ಶಿಗ್ಗಾಂವಿ: ಪ್ರತಿಯೊಬ್ಬರೂ ಆರೋಗ್ಯದ ಪರೀಕ್ಷೆ ಮಾಡಿಸಿಕೊಂಡು ಆರೋಗ್ಯವಂತರಾಗಬೇಕು ಎಂದು ಕಟ್ಟಡ ಕಾರ್ಮಿಕರ ಸಂಘದ ರಾಜ್ಯಾಧ್ಯಕ್ಷ ಡಿ.ಎಸ್. ಓಲೇಕಾರ ತಿಳಿಸಿದರು.ತಾಲೂಕಿನ ಕ್ಯಾಲಕೊಂಡ ಗ್ರಾಮದ ಆಯುಷ್ಮಾನ ಅರೋಗ್ಯ ಮಂದಿರದಲ್ಲಿ ಕಟ್ಟಡ ಕಾರ್ಮಿಕ ಸಂಘ ಮತ್ತು ಕಾರ್ಮಿಕ ಇಲಾಖೆಯಿಂದ ಕಾರ್ಮಿಕರಿಗೆ ಉಚಿತ ಆರೋಗ್ಯ ಶಿಬಿರದಲ್ಲಿ ಮಾತನಾಡಿ, ಕೆಲಸದ ಜಂಜಾಟದಲ್ಲಿ ಕಾರ್ಮಿಕರು ತಮ್ಮ ಆರೋಗ್ಯದ ಕಡೆಗೆ ಗಮನ ಹರಿಸುವುದಿಲ್ಲ. ಇದರಿಂದ ಅರೋಗ್ಯ ಹಾಳಾಗುತ್ತಿದೆ. ಪ್ರತಿಯೊಬ್ಬರೂ ಆರೋಗ್ಯದ ಕಡೆಗೆ ಹೆಚ್ಚು ಕಾಳಜಿ ವಹಿಸಬೇಕು ಎಂದರು.
ಹಾವೇರಿ: ಸಮೀಪದ ದೇವಗಿರಿ ಬ್ಯಾಂಕ್ ಆಫ್ ಬರೋಡಾ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವಿಬ್ಸೆಟಿಯಲ್ಲಿ ನಿರುದ್ಯೋಗಿ ಯುವಕ ಮತ್ತು ಯುವತಿಯರಿಗೆ ಏಪ್ರಿಲ್ನಲ್ಲಿ 10 ದಿನಗಳ ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿ ಆಯೋಜಿಸಲಾಗಿದೆ.
ಪಾನಿಪುರಿ, ಸೇವಪುರಿ, ದಹಿ ಪೂರಿ, ಏಗ್ರೈಸ್, ನೂಡಲ್ಸ್, ಗೋಬಿಮಂಚೂರಿ, ಪಾವ್ಬಾಜಿ, ವಡಾಪಾವ್ ಇತ್ಯಾದಿ ತಯಾರಿಕೆ ಬಗ್ಗೆ ತರಬೇತಿ ನೀಡಲಾಗುವುದು. ಅಭ್ಯರ್ಥಿಗಳು 18ರಿಂದ 45 ವರ್ಷದೊಳಗಿರಬೇಕು ಹಾಗೂ ಜಿಲ್ಲೆಯ ಬಿಪಿಎಲ್ ಕಾರ್ಡ್ ಹೊಂದಿದ ಅಭ್ಯರ್ಥಿಗಳಿಗೆ ಮಾತ್ರ ತರಬೇತಿ ನೀಡಲಾಗುವುದು ಎಂದು ಸಂಸ್ಥೆಯ ನಿರ್ದೇಶಕರು ತಿಳಿಸಿದ್ದಾರೆ.ಹೆಚ್ಚಿನ ಮಾಹಿತಿಗಾಗಿ ನಿರ್ದೇಶಕರು, ಬ್ಯಾಂಕ್ ಆಫ್ ಬರೋಡಾ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವಿಬ್ಸೆಟಿ, ಡಿಸಿ ಆಫೀಸ್ ಕಟ್ಟಡದ ಹಿಂಭಾಗ, ದೇವಗಿರಿ, ಹಾವೇರಿ ಮೊ. 8660219375 ಸಂಪರ್ಕಿಸಲು ಕೋರಲಾಗಿದೆ.