ಕನ್ನಡಪ್ರಭ ವಾರ್ತೆ ತುಮಕೂರು
ಅಗಳಕೋಟೆಯಲ್ಲಿರುವ ಕಾಲೇಜಿನ ನಾಗಾರ್ಜುನ ಸಭಾಂಗಣದಲ್ಲಿ ಏರ್ಪಟ್ಟ ಕಾರ್ಯಾಗಾರವನ್ನು ಸಾಹೇ ವಿಶ್ವವಿದ್ಯಾಲಯದ ಕುಲಸಚಿವ ಡಾ.ಎಂ.ಝಡ್.ಕುರಿಯನ್ ಉದ್ಘಾಟಿಸಿ, ವೈದ್ಯರು ಬಳಸುವ ಜ್ಞಾನ, ಕೌಶಲ್ಯಗಳು ಮತ್ತು ವೃತ್ತಿಪರ ಕಾರ್ಯಕ್ಷಮತೆ ಮತ್ತು ಸಂಬಂಧಗಳನ್ನು ನಿರ್ವಹಿಸಲು, ಅಭಿವೃದ್ಧಿಪಡಿಸಲು ಶೈಕ್ಷಣಿಕ ಚಟುವಟಿಕೆಗಳನ್ನು ಒಳಗೊಂಡ ನಿರಂತರ ಶಿಕ್ಷಣ ಕಲಿಕೆಯ ಕಾರ್ಯಕ್ರಮಗಳು ಇಂದಿನ ದಿನಗಳಲ್ಲಿ ಮಹತ್ವಪೂರ್ಣವಾಗಿವೆ ಎಂದರು.
ಪ್ರಾಂಶುಪಾಲ ಡಾ.ಎಂ.ಬಿ.ಸಾಣಿಕೊಪ್ಪ ಮಾತನಾಡಿ, ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ನಿರಂತರ ಶಿಕ್ಷಣ ಕಲಿಕೆ ಕಾರ್ಯಕ್ರಮ ವೈದ್ಯಕೀಯ ಕ್ಷೇತ್ರದಲ್ಲಿನ ಸಾಮರ್ಥ್ಯವನ್ನು ಕಾಪಾಡಿಕೊಳ್ಳಲು, ಆ ಕ್ಷೇತ್ರದ ಹೊಸ ಮತ್ತು ಅಭಿವೃದ್ಧಿಶೀಲ ಕ್ಷೇತ್ರಗಳ ಬಗ್ಗೆ ತಿಳಿದುಕೊಳ್ಳಲು ಸಹಾಯ ಮಾಡುತ್ತದೆ ಎಂದರು.ಪರೀಕ್ಷಾ ನಿಯಂತ್ರಕ ಡಾ.ಗುರುಶಂಕರ್, ಉಪಪ್ರಾಂಶುಪಾಲ ಡಾ.ಪ್ರಭಾಕರ ಜಿ.ಎನ್., ಮುಖ್ಯ ಆಡಳಿತಾಧಿಕಾರಿ ಡಾ.ಕಿರಣ್ಕುಮಾರ್, ವೈದ್ಯಕೀಯ ಅಧೀಕ್ಷಕ ಡಾ.ವೆಂಕಟೇಶ ಜಿ.ಎನ್. ಪ್ರತಿನಿಧಿಗಳನ್ನುದ್ದೇಶಿಸಿ ಮಾತನಾಡಿದರು.
ಜೆನಿಟೂರ್ನರಿ ವ್ಯವಸ್ಥೆಯೊಳಗೆ ಬೆಳವಣಿಗೆಯ ಹಂತಗಳು ಮತ್ತು ಸಂಬಂಧಿತ ವೈಪರಿತ್ಯಗಳನ್ನು ಅರ್ಥಮಾಡಿಕೊಳ್ಳುವುದು, ಜೆನಿಟೂರ್ನರಿ ವ್ಯವಸ್ಥೆಯ ಮೇಲೆ ಪರಿಣಾಮ ಬೀರುವ ಕ್ರೋಮೋ ಸೋಮಲ್ ಅಸ್ವಸ್ಥತೆಗಳನ್ನು ಅನ್ವೇಷಿಸುವುದು, ಜೊತೆಗೆ ಲೈಂಗಿಕ ಬೆಳವಣಿಗೆಯ ಅಸ್ವಸ್ಥತೆಗಳು (ಡಿಎಸ್ಡಿ), ಮತ್ತು ಅಂತಹ ಸಂದರ್ಭಗಳಲ್ಲಿ ಆನುವಂಶಿಕ ಸಮಾಲೋಚನೆಯ ಪ್ರಾಮುಖ್ಯತೆ. ಸರಣಿಯ ಮೂಲಕ ಅಂಗ ರಚನಾ ಶಾಸ್ತ್ರದ ಪರಿಗಣನೆಗಳೊಂದಿಗೆ ಮಕ್ಕಳ ಜೆನಿಟೂರ್ನರಿ ಅಸ್ವಸ್ಥತೆಗಳನ್ನು ಬಗ್ಗೆ ವೈದ್ಯರು ವಿಚಾರಗೋಷ್ಠಿಗಳಲ್ಲಿ ವಿಷಯ ಮಂಡಿಸಿದರು.
ಹರಿಯಾಣ, ಮಧ್ಯಪ್ರದೇಶ, ಪಾಂಡಿಚೇರಿ, ಕೊಡಗು, ತಮಿಳುನಾಡು, ಉತ್ತರ ಪ್ರದೇಶ, ಮಹಾರಾಷ್ಟ್ರ, ಕೇರಳ, ಪಶ್ಚಿಮ ಬಂಗಾಳ, ಜಮ್ಮು ಮತ್ತು ಕಾಶ್ಮೀರ, ಆಂಧ್ರಪ್ರದೇಶ, ರಾಜಸ್ಥಾನ, ತೆಲಂಗಾಣ, ಮಣಿಪುರ, ಒಡಿಶಾ, ಛತ್ತೀಸ್ಗಢ, ನವದೆಹಲಿ, ಬಿಹಾರ, ಗುಜರಾತ್ ಸೇರಿದಂತೆ ವಿವಿಧ ರಾಜ್ಯಗಳನ್ನು ಪ್ರತಿನಿಧಿಸುವ 250 ಕ್ಕೂ ಹೆಚ್ಚು ಪ್ರತಿನಿಧಿಗಳು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.