ಕನ್ನಡಪ್ರಭ ವಾರ್ತೆ ಕಾಪು
ದೇವಿಶಾ ಶೆಟ್ಟಿ ಕರಾವಳಿಯವರಾಗಿದ್ದು, ಖಾಸಗಿ ಕಾರ್ಯಕ್ರಮಕ್ಕೆ ಮಂಗಳೂರಿಗೆ ಬಂದಿದ್ದ ಅವರಿಬ್ಬರೂ ಜೀರ್ಣೋದ್ಧಾರಗೊಳ್ಳುತ್ತಿರುವ ಮಾರಿಗುಡಿಗೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ದೇವಿಶಾ, ಐದು ವರ್ಷಗಳ ಹಿಂದೆ ಇಲ್ಲಿಗೆ ಬಂದಿದ್ದೆ, ಮತ್ತೊಮ್ಮೆ ಕಾಪು ಅಮ್ಮನ ಭೇಟಿ ಮಾಡಬೇಕು ಎಂಬ ಇಚ್ಛೆ ಇತ್ತು. ಇದೀಗ ಪತಿಯೊಂದಿಗೆ ಬಂದಿರುವುದು ತುಂಬಾ ಸಂತೋಷ ನೀಡುತ್ತಿದೆ ಎಂದರು.ಭಾರತವನ್ನು ಪ್ರತಿನಿಧಿಸಬೇಕು, ವಿಶ್ವಕಪ್ ಗೆಲ್ಲಬೇಕು ಎಂಬುದು ಎಲ್ಲ ಕ್ರಿಕೆಟ್ ಆಟಗಾರರ ಕನಸಾಗಿರುತ್ತದೆ, ಸೂರ್ಯಕುಮಾರ್ ಅವರ ಕನಸು ಸಾಕಾರಗೊಂಡಿದೆ. ಮುಂದೆ ಇನ್ನೂ ಹಲವಾರು ಕನಸುಗಳಿವೆ. ದೇವಿಯಲ್ಲಿ ಏನು ಪ್ರಾರ್ಥನೆ ಮಾಡಿದ್ದೇವೆ, ಏನು ಹರಕೆ ನೀಡಿದ್ದೇವೆ ಅದನ್ನು ಹೇಳುವುದಿಲ್ಲ ಎಂದರು.
ಇಲ್ಲಿ ನಮ್ಮನ್ನು ನೋಡುವುದಕ್ಕೆ ಇಷ್ಟು ಜನ ಬರುತ್ತಾರೆ ಎಂದು ಯೋಚಿಸಿರಲಿಲ್ಲ. ಇಲ್ಲಿನ ಜನರ ಪ್ರೀತಿ ಮನಸ್ಸಿಗೆ ಮುಟ್ಟಿದೆ. ಕರಾವಳಿಯ ಬೇರೆ ದೇವಸ್ಥಾನಗಳಿಗೂ ಹೋಗಿದ್ದೇವೆ, ನಾನೊಬ್ಬ ಸಾಮಾನ್ಯ ವ್ಯಕ್ತಿಯಾಗಿ ದೇವಸ್ಥಾನಗಳಿಗೆ ಹೋಗುತಿದ್ದೇನೆ, ಸೆಲೆಬ್ರಿಟಿಯಾಗಿ ಅಲ್ಲ. ಸಾಮಾನ್ಯ ವ್ಯಕ್ತಿಯಾಗಿ ದೊಡ್ಡ ಜೀವನವನ್ನು ನಡೆಸಬೇಕು ಎಂಬುದು ನನ್ನ ಆಸೆ ಎಂದರು.
ಇನ್ನೊಮ್ಮೆ ದೇಶದ ಕ್ರಿಕೆಟ್ ತಂಡದ ನಾಯಕನಾಗಿ ಮಾರಿಗುಡಿಗೆ ಬರುವಂತಾಗಲಿ ಎಂದು ಅರ್ಚಕರು ದೇವಿಯಲ್ಲಿ ಮಾಡಿದ ಪ್ರಾರ್ಥನೆಗೆ ಪ್ರತಿಕ್ರಿಯಿಸಿದ ಸೂರ್ಯಕುಮಾರ್, ತಂಡದ ನಾಯಕನಾಗುವುದು ನಮ್ಮ ಕೈಯಲ್ಲಿಲ್ಲ. ದೇಶಕ್ಕಾಗಿ ಚೆನ್ನಾಗಿ ಆಡುವುದು ನನ್ನ ಗುರಿ. ಮುಂದೆ ದೇವರು ಇಚ್ಛಿಸಿದಂತೆ ಆಗುತ್ತದೆ. ವಿಶ್ವಕಪ್ ಅನ್ನುವುದೇ ಜೀವನ ಅಲ್ಲ, ಅದು ಜೀವನದ ಒಂದು ಭಾಗ ಎಂದವರು ವಿಶ್ಲೇಷಿಸಿದರು.
ಇದಕ್ಕೆ ಮೊದಲು ಸೂರ್ಯಕುಮಾರ್ ದಂಪತಿಯನ್ನು ದೇವಸ್ಥಾನಕ್ಕೆ ಭವ್ಯವಾಗಿ ಸ್ವಾಗತಿಸಿ, ಗೌರವಿಸಲಾಯಿತು. ನಿರ್ಮಾಣದ ಹಂತದಲ್ಲಿರುವ ದೇವಾಲಯವನ್ನು ವೀಕ್ಷಿಸಿ ವಿವರಗಳನ್ನು ಪಡೆದುಕೊಂಡರು. ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕಾಪು ವಾಸುದೇವ ಶೆಟ್ಟಿ ಮುಂತಾದವರಿದ್ದರು.----
ಫೈನಲ್ ಪಂದ್ಯದಲ್ಲಿ ಆಟಕ್ಕೆ ಟರ್ನಿಂಗ್ ನೀಡಿದ ಸೂರ್ಯ ಕುಮಾರ್ ಅವರು ಹಿಡಿದ ಕ್ಯಾಚ್ ಬಗ್ಗೆ ಉಂಟಾಗಿರುವ ವಿವಾದದ ಕುರಿತು ಮಾತನಾಡಿದ ಅವರು, ನಾನು ಬೌಂಡರಿ ಲೈನ್ ಟಚ್ ಮಾಡಿಲ್ಲ ಎಂದು ಸ್ಪಷ್ಟವಾಗಿ ಹೇಳಿದರು. ಆದರೆ ಪ್ರಪಂಚದ ಎಲ್ಲ ಜನರನ್ನು ಖುಷಿ ಪಡಿಸಲು ಸಾಧ್ಯವಿಲ್ಲ ಎಂದು ಬೇಸರಿಸಿದರು.