ಕನ್ನಡಪ್ರಭ ವಾರ್ತೆ ಮಳವಳ್ಳಿ
ತಾಲೂಕಿನ ಅಮೃತೇಶ್ವರನಹಳ್ಳಿ ಕಾಲೋನಿಯಲ್ಲಿ ಶ್ರೀಮಹಾಗಣಪತಿ ಸೇವಾ ಸಮಿತಿಯಿಂದ ನಡೆದ ಮಹಾಗಣಪತಿ ದೇವಾಲಯದ ಪುನರ್ ಪ್ರತಿಷ್ಠಾಪನೆ ಮತ್ತು ವಿಮಾನ ಗೋಪುರ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿ, ಭವಿಷ್ಯದ ದೃಷ್ಟಿಯಿಂದ ಯುವ ಪೀಳಿಗೆಗೆ ಇರಬೇಕಾದ ಧಾರ್ಮಿಕ ಪ್ರಜ್ಞೆ, ಸಂಸ್ಕೃತಿ, ಪರಂಪರೆಯನ್ನು ಪೂರ್ವಜರ ಹಾದಿಯಲ್ಲಿಯೇ ಇಂತಹ ಧಾರ್ಮಿಕ ಕಾರ್ಯಕ್ರಮ ಮುಂದುವರೆಸಿಕೊಂಡು ಹೋಗುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದರು.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಇಳಿ ವಯಸ್ಸಿನಲ್ಲಿಯೂ ರಾಜ್ಯಸಭೆ ಸದಸ್ಯರಾಗಿದ್ದ ಅವಧಿಯಲ್ಲಿ ತಮ್ಮ ಸಿಕ್ಕ ಅವಕಾಶದಲ್ಲಿ ರಾಜ್ಯದ ನೆಲ, ಜಲ ಭಾಷೆಯ ಅಭಿವೃದ್ಧಿಗಾಗಿ ನಿರಂತರವಾಗಿ ಶ್ರಮಿಸುವ ಮೂಲಕ ಅಭಿಮಾನವನ್ನು ಸಾಬೀತು ಪಡಿಸಿದ್ದಾರೆ ಎಂದರು.ಅದೇ ರೀತಿ ಜಿಲ್ಲೆಯ ಜನರ ಅರ್ಶೀವಾದದಿಂದ ಸಂಸದರಾಗಿ ಆಯ್ಕೆಯಾಗಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಕೇಂದ್ರದ ಬಹು ದೊಡ್ಡ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರಾಗಿ ಉತ್ತಮ ಸೇವೆ ಸಲ್ಲಿಸುತ್ತಿದ್ದಾರೆ. ಜನರು ನಮ್ಮ ಕುಟುಂಬದ ಮೇಲೆ ಇಟ್ಟಿರುವ ಪ್ರೀತಿ, ವಿಶ್ವಾಸಕ್ಕೆ ಸದಾ ಚಿರಋಣಿಯಾಗಿರುವುದಾಗಿ ಹೇಳಿದರು.
ಸರ್ವ ವ್ಯಾಪ್ತಿಯಲ್ಲಿ ನೆಲೆಸಿ ಸಕಲ ಶಕ್ತಿಯನ್ನು ಹೊಂದಿರುವ ದೇವರನ್ನು ಪೂಜಿಸಿದರೇ ಜೀವನದಲ್ಲಿ ನೆಮ್ಮದಿ ಕಾಣಬಹುದು. ಮನುಷ್ಯನ ಜನ್ಮವನ್ನು ಕೊಡುವ ಜೊತೆಗೆ ಗಾಳಿ ಬೆಳಕನ್ನು ನೀಡಿ ಜೀವಿಸಲು ಅನುವು ಮಾಡಿಕೊಟ್ಟಿರುವ ಭಗವಂತವನ್ನು ಪ್ರತಿಯೊಬ್ಬರು ಪೂಜಿಸಬೇಕಿದೆ ಎಂದರು.
ಮತ್ತಿತಾಳೇಶ್ವರ ಸ್ವಾಮಿಯ ಬಸವಪ್ಪ ಅವರ ದಿವ್ಯಸಾನಿಧ್ಯದಲ್ಲಿ ಶಿಖರ ಕಳಸ ಪ್ರತಿಷ್ಠಾಪನೆ, ಕುಂಭಾಭಿಷೇಕ, ನೇತ್ರೋನ್ಮಿಲನ, ನವಗ್ರಹ ಹೋಮ, ವಾಸ್ತು ಹೋಮ, ಪ್ರಧಾನ ಹೋಮ, ಪೂರ್ಣಹುತಿ, ಮಹಮಂಗಳಾರತಿ, ತೀರ್ಥಪ್ರಸಾದ ವಿನಿಯೋಗದ ಪೂಜಾ ಕಾರ್ಯಕ್ರಮ ಅಂಚೆದೊಡ್ಡಿಯ ಗುರುಮಠದ ಎಸ್.ನಾಗಭೂಷಣಾರಾದ್ಯ ಅವರ ನೇತೃತ್ವದಲ್ಲಿ ನಡೆಯಿತು.