ಕನ್ನಡಪ್ರಭ ವಾರ್ತೆ ಮಂಡ್ಯ
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಾವು ಯಾವುದೇ ಕೆಲಸಗಳನ್ನು ಸಾಧ್ಯವಾಗಿರಲಿಲ್ಲ. ನಮಗೆ ಅಧಿಕಾರ ಇಲ್ಲದೆ ಸಾಕಷ್ಟು ಸಮಸ್ಯೆಗಳು ಎದುರಾಯಿತು. ಜೊತೆಗೆ ಪಕ್ಷವನ್ನೂ ಸಂಘಟಿಸಲು ಆಗಲಿಲ್ಲ ಎಂದರು.
2023ರ ಚುನಾವಣೆಯಲ್ಲಿ ಬಿಜೆಪಿ ಸರ್ಕಾರ 40 ಪರ್ಸೆಂಟ್ ಕಮಿಷನ್ ಆರೋಪದಿಂದ ಅಧಿಕಾರ ಕಳೆದುಕೊಂಡಿತು. ನಂತರ ಕಾಂಗ್ರೆಸ್ ಪಕ್ಷಕ್ಕೆ ಎಲ್ಲ ಮಹಿಳೆಯರೇ ಹೆಚ್ಚಿನ ಶಕ್ತಿ ತುಂಬಿ ಅಧಿಕಾರಕ್ಕೆ ತಂದರು. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ 136 ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಯಿತು ಎಂದು ವಿವರಿಸಿದರು.ಮುಂದಿನ ಎಲ್ಲಾ ಚುನಾವಣೆಗಳಲ್ಲೂ ಗೆಲುವು ಸಾಧಿಸಲು ಕಾಂಗ್ರೆಸ್ನ ಯುವ, ಮಹಿಳಾ ಸೇರಿದಂತೆ ಎಲ್ಲಾ ಘಟಕಗಳೂ ಒಟ್ಟಾಗಿ ಕೆಲಸ ಮಾಡಿ ಪಕ್ಷ ಅಧಿಕಾರದಲ್ಲಿರುವಂತೆ ನೋಡಿಕೊಳ್ಳುವುದು ನಮ್ಮ ಜವಾಬ್ದಾರಿಯಾಗಿದೆ ಎಂದರು.
ಮಹಿಳೆಯರಿಗೆ ಹೆಚ್ಚಿನ ಅವಕಾಶ ನೀಡಿದ ಯಾವುದಾದರೂ ಪಕ್ಷ ಎಂದರೆ ಅದು ಕಾಂಗ್ರೆಸ್. ವಿಪಕ್ಷ ನಾಯಕರಾಗಿದ್ದ ವಾಜಪೇಯಿ ಅವರು ಇಂದಿರಾಗಾಂಧಿಯವರ ಆಡಳಿತ ನೋಡಿ ಉಕ್ಕಿನ ಮಹಿಳೆ ಎಂದು ಬಿರುದು ನೀಡಿದ್ದರು. ಮಹಿಳೆಯೊಬ್ಬರನ್ನು ರಾಷ್ಟ್ರಪತಿಯನ್ನಾಗಿ, ಲೋಕಸಭಾ ಸ್ಪೀಕರ್ ಸ್ಥಾನಕ್ಕೆ ಮೊದಲ ಬಾರಿಗೆ ಮಹಿಳೆಯರನ್ನು ಆಯ್ಕೆ ಮಾಡಿದ್ದೂ ನಮ್ಮ ಕಾಂಗ್ರೆಸ್ ಪಕ್ಷ ಎಂದರು.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಪಕ್ಷ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ಮಹಿಳೆಯರು ನೀಡಿದ ಸಹಕಾರ ಮರೆಯುವಂತಿಲ್ಲ. ಇದೇ ರೀತಿ ಮುಂದೆಯೂ ನಮ್ಮ ಪಕ್ಷದ ಮೇಲೆ ಮಹಿಳೆಯರ ಸಹಕಾರ ಇರಲಿ. ಜೊತೆಗೆ ನಮ್ಮ ಸರ್ಕಾರ ಸಹ ಮಹಿಳೆಯರ ಅಭಿವೃದ್ಧಿಗೆ ಯೋಜನೆ ರೂಪಿಸುತ್ತದೆ ಎಂದರು.