ಹಿಟ್ ಆ್ಯಂಡ್‌ ರನ್‌ಗೆ ಕಾರ್ಮಿಕ, ಕಾರುಡಿಕ್ಕಿಯಾಗಿ ಬೈಕ್‌ ಚಾಲಕ ದುರ್ಮರಣ

KannadaprabhaNewsNetwork |  
Published : May 14, 2026, 03:30 AM IST
ಪೊಟೋ: 14ಎಸ್‌ಎಂಜಿಕೆಪಿ01ನೀಟ್ ಯುಜಿ  ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಕೇಂದ್ರ ಸರ್ಕಾರದ ವೈಫಲ್ಯ ಖಂಡಿಸಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಸದಸ್ಯರು ಸಂಸದ ಬಿ.ವೈ.ರಾಘವೇಂದ್ರ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದಾಗ ಪೋಲಿಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದ ಘಟನೆ ನಡೆಯಿತು. | Kannada Prabha

ಸಾರಾಂಶ

ನಗರದಲ್ಲಿ ನಡೆದ ಎರಡು ಪ್ರತ್ಯೇಕ ರಸ್ತೆ ಅಪಘಾತದಲ್ಲಿ ಗಾರ್ಮೆಂಟ್ಸ್‌ ಕಾರ್ಮಿಕ ಹಾಗೂ ಚಾಲಕ ಮೃತಪಟ್ಟಿದ್ದಾರೆ. ಹಿಟ್ ಆ್ಯಂಡ್‌ ರನ್‌ಗೆ ಹುಣಸಮಾರನಹಳ್ಳಿ ನಿವಾಸಿ ಮಹೇಶ್ ಕುಮಾರ್ (40) ಮೃತಪಟ್ಟಿದ್ದಾರೆ. ಪತ್ನಿ ಕಲಾ (35) ಮತ್ತು ಅಪ್ರಾಪ್ತ ಮಗಳು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ನಗರದಲ್ಲಿ ನಡೆದ ಎರಡು ಪ್ರತ್ಯೇಕ ರಸ್ತೆ ಅಪಘಾತದಲ್ಲಿ ಗಾರ್ಮೆಂಟ್ಸ್‌ ಕಾರ್ಮಿಕ ಹಾಗೂ ಚಾಲಕ ಮೃತಪಟ್ಟಿದ್ದಾರೆ. ಹಿಟ್ ಆ್ಯಂಡ್‌ ರನ್‌ಗೆ ಹುಣಸಮಾರನಹಳ್ಳಿ ನಿವಾಸಿ ಮಹೇಶ್ ಕುಮಾರ್ (40) ಮೃತಪಟ್ಟಿದ್ದಾರೆ. ಪತ್ನಿ ಕಲಾ (35) ಮತ್ತು ಅಪ್ರಾಪ್ತ ಮಗಳು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಂಗಳವಾರ ರಾತ್ರಿ 8.30ರ ಸುಮಾರಿಗೆ ಮದುವೆ ಆರತಕ್ಷತೆ ಮುಗಿಸಿಕೊಂಡು ತಮ್ಮ ಬೈಕ್‌ನಲ್ಲಿ ಮನೆಗೆ ಹಿಂತಿರುಗುತ್ತಿರುವಾಗ ಚಿಕ್ಕಜಾಲ ಜಂಕ್ಷನ್‌ ಬಳಿ ವೇಗವಾಗಿ ಬಂದ ಆಡಿ ಕಾರು ಬೈಕ್‌ನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ. ಕೆಳಗೆ ಬಿದ್ದ ಸವಾರ ಮಹೇಶ್‌ ಕುಮಾರ್‌, ಹಿಂಬದಿ ಸವಾರರಾದ ಕಲಾ ಮತ್ತು ಮಗಳು ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಆಸ್ಪತ್ರೆಯ ದಾರಿ ಮಧ್ಯದಲ್ಲಿಯೇ ಮಹೇಶ್‌ ಕುಮಾರ್‌ ಮೃತಪಟ್ಟಿದ್ದಾರೆ.

ಅಪಘಾತದ ನಂತರ ಕಾರಿನ ಚಾಲಕ ವಾಹನ ನಿಲ್ಲಿಸದೇ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ. ಸ್ಥಳೀಯ ಸಿಸಿ ಕ್ಯಾಮೆರಾಗಳ ದೃಶ್ಯ ಪರಿಶೀಲನೆ ನಡೆಸಲಾಗಿದೆ. ಕಾರಿನ ನೋಂದಣಿ ಸಂಖ್ಯೆ ಆಧರಿಸಿ ಕಾರಿನ ಚಾಲಕನ ಪತ್ತೆ ಕಾರ್ಯ ಮುಂದುವರಿದಿದೆ. ಘಟನೆ ಸಂಬಂಧ ಚಿಕ್ಕಜಾಲ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅತ್ತೆ ಮನೆಗೋಗಿ ವಾಪಸ್‌

ಬರುವಾಗ ಚಾಲಕ ಸಾವು:

ಮತ್ತೊಂದು ಪ್ರಕರಣದಲ್ಲಿ ಕಾರು ಡಿಕ್ಕಿಯಾಗಿ ಬೈಕ್‌ ಸವಾರ ಮೃತಪಟ್ಟಿರುವ ಘಟನೆ ದೇವನಹಳ್ಳಿ ಸಂಚಾರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಿಲೇರಿ ಗ್ರಾಮದ ನಿವಾಸಿ, ಚಾಲಕ ಶೇಖರ್‌ (28) ಮೃತಪಟ್ಟವರು. ಈ ಸಂಬಂಧ ವಿನಯ್‌ ಕುಮಾರ್‌ ಎಂಬುವರು ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಿ ಮುರಳೀಧರನ್‌ ಸಿದ್ದಾರ್ಥ್ ಎಂಬಾತನ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ. ಶೇಖರ್‌ ಅವರು ದೇವನಹಳ್ಳಿಯಲ್ಲಿರುವ ತಮ್ಮ ಅತ್ತೆ ಮನೆಗೆ ಹೋಗಿ ಅವರ ಮನೆಗೆ ಹಿಂದಿರುಗುವಾಗ ದೇವನಹಳ್ಳಿಯ ಕೋಟೆ ಕ್ರಾಸ್‌ನಲ್ಲಿ ಮಂಗಳವಾರ ರಾತ್ರಿ 10.30 ರ ಸುಮಾರಿಗೆ ವೇಗವಾಗಿ ಬಂದ ಕಾರು ಹಿಂದಿನಿಂದ ಬಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕೆಳಗೆ ಬಿದ್ದ ಶೇಖರ್‌ ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು, ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಕಾರನ್ನು ವಶಕ್ಕೆ ಪಡೆದು ತನಿಖೆ ಕೈಗೊಳ್ಳಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

163 ವೈದ್ಯ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ
ಅನೈತಿಕ ಸಂಬಂಧ ಮುಚ್ಚಿಕೊಳ್ಳಲುಸುಳ್ಳು ವಂಚನೆಯ ಕಥೆ ಕಟ್ಟಿದ ಪತಿ