ಕನ್ನಡಪ್ರಭ ವಾರ್ತೆ ಚಿಂತಾಮಣಿ
ನಗರದ ಜನಪರ ಫೌಂಡೇಷನ್ ಕಚೇರಿಯಲ್ಲಿ ಯುವಯಾನ ಬಳಗದ ವತಿಯಿಂದ ಆಯೋಜಿಸಿದ್ದ ವಿಶ್ವ ಸಮಾಜ ಕಾರ್ಯದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಾಮಾಜಿಕ ಕಾರ್ಯಕರ್ತರು ಜನರೊಂದಿಗೆ ಬೆರೆತು, ಬೆಸೆದುಕೊಂಡು ಕೆಲಸ ಮಾಡುವಂತಹ ಮನಸ್ಥಿತಿ ಅಗತ್ಯವಾಗಿದೆಯೆಂದರು.
ಸಮಾಜದಲ್ಲಿ ಎಲ್ಲ ಜಾತಿ, ಧರ್ಮಗಳಲ್ಲಿಯೂ ನೊಂದವರು, ಶೋಷಿತರು ಇರುತ್ತಾರೆ. ಸಾಮಾಜಿಕ ಕಾರ್ಯಕರ್ತರು ಯಾವುದೇ ಒಂದು ಧರ್ಮ ಅಥವಾ ಜಾತಿಯನ್ನು ಕೇಂದ್ರೀಕರಿಸಿ ಕೆಲಸ ಮಾಡಬಾರದು. ಎಲ್ಲರನ್ನೂ ಒಗ್ಗೂಡಿಸಿಕೊಂಡು, ಎಲ್ಲರೊಂದಿಗೆ ಬೆರೆತು ಕೆಲಸ ಮಾಡಿದಾಗ ಮಾತ್ರ ಬದಲಾವಣೆ ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಬದಲಾವಣೆಯ ಕಡೆಗೆ ನಾವು ಒಟ್ಟಿಗೆ ಕೆಲಸ ಮಾಡೋಣವೆಂದರು.ಪ್ರಸ್ತುತ ವರ್ಷವು ‘ಪರಿವರ್ತನೆಯ ಬದಲಾವಣೆಗಾಗಿ ಹಂಚಿಕೆಯ ಭವಿಷ್ಯ’ ಎಂಬ ಘೋಷವಾಕ್ಯದಡಿಯಲ್ಲಿ ಸಮಾಜ ಕಾರ್ಯ ದಿನಾಚರಣೆಯನ್ನು ವಿಶ್ವದಾದ್ಯಂತ ಆಚರಣೆ ಮಾಡಲಾಗುತ್ತಿದೆ. ಸಮಾಜದಲ್ಲಿ ಬದಲಾವಣೆಯ ಆಯಾಮಗಳನ್ನು ವಿವಿಧ ಸ್ಥರಗಳಲ್ಲಿ ನೋಡಲಾಗುತ್ತದೆ. ಈ ನಿಟ್ಟಿನಲ್ಲಿ ಭವಿಷ್ಯದಲ್ಲಿ ಬದಲಾವಣೆಯ ಹಾದಿಯಲ್ಲಿ ಸಾಗಬೇಕಾದರೆ ಈ ಘೋಷ್ಯವಾಕ್ಯವು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.
ಯುವಯಾನ ಬಳಗದ ಬಾಬುರೆಡ್ಡಿ ಮಾತನಾಡಿ, ಸಮಾಜದಲ್ಲಿನ ಅನ್ಯಾಯದ ವಿರುದ್ಧ ಧ್ವನಿಯಾಗಲು ಸಾಮಾಜಿಕ ಕಾರ್ಯಕರ್ತರ ಪಾತ್ರ ಮುಖ್ಯವಾದುದಾಗಿದೆ. ಜನರು ತಮಗೆ ಬೇಕಾದುದ್ದನ್ನು ತಾವೇ ಪಡೆದುಕೊಳ್ಳುವ ಹಾಗೆ ಮಾಡಬೇಕು. ಆಗ ಸಮಾಜದಲ್ಲಿ ಬದಲಾವಣೆಯ ಪರ್ವವು ಆರಂಭವಾಗುತ್ತದೆ. ಸಾಮಾಜಿಕ ಕಾರ್ಯಕರ್ತರು ಜನರು ಸ್ವಯಂ ನಿರ್ಧಾರ ಕೈಗೊಳ್ಳುವ ಹಾಗೆ ಮಾಡುವ ರೀತಿಯಲ್ಲಿ ಕೆಲಸ ಮಾಡಬೇಕಿದೆ ಎಂದರು.
ಬೆಂಗಳೂರು ಉತ್ತರ ವಿವಿ ಸಾಮಾಜಿಕ ಕಾರ್ಯಕರ್ತೆ ಗಂಗೋತ್ರಿ, ಬೆಂಗಳೂರು ಉತ್ತರ ವಿವಿ ವ್ಯಾಪ್ತಿಯ ಕೊಂಗಾಡಿಯಪ್ಪ ಕಾಲೇಜಿನ ಸಾಮಾಜಿಕ ಕಾರ್ಯಕರ್ತೆರಾದ ವೇದವತಿ, ಶೋಭಾ, ವಿದ್ಯಾರ್ಥಿ ಮನೋಹರ ಎಂ.ಎಸ್., ಯುವಯಾನ ಬಳಗದ ಟಿ.ಸಿರಿಕುಮಾರ್, ಮನೋಹರ, ಅಕ್ಷಯ್, ಶಿವದರ್ಶಿನಿ, ನವೀನ್, ಅಕ್ಷಯ, ಲೀಲಾವತಿ, ಜನಪರ ಫೌಂಡೇಷನ್ನ ಗಾಯತ್ರಿ, ಚೌಡಪ್ಪ ಉಪಸ್ಥಿತರಿದ್ದರು.