ಕಾರ್ಮಿಕರು ಸೌಲಭ್ಯಗಳ ಸದುಪಯೋಗ ಪಡೆಯಿರಿ: ರಮೇಶ ಜಾರಕಿಹೊಳಿ

KannadaprabhaNewsNetwork |  
Published : Sep 29, 2024, 01:54 AM IST
ಗೋಕಾಕ: ಕಟ್ಟಡ ಕಾರ್ಮಿಕರು ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಶ್ರಮಶಕ್ತಿ ಯೋಜನೆಯಡಿ ನೋಂದಾಯಿತ ಕಾರ್ಮಿಕರಿಗೆ ಶಾಸಕ ರಮೇಶ ಜಾರಕಿಹೊಳಿ ಕಿಟ್ ವಿತರಿಸಿದರು. | Kannada Prabha

ಸಾರಾಂಶ

ಕಟ್ಟಡ ಕಾರ್ಮಿಕರಿಗಾಗಿ ಸರ್ಕಾರ ಹಲವಾರು ಸೌಲಭ್ಯ ನೀಡುತ್ತಿದ್ದು, ಅವುಗಳನ್ನು ಸರಿಯಾದ ರೀತಿಯಲ್ಲಿ ಸದ್ಬಳಕೆ ಮಾಡಿಕೊಳ್ಳುವಂತೆ ಶಾಸಕ ರಮೇಶ ಜಾರಕಿಹೊಳಿ ಸಲಹೆ ನೀಡಿದರು.

ಕನ್ನಡಪ್ರಭ ವಾರ್ತೆ ಗೋಕಾಕ

ಕಟ್ಟಡ ಕಾರ್ಮಿಕರಿಗಾಗಿ ಸರ್ಕಾರ ಹಲವಾರು ಸೌಲಭ್ಯ ನೀಡುತ್ತಿದ್ದು, ಅವುಗಳನ್ನು ಸರಿಯಾದ ರೀತಿಯಲ್ಲಿ ಸದ್ಬಳಕೆ ಮಾಡಿಕೊಳ್ಳುವಂತೆ ಶಾಸಕ ರಮೇಶ ಜಾರಕಿಹೊಳಿ ಸಲಹೆ ನೀಡಿದರು.

ನಗರದ ತಮ್ಮ ಗೃಹ ಕಚೇರಿಯಲ್ಲಿ ಶನಿವಾರ ಕಟ್ಟಡ ಕಾರ್ಮಿಕರು ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಶ್ರಮಶಕ್ತಿ ಯೋಜನೆಯಡಿ ನೋಂದಾಯಿತ ಕಾರ್ಮಿಕರಿಗೆ ವಿವಿಧ ಬಗೆಯ ಕಿಟ್‌ ವಿತರಿಸಿ ಮಾತನಾಡಿದರು.

ಸರ್ಕಾರ ಎಲ್ಲ ರೀತಿಯ ಕೆಲಸ ಮಾಡುವ ಸಂಘಟಿತ, ಅಸಂಘಟಿತ ಕಾರ್ಮಿಕರಿಗೆ ಅನೇಕ ಸೌಲಭ್ಯ ನೀಡುತ್ತಿದೆ. ಗೌಂಡಿ ಕಿಟ್, ಎಲೆಕ್ಟ್ರಿಷಿಯನ್ ಮಷಿನ್ ಕಿಟ್, ಪ್ಲಂಬಿಂಗ್ ಕಿಟ್, ಟೈಲ್ಸ್ ವರ್ಕ್‌ ಕಿಟ್, ರೋಡ್‌ ಕನ್ಸಟ್ರಕ್ಷನ್ ವರ್ಕ್‌ ಕಿಟ್‌ಗಳನ್ನು ಸಾವಿರಕ್ಕೂ ಹೆಚ್ಚು ಕಾರ್ಮಿಕರಿಗೆ ವಿತರಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಕಾರ್ಮಿಕ ನೀರೀಕ್ಷಕ ಅಶೋಕ ವಡ್ಡರ, ಜಿಪಂ ಮಾಜಿ ಸದಸ್ಯ ಟಿ.ಆರ್. ಕಾಗಲ, ಶಾಸಕರ ಆಪ್ತ ಸಹಾಯಕ ಭೀಮಗೌಡ ಪೋಲಿಸಗೌಡರ, ಸುರೇಶ ಸನದಿ, ನಗರಸಭೆ ಅಧ್ಯಕ್ಷ ಪ್ರಕಾಶ ಮುರಾರಿ, ಸದಸ್ಯ ಬಸವರಾಜ ಆರೇನ್ನವರ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ, ರುದ್ರಮನಿ ಹಿರೇಮಠ, ಬಸವರಾಜ ಹಿರೇಮಠ, ಬೀರಪ್ಪ ಕಮತಾರ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪರಂಗೆ ಸಿಎಂ ಸ್ಥಾನ ನೀಡದಿದ್ದರೆ ರಾಜ್ಯಕ್ಕೆ ಅಪಮಾನ ಮಾಡಿದಂತೆ
ಮೀಸಲು ವರ್ಗೀಕರಣದ ವಿರುದ್ಧ ಇಂದು ಬೆಳಗಾವಿ ಚಲೋ