ಅನಂತಪದ್ಮನಾಭ ದೇವಳದಲ್ಲಿ ವಿಶ್ವ ಪರಿಸರ ದಿನಾಚರಣೆ

KannadaprabhaNewsNetwork |  
Published : Jun 09, 2025, 02:16 AM IST
8ಅನಂತ | Kannada Prabha

ಸಾರಾಂಶ

ಶ್ರೀ ಕ್ಷೇತ್ರ ಅನಂತ ಪದ್ಮನಾಭ ದೇವರ ಸನ್ನಿಧಿಯಲ್ಲಿ ದೇವಾಲಯದ ಹೊರಾಂಗಣದಲ್ಲಿ ಸ್ವಚ್ಛತಾ ಕಾರ್ಯ ಹಾಗೂ ವಿಶ್ವ ಪರಿಸರಣ ದಿನಾಚರಣೆ ಭಾನುವಾರ ನಡೆಯಿತು. ಈ ಪ್ರಯುಕ್ತ ಮಕ್ಕಳಲ್ಲಿ ಪರಿಸರ ಪ್ರಜ್ಞೆ ಮೂಡಿಸುವ ಸಲುವಾಗಿ ಮಕ್ಕಳಿಂದಲೇ ಗಿಡಗಳನ್ನು ನೆಡುವ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ಇಲ್ಲಿನ ಶ್ರೀ ಕ್ಷೇತ್ರ ಅನಂತ ಪದ್ಮನಾಭ ದೇವರ ಸನ್ನಿಧಿಯಲ್ಲಿ ದೇವಾಲಯದ ಹೊರಾಂಗಣದಲ್ಲಿ ಸ್ವಚ್ಛತಾ ಕಾರ್ಯ ಹಾಗೂ ವಿಶ್ವ ಪರಿಸರಣ ದಿನಾಚರಣೆ ಭಾನುವಾರ ನಡೆಯಿತು. ಈ ಪ್ರಯುಕ್ತ ಮಕ್ಕಳಲ್ಲಿ ಪರಿಸರ ಪ್ರಜ್ಞೆ ಮೂಡಿಸುವ ಸಲುವಾಗಿ ಮಕ್ಕಳಿಂದಲೇ ಗಿಡಗಳನ್ನು ನೆಡುವ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

ಈ ಸಂದರ್ಭ ಶ್ರೀ ಪುತ್ತಿಗೆ ಮಠದ ದಿವಾನರಾದ ಪ್ರಸನ್ನ ಆಚಾರ್ಯ ಹಾಗೂ ನಾಗರಾಜ ಆಚಾರ್ಯ ಅವರು ಕಾರ್ಯಕ್ರಮಕ್ಕೆ ಚಾಲನೆನೀಡಿದರು. ಪುತ್ತಿಗೆ ಮಠದ ಸುಗುಣ ಮಾಲಾ ಶಾಲೆಯ ಸಂಚಾಲಕ ಪ್ರಮೋದ ಸಾಗರ, ಶಾಲಾ ವಿದ್ಯಾರ್ಥಿ ವೃಂದ, ಅನಂತ ವಿಪ್ರ ಬಳಗದ ಸದಸ್ಯರು, ದೇವಾಲಯದ ಜೀರ್ಣೋದ್ಧಾರ ಸಮಿತಿ ಸದಸ್ಯರು ಹಾಜರಿದ್ದರು.ದೇವಾಲಯದ ಹೊರಾಂಗಣದಲ್ಲಿ ಮಾವು, ಹಲಸು, ನೇರಳೆ, ಗೇರು, ಪುನರ್ಪುಳಿ, ಬಿಲ್ವ ಪತ್ರೆ, ತುಳಸಿ, ಮಲ್ಲಿಗೆ ಹಾಗೂ ವಿವಿಧ ಬಗೆಯ ಹೂವಿನ ಗಿಡಗಳನ್ನು ನೆಡಲಾಯಿತು. ಪುತ್ತಿಗೆ ಮಠದ ಪ್ರಸನ್ನಾಚಾರ್ಯ, ಪರಿಸರ ದಿನಾಚರಣೆಯ ಮಹತ್ವ ತಿಳಿಸಿದರು. ಅನಂತ ವಿಪ್ರ ಬಳಗದ ಕೆ. ರಾಘವೇಂದ್ರ ಭಟ್ ಸ್ವಾಗತಿಸಿ, ಕಾರ್ಯಕ್ರಮ ಸಂಯೋಜಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''