ಕನ್ನಡಪ್ರಭ ವಾರ್ತೆ ಬೆಳ್ತಂಗಡಿ
ಕಾರ್ಯಾಗಾರವನ್ನು ಉದ್ಘಾಟಿಸಿದ ಮೈಸೂರು ವಿಶ್ವವಿದ್ಯಾಲಯ ಸಸ್ಯಶಾಸ್ತ್ರ ವಿಭಾಗದ ಅಧ್ಯಕ್ಷ ಡಾ. ಅಮೃತೇಶ್ ಅವರು ಮಾತನಾಡಿ, ಅಳಿವಿನಂಚಿನಲ್ಲಿರುವ ಸಸ್ಯ ಪ್ರಭೇದಗಳನ್ನು ಗುರುತಿಸಿ ಅವುಗಳನ್ನು ಸಂರಕ್ಷಿಸುವ ಕಾರ್ಯ ತುರ್ತಾಗಿ ಆಗಬೇಕಾಗಿದೆ ಮತ್ತು ಈ ಕಾರ್ಯದಲ್ಲಿ ಕಾಲೇಜು ವಿದ್ಯಾರ್ಥಿಗಳು, ವಿಶೇಷವಾಗಿ ಸಸ್ಯಶಾಸ್ತ್ರ ವಿದ್ಯಾರ್ಥಿಗಳು ಜವಾಬ್ದಾರಿಯಿಂದ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಡಾ. ಬಿ. ಏ. ಕುಮಾರ್ ಹೆಗ್ಡೆ ಅವರು ಈ ಭಾಗದ ಪಶ್ಚಿಮ ಘಟ್ಟಗಳ ಸಸ್ಯ ವೈವಿಧ್ಯತೆಯ ಬಗ್ಗೆ ವಿವರವಾದ ಮಾಹಿತಿಯನ್ನು ನೀಡಿ ವೈಜ್ಞಾನಿಕವಾಗಿ ಸಂರಕ್ಷಣೆಯನ್ನು ಮಾಡುವ ವಿವಿಧ ಹಂತಗಳನ್ನು ವಿವರಿಸಿದರು. ಕಾಲೇಜಿನ ಪ್ರಾಧ್ಯಾಪಕ ಅಭಿಲಾಶ್ ಕೆ. ಎಸ್ . ಅವರು ಈ ಭಾಗದ ಸಸ್ಯ ವೈವಿಧ್ಯತೆಯನ್ನು ಸಚಿತ್ರವಾಗಿ ವಿವರಿಸಿ ತಿಳಿಸಿದರು. ಕಾಲೇಜಿನ ಹಾಗೂ ಮೈಸೂರು ವಿಶ್ವವಿದ್ಯಾಲಯದ ಸಸ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದ ಈ ಕಾರ್ಯಕ್ರಮದಲ್ಲಿ ಪ್ರಾಧ್ಯಾಪಕಿ ಶಕುಂತಲಾ ಸ್ವಾಗತಿಸಿ, ಸ್ವಾತಿ ಅವರು ವಂದಿಸಿ, ರಶ್ಮಿ ಕಾರ್ಯಕ್ರಮ ನಿರ್ವಹಿಸಿದರು.