ಮಡಿಕೇರಿ: ವಿಶ್ವ ತಂಬಾಕು ರಹಿತ ದಿನಾಚರಣೆ

KannadaprabhaNewsNetwork |  
Published : Jun 02, 2024, 01:45 AM IST
ಚಿತ್ರ : 1ಎಂಡಿಕೆ3 : ವಿಶ್ವ ತಂಬಾಕು ರಹಿತ ದಿನಾಚರಣೆ ಅಂಗವಾಗಿ ಪ್ರತಿಜ್ಞಾ ವಿಧಿ ಸ್ವೀಕರಿಸಿದ ವಿದ್ಯಾರ್ಥಿಗಳು.  | Kannada Prabha

ಸಾರಾಂಶ

ವಿಶ್ವ ತಂಬಾಕು ರಹಿತ ದಿನಾಚರಣೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಂ. ಸತೀಶ್‌ ಕುಮಾರ್‌ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭ ಕೋಟ್ಪಾ ಕಾಯಿದೆ 2003ರ ಬಗ್ಗೆ ಸವಿವರವಾಗಿ ಅಂಕಿ ಅಂಶಗಳ ಬಗ್ಗೆ ವಿವರಿಸಲಾಯಿತು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಘಟಕ, ರಾಷ್ಟ್ರೀಯ ಬಾಯಿ ಆರೋಗ್ಯ ಕಾರ್ಯಕ್ರಮ, ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಇವರ ಸಂಯುಕ್ತಾಶ್ರಯದಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆಯು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ಸತೀಶ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎನ್.ಬಿ ಜಯಲಕ್ಷ್ಮೀ ಅವರು ಸಸಿಗೆ ನೀರು ಹಾಕುವ ಮೂಲಕ ಉದ್ಘಾಟಿಸಿ ಯುವ ಜನತೆ ತಂಬಾಕು ಎನ್ನುವ ವ್ಯಸನಕ್ಕೆ ಬಲಿಯಾಗಿ ತಮ್ಮ ಅಮೂಲ್ಯವಾದ ಜೀವನವನ್ನು ಹಾಳುಮಾಡಿಕೊಳ್ಳದೆ ಉತ್ತಮ ಜೀವನ ನಿರ್ಮಾಣ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಡೀನ್ ಹಾಗೂ ನಿರ್ದೇಶಕರಾದ ಡಾ. ವಿಶಾಲ್ ಅವರು ಮಾತನಾಡಿ, ತಂಬಾಕುವಿನ ಸೇವನೆಗೆ ಹೆಚ್ಚಾಗಿ ಯುವ ಜನತೆ ಮಾರುಹೋಗುತ್ತಿದ್ದಾರೆ. ಇದರಿಂದ ಅನೇಕ ಅಸಾಂಕ್ರಾಮಿಕ ರೋಗಗಳಿಗೆ ತುತ್ತಾಗುತ್ತಿದ್ದಾರೆ. ತಂಬಾಕನ್ನು ಮಕ್ಕಳಿಂದ ದೂರವಿರಿಸಿ ಮಕ್ಕಳನ್ನು ರಕ್ಷಿಸಿ ಎಂದು ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ಸತೀಶ್ ಕುಮಾರ್ ಅವರು ತಂಬಾಕು ಸೇವನೆಯಿಂದ ಉಂಟಾಗುವ ತೊಂದರೆಗಳು, ಜಿಲ್ಲಾ ತಂಬಾಕು ನಿಯಂತ್ರಣ ಕೋಶವು ಕರ್ತವ್ಯ ನಿರ್ವಹಿಸುತ್ತಿರುವ ಬಗ್ಗೆ ಮತ್ತು ಕೋಟ್ಪಾ ಕಾಯಿದೆ 2003ರ ಬಗ್ಗೆ ಸವಿವರವಾಗಿ ಅಂಕಿ ಅಂಶಗಳ ಸಹಿತ ತಿಳಿಸಿದರು.

ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಶ್ರೀನಿವಾಸ್ ಬಿ.ಎಲ್. ಅವರು ತಂಬಾಕು ಉತ್ಪನ್ನಗಳ ಸೇವನೆಯಿಂದ ಯುವ ಜನತೆ ದೂರ ಉಳಿದು, ಉತ್ತುಮ ಸಮಾಜ ನಿರ್ಮಿಸಿ ಎಂದು ತಿಳಿಸಿದರು.

ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ವಿಮಲ ಅವರು ನಶಾ ಮುಕ್ತ ಜಿಲ್ಲೆ ಮಾಡಬೇಕಾದರೆ ಯುವ ಜನತೆಯ ಪಾತ್ರದ ಬಗ್ಗೆ ತಿಳಿಸಿದರು.

ರಾಷ್ಟ್ರೀಯ ಬಾಯಿ ಆರೋಗ್ಯ ಕಾರ್ಯಕ್ರಮದ ಜಿಲ್ಲಾ ನೋಡೆಲ್ ಅಧಿಕಾರಿ ಡಾ.ರೇವಣ್ಣ ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತು ಉಪನ್ಯಾಸ ನೀಡಿದರು.

ಜಿಲ್ಲಾ ಆರೋಗ್ಯ ಶಿಕ್ಷಣ ಅಧಿಕಾರಿ ಟಿ.ಎನ್. ಪಾಲಾಕ್ಷ ಅವರು ವಿಶ್ವ ತಂಬಾಕು ರಹಿತ ದಿನದ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ನಂತರ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವಿದ್ಯಾರ್ಥಿಗಳು ತಂಬಾಕಿನಿಂದಾಗುವ ತೊಂದರೆ ಬಗ್ಗೆ ಕಿರು ನಾಟಕ ಪ್ರದರ್ಶಿಸಿದರು. ಹಿರಿಯ ಆರೋಗ್ಯನಿರೀಕ್ಷಣಾಧಿಕಾರಿ ಶ್ರೀನಾಥ್ ಅವರು ವಂದಿಸಿದರು.

ಈ ಕಾರ್ಯಕ್ರಮದಲ್ಲಿ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಪ್ರಾಧ್ಯಾಪಕರು, ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ಸಿಬ್ಬಂದಿ, ವೈದ್ಯಕೀಯ ಹಾಗೂ ನರ್ಸಿಂಗ್ ವಿದ್ಯಾರ್ಥಿಗಳು ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿ ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಮಸ್ಯೆ ಬಗೆಹರಿದ್ರೆ 6 ತಿಂಗಳಲ್ಲಿ 1 ಲಕ್ಷ ನೇಮಕಾತಿ : ಸಾರಿಗೆ ಸಚಿವ
ಸರ್ಕಾರದಿಂದ ಮಹತ್ವದ ನಿರ್ಧಾರ : ವಿಪತ್ತು ವೇಳೆ ಇಡೀ ಊರಿನ ರೈತರಿಗೆ ಪರಿಹಾರ