ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇವೆ: ಶಾಸಕ ಇಕ್ಬಾಲ್‌ ಹುಸೇನ್‌

KannadaprabhaNewsNetwork |  
Published : Nov 16, 2024, 12:34 AM IST
15ಕೆಆರ್ ಎಂಎನ್ 11.ಜೆಪಿಜಿಶಾಸಕ ಇಕ್ಬಾಲ್ ಹುಸೇನ್  | Kannada Prabha

ಸಾರಾಂಶ

ರಾಮನಗರ: ರಾಜಕಾರಣ ಬದಲಾವಣೆಯಾದಂತೆ ಮನುಷ್ಯರ ಮನಸ್ಥಿತಿಯೂ ಬದಲಾವಣೆ ಆಗುತ್ತದೆ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದರು.

ರಾಮನಗರ: ರಾಜಕಾರಣ ಬದಲಾವಣೆಯಾದಂತೆ ಮನುಷ್ಯರ ಮನಸ್ಥಿತಿಯೂ ಬದಲಾವಣೆ ಆಗುತ್ತದೆ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕೇಂದ್ರ ಸಚಿವ ಕುಮಾರಸ್ವಾಮಿ ಹಾಗೂ ವಸತಿ ಸಚಿವ ಜಮೀರ್ ಒಂದು ಕಾಲದಲ್ಲಿ ಭಾಯ್ ಭಾಯ್ ಆಗಿದ್ದವರು. ಸ್ನೇಹಿತರಾದ ಕಾರಣ ಕರಿಯ ಅಂತ ವಿಶ್ವಾಸದಲ್ಲಿ ಅಂದ್ರೋ ಅಥವಾ ರಾಜಕಾರಣಕ್ಕಾಗಿ ಅಂದ್ರೋ ಗೊತ್ತಿಲ್ಲ ಎಂದರು.

ಜಮೀರ್ ಹೇಳಿಕೆಯಿಂದ ಮತಗಳು ಬದಲಾವಣೆಯಾಗಿವೆ ಎಂಬ ಯೋಗೇಶ್ವರ್ ಹೇಳಿಕೆಗೆ ಉತ್ತರಿಸಿದ ಅವರು, ರಾಜಕಾರಣದಲ್ಲಿ ಇದೆಲ್ಲವು ಸಾಮಾನ್ಯ. ಕುಮಾರಸ್ವಾಮಿ ಕೂಡ ಶಿವಕುಮಾರ್ ಬಗ್ಗೆ ಕೀಳು ಮಾತುಗಳನ್ನಾಡಿದ್ದಾರೆ. ಜಮೀರ್ ಕೂಡ ಕುಮಾರಸ್ವಾಮಿ ಬಗ್ಗೆ ಕೆಲ ಮಾತುಗಳನ್ನು ಬಳಸಿದ್ದಾರೆ. ಈ ವಿಷಯದಲ್ಲಿ ಮಾತನಾಡಲು ನಾವು ಚಿಕ್ಕವರು. ಇದಕ್ಕೆ ಉತ್ತರ ನೀಡುವ ಅವಶ್ಯಕತೆ ಇಲ್ಲ ಎಂದು ಹೇಳಿದರು.

ಚನ್ನಪಟ್ಟಣ ಉಪಚುನಾವಣೆಯಲ್ಲಿ ಅವರವರ ಪಕ್ಷಕ್ಕೆ ನಿಷ್ಠೆಯಿಂದ ಎಲ್ಲರು ಕೆಲಸ ಮಾಡಿದ್ದಾರೆ. ನಮ್ಮ ಸಮುದಾಯದ ವಾರ್ಡ್‌ನಲ್ಲಿ ಕಾರ್ಯಕರ್ತನಾಗಿ ಪ್ರಮಾಣಿಕವಾಗಿ ಕೆಲಸ ಮಾಡಿದ್ದೇನೆ. ಒಳ್ಳೆಯ ಫಲಿತಾಂಶ ಬರುವ ರೀತಿ ನಾನು ಕೆಲಸ ಮಾಡಿದ್ದೇನೆ ಎಂದು ಹೇಳಿದರು.

ಈ ಹಿಂದೆ ಕೂಡ‌ ಬಿಜೆಪಿ ಆಪರೇಷನ್ ಕಮಲ ಮಾಡಿ‌ ಸರ್ಕಾರ ಬೀಳಿಸಿದರು. ಬಿಜೆಪಿ ಸರ್ಕಾರ ರಚಿಸಿ ಆಡಳಿತ ನಡೆಸಿದರು. ಈಗ ಕಾಂಗ್ರೆಸ್ ಸರ್ಕಾರದಲ್ಲಿ 136 ಶಾಸಕರಿದ್ದಾರೆ. ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಉತ್ತಮ ಸರ್ಕಾರ ನಡೆಸುತ್ತಿದ್ದಾರೆ. ಎಲ್ಲಾ ವರ್ಗದ ಜನರು ಸರ್ಕಾರದ ಕಾರ್ಯ ವೈಖರಿಯನ್ನು ಮೆಚ್ಚುತ್ತಿದ್ದಾರೆ. ಐದು ವರ್ಷ ಸರ್ಕಾರ ಇರಲಿದೆ ಎಂದು ಇಕ್ಬಾಲ್ ಹುಸೇನ್ ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹರಿಹರ ಪ್ರಮುಖ ರಸ್ತೆಗಳಲ್ಲಿ ಬೀದಿದೀಪ, ಸಿಸಿ ಕ್ಯಾಮೆರಾ ಅಳವಡಿಸಿ
ಪ್ರೀತಿಸುವಂತೆ ಪೊಲೀಸ್‌ ಇನ್‌ಸ್ಪೆಕ್ಟರ್‌ಬೆನ್ನತ್ತಿದ್ದ ಮಹಿಳೆ ಈಗ ಜೈಲು ಪಾಲು