ಕನ್ನಡಪ್ರಭ ವಾರ್ತೆ ಚಳ್ಳಕೆರೆ
ಅವರು, ಪ್ರವಾಸಿಮಂದಿರದಲ್ಲಿ ಪಕ್ಷದ ಸಂಘಟನಾತ್ಮಕ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ಇದೇ ವೇಳೆ ಪಕ್ಷದ ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಪಿ.ತಿಪ್ಪೇಸ್ವಾಮಿಯವರನ್ನು ಪಕ್ಷದ ಮುಖಂಡರು, ಕಾರ್ಯಕರ್ತರ ಒಕ್ಕೊರಲಿನ ಅಭಿಪ್ರಾಯದಂತೆ ಅಧ್ಯಕ್ಷರಾಗಿ ಅವಿರೋಧವಾಗಿ ಮರು ಆಯ್ಕೆ ಮಾಡಲಾಯಿತು. ಕಾರ್ಯಕರ್ತರು, ಮುಖಂಡರ ಪ್ರೀತಿ, ವಿಶ್ವಾಸ, ಗೌರವಕಂಡು ನನಗೆ ಹೆಚ್ಚು ಸಂತೋಷವಾಗಿದೆ. ನೀವೆಲ್ಲರೂ ಸಹಕಾರ ನೀಡಿದರೆ ಲೋಕಸಭೆಯೂ ಸೇರಿ ಎಲ್ಲಾ ಚುನಾವಣೆಗಳಲ್ಲೂ ಗೆಲುವು ನಮ್ಮದಾಗುತ್ತದೆ ಎಂದರು.ಜೆಡಿಎಸ್ ಪಕ್ಷದ ಹಿರಿಯ ಮುಖಂಡರಾದ ನಗರಂಗೆರೆ ಸಣ್ಣಬೋರಣ್ಣ, ಕಲಮರಹಳ್ಳಿಶಿವಣ್ಣ, ಹೆಗ್ಗೆರೆ ಆನಂದಪ್ಪ, ಹುಲಿಕುಂಟೆವೀರೇಂದ್ರಪ್ಪ, ಬೆಳಗೆರೆಚಂದ್ರಣ್ಣ, ಉದಯಕುಮಾರ್, ರಾಮಣ್ಣ, ಸುನೀಲ್, ದೇವರಾಜಣ್ಣ, ನಗರಸಭಾ ಸದಸ್ಯರಾದ ಸಿ.ಶ್ರೀನಿವಾಸ್, ವಿ.ವೈ.ಪ್ರಮೋದ್, ಕವಿತಾನಾಯಕಿ, ನಾಗಮಣಿ, ನಿರ್ಮಲ, ತಿಪ್ಪಮ್ಮ, ವಿಶುಕುಮಾರ್, ಬಹೀರ್ಹಯಾತ್, ಜೆ.ಮಂಜುನಾಥ, ಕುಲುಮೆಭಾಷ ಮುಂತಾದವರಿದ್ದರು.