11ರಂದು ಯುವ ನಿಧಿ ಫಲಾನುಭವಿಗಳಿಗೆ ಕಾರ್ಯಾಗಾರ

KannadaprabhaNewsNetwork |  
Published : Aug 09, 2026, 03:00 AM IST
ಸುದ್ದಿಗೋಷ್ಠಿ ಸಂದರ್ಭ | Kannada Prabha

ಸಾರಾಂಶ

ಪಂಚ ಗ್ಯಾರಂಟಿ ಪೈಕಿ ಯುವ ನಿಧಿ ಫಲಾನುಭವಿಗಳಿಗೆ ಮಾನಸಿಕ ಸ್ಥೈರ್ಯ ತುಂಬುವ ನಿಟ್ಟಿನಲ್ಲಿ ಸಲಹೆ ಸೂಚನೆ ನೀಡುವ ಕಾರ್ಯಾಗಾರವನ್ನು ಈ ತಿಂಗಳ 11ರಂದು ಅಳುವಾರ ಕೊಡಗು ವಿಶ್ವವಿದ್ಯಾಲಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕುಶಾಲನಗರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ವಿ ಪಿ ಶಶಿಧರ್ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಕುಶಾಲನಗರ

ಪಂಚ ಗ್ಯಾರಂಟಿ ಪೈಕಿ ಯುವ ನಿಧಿ ಫಲಾನುಭವಿಗಳಿಗೆ ಮಾನಸಿಕ ಸ್ಥೈರ್ಯ ತುಂಬುವ ನಿಟ್ಟಿನಲ್ಲಿ ಸಲಹೆ ಸೂಚನೆ ನೀಡುವ ಕಾರ್ಯಾಗಾರವನ್ನು ಈ ತಿಂಗಳ 11ರಂದು ಅಳುವಾರ ಕೊಡಗು ವಿಶ್ವವಿದ್ಯಾಲಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕುಶಾಲನಗರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ವಿ ಪಿ ಶಶಿಧರ್ ತಿಳಿಸಿದ್ದಾರೆ.

ಅವರು ಕುಶಾಲನಗರದ ಪ್ರವಾಸಿ ಮಂದಿರದಲ್ಲಿ ಸಂಬಂಧಿಸಿದ ಇಲಾಖೆ ಅಧಿಕಾರಿಗಳೊಂದಿಗೆ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು ಬಹುತೇಕ ಫಲಾನುಭವಿಗಳಿಗೆ ಮಾರ್ಗದರ್ಶನದ ಕೊರತೆ ಎದುರಾಗಿದ್ದು ಈ ನಿಟ್ಟಿನಲ್ಲಿ ಸಂಪನ್ಮೂಲ ವ್ಯಕ್ತಿಗಳಿಂದ ಉಪನ್ಯಾಸ ನೀಡುವ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಅವರು ತಿಳಿಸಿದರು.

ಪದವಿ ಮತ್ತು ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಸರ್ಕಾರದ ಮೂಲಕ ನಿರುದ್ಯೋಗ ಭತ್ಯೆ ಎರಡು ವರ್ಷಗಳ ಕಾಲ ನೀಡಲಾಗಿದೆ. ತದನಂತರ ಉದ್ಯೋಗ ಕಂಡುಕೊಳ್ಳಲು ಮಾರ್ಗದರ್ಶನದ ಕೊರತೆ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಈ ಕಾರ್ಯಾಗಾರ ಅನುಕೂಲವಾಗಲಿದೆ ಎಂದರು.

ತಾಲೂಕು ವ್ಯಾಪ್ತಿಯಲ್ಲಿ ಒಟ್ಟು 323 ಯುವನಿಧಿ ಫಲಾನುಭವಿಗಳಿದ್ದು ಅವರನ್ನು ಒಂದೆಡೆ ಸೇರಿಸಿ ಭವಿಷ್ಯದ ಬಗ್ಗೆ ಆತ್ಮಸ್ಥೈರ್ಯ ತುಂಬುವ ಸಮಾಲೋಚನಾ ಕಾರ್ಯಕ್ರಮ ಇದಾಗಿದೆ ಎಂದು ಶಶಿಧರ್ ತಿಳಿಸಿದರು.

ಕೊಡಗು ವಿಶ್ವವಿದ್ಯಾಲಯ ಸಭಾಂಗಣದಲ್ಲಿ ಬೆಳಗ್ಗೆ 11 ಗಂಟೆಗೆ ವಿಧಾನಸಭಾ ಕ್ಷೇತ್ರದ ಶಾಸಕ ಡಾ ಮಂತರ್ ಗೌಡ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದ ತಾಲೂಕು ಕಾರ್ಯ ನಿರ್ವಹಣಾಧಿಕಾರಿ ಅಪ್ಪಣ್ಣ, ಗ್ಯಾರಂಟಿ ಅನುಷ್ಠಾನ ಯೋಜನೆಯ ತಾಲೂಕು ಅಧ್ಯಕ್ಷರಾದ ವಿ ಪಿ ಶಶಿಧರ್ ವಿಶ್ವವಿದ್ಯಾಲಯ ಕುಲಪತಿಗಳು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು. ತಾಲೂಕಿನ ಅಂತಿಮ ಪದವಿ ಅಥವಾ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳು ಕಾರ್ಯಾಗಾರದಲ್ಲಿ ಪಾಲ್ಗೊಳ್ಳಬಹುದು ಎಂದು ಅವರು ಹೇಳಿದರು.

ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಅಧಿಕಾರಿ ಮಂಜುನಾಥ್, ಸಹಾಯಕ ಅಧಿಕಾರಿ ಮದನ್, ಗ್ಯಾರಂಟಿ ಅನುಷ್ಠಾನ ತಾಲೂಕು ಸದಸ್ಯರಾದ ಮಲ್ಲಿಕಾರ್ಜುನ, ಕಿಶೋರ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಪೌಷ್ಟಿಕತೆಯಿಂದ ಮಕ್ಕಳಲ್ಲಿ ರಕ್ತಹೀನತೆ, ಕಬ್ಬಿಣಾಂಶ ಕೊರತೆ: ಸದ್ಗುರು ಮಧುಸೂದನ ಸಾಯಿ
ಕಾಂಗ್ರೆಸ್‌ನದು ಪೇಮೆಂಟ್ ಸೀಟ್‌ ಸರ್ಕಾರ: ಗೋವಿಂದ ಕಾರಜೋಳ