ಲಿರುವ ಯುವ ಸಮೂಹಕ್ಕೆ ಸೂಕ್ತ ಮಾರ್ಗದರ್ಶನದ ಅವಶ್ಯಕತೆ ಇದೆ ಎಂದರು.

ಕೂಡಲದ ಗುರುನಂಜೇಶ್ವರ ಮಠದ ಗುರುಮಹೇಶ್ವರ ಸ್ವಾಮೀಜಿ, ಹೇರೂರಿನ ಗುಬ್ಬಿ ನಂಜುಂಡೇಶ್ವರ ಮಠದ ನಂಜುಂಡ ಪಂಡಿತಾರಾಧ್ಯ ಸ್ವಾಮೀಜಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರೈತ ಮೋರ್ಚಾಪ್ರತಿಭಟನೆ
ಜನಾಭಿಪ್ರಾಯದಡಿ ಪ್ರಜಾಸೌಧ ನಿರ್ಮಾಣ: ಎಸಿ ಶ್ವೇತಾ ಬೀಡಿಕರ