ಕನ್ನಡಪ್ರಭ ವಾರ್ತೆ ಮದ್ದೂರು
ಪಟ್ಟಣದ ತಾಪಂ ಸಭಾಂಗಣದಲ್ಲಿ ಸೋಮವಾರ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಕಂದಾಯ ಮತ್ತು ಕಾರ್ಮಿಕ ಇಲಾಖೆ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ವಿದ್ಯುತ್ ಉಪಕರಣಗಳ ಕಿಟ್ ವಿತರಿಸಿ ಮಾತನಾಡಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರ ಕಾರ್ಮಿಕ ಇಲಾಖೆ ಮೂಲಕ ನೋಂದಾಯಿತ ಕಾರ್ಮಿಕ ಫಲಾನುಭವಿಗಳಿಗೆ ಪಿಂಚಣಿ, ಅಪಘಾತ ವಿಮಾ ಪರಿಹಾರ, ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಹಾಯಧನ ಸೇರಿದಂತೆ ಹತ್ತು ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಕಾರ್ಮಿಕ ಇಲಾಖೆ ಅಧಿಕಾರಿಗಳು ಸೌಲಭ್ಯಗಳನ್ನು ತಲುಪಿಸಬೇಕು ಎಂದು ಸಲಹೆ ನೀಡಿದರು.ಕಾನೂನು ಸೇವಾ ಪ್ರಾಧಿಕಾರ, ತಾಲೂಕು ಕಾನೂನು ಸೇವಾ ಸಮಿತಿ ಮೂಲಕ ನ್ಯಾಯಾಲಯದಲ್ಲಿ ಇರುವ ಕಾರ್ಮಿಕರು ಒಳಗೊಂಡಂತೆ ಜನಸಾಮಾನ್ಯರ ವಾಜ್ಯಗಳನ್ನು ಆದಷ್ಟು ರಾಜೀಸಂಧಾನದ ಮೂಲಕ ಬಗೆಹರಿಸುವ ನಡೆಸುತ್ತಿದೆ. ಇದರಿಂದ ಕಕ್ಷಿದಾರರಿಗೆ ಹಣ ಮತ್ತು ಸಮಯ ಉಳಿತಾಯದ ಜೊತೆಗೆ ನ್ಯಾಯಾಲಯದಲ್ಲಿ ವಿಲೇವಾರಿಯಾಗದೆ ಬಾಕಿ ಉಳಿದಿರುವ ಮೊಕದ್ದಮ್ಮೆಗಳ ಶೀಘ್ರ ಇತ್ಯರ್ಥಕ್ಕೆ ಸಹಕಾರಿಯಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಮಂಡ್ಯ ಉಪ ವಿಭಾಗದ ಕಾರ್ಮಿಕ ಅಧಿಕಾರಿ ಸುಭಾಷ್ ಎಂ.ಆಲದಕಟ್ಟಿ ಅಧ್ಯಕ್ಷತೆ ವಹಿಸಿದ್ದರು. ವಕೀಲ ಎಂ. ಮಹೇಶ್ ಸಂಪನ್ಮೂಲ ಭಾಷಣ ಮಾಡಿದರು. ಎಂ.ಎನ್.ಶಿವಣ್ಣ, ಕಾರ್ಯದರ್ಶಿಎಂ.ಜೆ. ಸುಮಂತ್, ಕಾರ್ಮಿಕ ನಿರೀಕ್ಷಕಿ ನಾಗರತ್ನ ಭಾಗವಹಿಸಿದ್ದರು.