ಕನ್ನಡಪ್ರಭವಾರ್ತೆ ಸೋಮವಾರಪೇಟೆ
ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಲೋಕೋಪಯೋಗಿ ಇಲಾಖೆ ತಾಲೂಕಿನಲ್ಲಿ ವೈಫಲ್ಯಗೊಂಡಿದೆ. ಅಧಿಕಾರಿಗಳು ಕೆಲಸ ಮಾಡಲು ಇಷ್ಟವಿಲ್ಲದಿದ್ದರೆ ವರ್ಗಾವಣೆ ಮಾಡಿಕೊಂಡು ಹೋಗಬಹುದು ಎಂದು ಖಡಕ್ಕಾಗಿ ಸೂಚನೆ ನೀಡಿದರು. ಹೀಗಾದಲ್ಲಿ ರಾಜ್ಯ ಸರ್ಕಾರದಿಂದ ಹೆಚ್ಚಿನ ಅನುದಾನ ತರುವುದು ಹೇಗೆ ಎಂದು ಶಾಸಕರು ಬೇಸರ ವ್ಯಕ್ತಪಡಿಸಿದರು.20 ಕೋಟಿ ರು. ಗಳ ವೆಚ್ಚದ ತೋಳೂರುಶೆಟ್ಟಳ್ಳಿ, ಕೂತಿ ಮಾರ್ಗದ ರಸ್ತೆ ಮಾರ್ಗದ ಕಾಮಗಾರಿ ಆಮೆಗತಿಯ ವೇಗದಲ್ಲಿ ಸಾಗುತ್ತಿದೆ. 10 ಕೋಟಿ ರು. ಗಳ ವೆಚ್ಚದ ಐಗೂರಿನ ಕಬ್ಬಿಣ ಸೇತುವೆ ಕಾಮಗಾರಿಯನ್ನು ಈವರೆಗೆ ಗುತ್ತಿಗೆದಾರರು ಆರಂಭಿಸಿಲ್ಲ. ಮುಂದಿನ ಒಂದು ವಾರದೊಳಗೆ ಕಾಮಗಾರಿ ಆರಂಭಿಸದಿದ್ದಲ್ಲಿ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ರಾಜ್ಯ ಹೆದ್ದಾರಿ ಬದಿ ಕಾಡು ಕಡಿಯುವುದು, ಗುಂಡಿಗಳನ್ನು ಮುಚ್ಚುವ ಕಾಮಗಾರಿಯಲ್ಲಿ ಬಹುತೇಕ ಮೋಸ ನಡೆಯುತ್ತಿದೆ. ಕಾಮಗಾರಿ ಕಳಪೆಯಾಗುತ್ತಿದೆ. ಅಲ್ಪಸ್ವಲ್ಪ ಕಾಡನ್ನು ಕಡಿಯಲಾಗುತ್ತಿದೆ. ಗುಣಮಟ್ಟವಲ್ಲದ ಜೆಲ್ಲಿ ಹಾಗು ತಾರನ್ನು ಸುರಿಯುತ್ತಿದ್ದಾರೆ ಎಂದು ಸರ್ಕಾರದ ಗ್ಯಾರೆಂಟಿ ಸಮಿತಿಯ ಅಧ್ಯಕ್ಷ ಜಿ.ಎಂ.ಕಾಂತರಾಜು, ಸದಸ್ಯರಾದ ಸಬಿತಾ ಚನ್ನಕೇಶವ, ವೇದಕುಮಾರ್, ಸೂಡ ಅಧ್ಯಕ್ಷ ಕೆ.ಎ.ಆದಂ ಆರೋಪಿಸಿದರು.
ಕೂಡಲೆ ಕಾಮಗಾರಿ ಪ್ರಾರಂಭಿಸಲು ಗುತ್ತಿಗೆದಾರರಿಗೆ ಆದೇಶ ನೀಡಲಾಗುವುದು. ಕಳಪೆ ಕಾಮಗಾರಿಗೆ ಅವಕಾಶ ನೀಡುವುದಿಲ್ಲ ಎಂದು ಲೋಕೋಪಯೋಗಿ ಇಲಾಖೆ ಎಇಇ ವೆಂಕಟೇಶ ನಾಯಕ್ ಹೇಳಿದರು.
160 ಅಂಗನವಾಡಿಯಲ್ಲಿ 9 ಸಾವಿರ ಮಕ್ಕಳು ಇರುವುದು ಸಾಧ್ಯವೇ ಇಲ್ಲ. ಇದು ಸುಳ್ಳು ಲೆಕ್ಕ ಕೊಡುತ್ತಿದ್ದಾರೆ. ಒಂದು ಅಂಗನವಾಡಿಯಲ್ಲಿ 56 ಮಕ್ಕಳು ಎಲ್ಲಿಯೂ ಇಲ್ಲ. ಹೆಚ್ಚೆಂದರೆ 5-10 ಮಕ್ಕಳು ಇರಬಹುದು. ಹೆಚ್ಚು ಮಕ್ಕಳನ್ನು ತೋರಿಸಿ ಇಲಾಖೆ ಸರ್ಕಾರ ಮೋಸ ಮಾಡುತ್ತಿದೆ. ಪ್ರತಿ ಅಂಗನವಾಡಿಯಲ್ಲಿರುವ ಮಕ್ಕಳ ಪಕ್ಕಾ ಲೆಕ್ಕವನ್ನು ಕೂಡಲೆ ಸಲ್ಲಿಸಬೇಕು ಎಂದು ಶಾಸಕರು ಅಧಿಕಾರಿಗೆ ತಾಕೀತು ಮಾಡಿದರು.
ತಾಲೂಕಿನ ಗಿರಿಜನರ ಹಾಡಿಯಲ್ಲಿ ಫಲಾನುಭವಿಗಳಿಗೆ ಬಿಪಿಎಲ್ ಕಾರ್ಡ್ ವಿತರಿಸಲಾಗಿದೆ. ತಾಂತ್ರಿಕ ಕಾರಣಗಳಿಂದ ಬಿಪಿಎಲ್ ಕಾರ್ಡ್ನಿಂದ ವಂಚಿತರಾಗಿದ್ದ 130 ಮಂದಿ ಫಲಾನುಭವಿಗಳಿಗೆ ಬಿಪಿಎಲ್ ಕಾರ್ಡ್ ವಿತರಿಸಲಾಗಿದೆ. 6 ಅರ್ಜಿಗಳು ಬಾಕಿಯಾಗಿವೆ ಎಂದು ಆಹಾರ ನಿರೀಕ್ಷಕಿ ಯಶಸ್ವಿನಿ ಹೇಳಿದರು. ಕೆಲ ನ್ಯಾಯಬೆಲೆ ಅಂಗಡಿಗಳು ನಿಗದಿತ ಸಮಯದಲ್ಲಿ ಪಡಿತರ ವಿತರಣೆ ಮಾಡುತ್ತಿಲ್ಲ. ಇಲಾಖಾಧಿಕಾರಿಗಳಿಗೂ ಹೆದರುತ್ತಿಲ್ಲ ಎಂದು ವೇದಕುಮಾರ್ ದೂರಿದರು.
ವೇದಿಕೆಯಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪರಮೇಶ ಕುಮಾರ್ ಹೇಳಿದರು.