ಕನ್ನಡಪ್ರಭ ವಾರ್ತೆ ಮಂಡ್ಯ
ದೇವಾಲಯಗಳು, ಪ್ರಾರ್ಥನಾ ಮಂದಿರಗಳು ಮನುಷ್ಯನಿಗೆ ಸನ್ಮಾರ್ಗವನ್ನು ತೋರುವ ದಾರಿದೀಪವಾಗಿವೆ. ಪ್ರತಿಯೊಬ್ಬರೂ ನಿತ್ಯ ಪ್ರಾರ್ಥನೆ, ಪೂಜೆಯ ಜೊತೆಗೆ ಶಿವಶರಣರ ಆದರ್ಶವನ್ನು ಮೈಗೂಡಿಸಿಕೊಂಡು ನಡೆದಾಗ ಎಲ್ಲೆಡೆ ಶಾಂತಿಯ ವಾತಾವರಣ ನೆಲೆಯಾಗುತ್ತದೆ. ಮಹಿಳೆಯರು ಮಕ್ಕಳಿಗೆ ಸಾಧಕರ, ಹಿರಿಯರ ಆದರ್ಶಗಳನ್ನು ಪರಿಚಯಿಸುವ ಮೂಲಕ ಬಾಲ್ಯದಿಂದಲೇ ಮಕ್ಕಳಲ್ಲಿ ಬಸವಪ್ರಜ್ಞೆ ಮೂಡಿಸಬೇಕಾದ ಅನಿವಾರ್ಯತೆ ಎದುರಾಗಿದೆ ಎಂದರು.೧೧೧ವರ್ಷಗಳ ಸುದೀರ್ಘ ಕಾಲ ಶೈಕ್ಷಣಿಕ, ಧಾರ್ಮಿಕ, ಸಾಮಾಜಿಕ ಕಾರ್ಯಗಳ ಮೂಲಕ ಕೋಟ್ಯಾಂತರ ಭಕ್ತರಭಾವಕೋಶದಲ್ಲಿ ನೆಲೆಯಾಗಿ ನಿಂತ ಲಿಂಗೈಕ್ಯ ಪರಮಪೂಜ್ಯ ಗುರುವರ್ಯರಾದ ಡಾ.ಶ್ರೀಶಿವ ಮಾರಮಹಾ ಸ್ವಾಮೀಜಿ ಅವರ ಪುತ್ಥಳಿ ಹಾಗೂ ವಿಶ್ವಗುರು ಬಸವಣ್ಣನವರ ಪ್ರತಿಮೆಯನ್ನು ಮಾಚಹಳ್ಳಿ ಗ್ರಾಮದಲ್ಲಿ ಸ್ಥಾಪಿಸಿರುವುದು ಅತ್ಯಂತ ಶ್ಲಾಘನೀಯ. ಅವರ ಆದರ್ಶಗಳು ಪ್ರತಿಯೊಬ್ಬರ ಮನೆಮನಗಳನ್ನು ಮುಟ್ಟಬೇಕೆಂದು ಆಶೀರ್ವದಿಸಿದರು.
ಭವ್ಯಮೆರವಣಿಗೆ: ಗ್ರಾಮಕ್ಕೆ ಆಗಮಿಸಿದ ಪೂಜ್ಯ ಶ್ರೀ ಸಿದ್ದಲಿಂಗಮಹಾಸ್ವಾಮೀಜಿ, ಬೇಬಿಬೆಟ್ಟದ ಶ್ರೀಶಿವಸಿದ್ದೇಶ್ವರಸ್ವಾಮೀಜಿ ಹಾಗೂ ಗಣ್ಯರನ್ನು ಪೂರ್ಣಕುಂಭದೊಂದಿಗೆ ಅದ್ಧೂರಿಯಾಗಿ ಸ್ವಾಗತಿಸಲಾಯಿತು. ಗ್ರಾಮದ ಹಲವು ಭಕ್ತರ ಮನೆಗೆ ತೆರಳಿಸಿದ ಸ್ವಾಮೀಜಿಯವರಿಗೆ ಭಕ್ತರು ಪಾದಪೂಜೆ ನೆರವೇರಿಸಿ ಗುರುವಂದನೆ ಸಲ್ಲಿಸಿದರು.ವೇದಿಕೆಯಲ್ಲಿ ಕಾಯಕಯೋಗಿ ಫೌಂಡೇಶನ್ ಅಧ್ಯಕ್ಷ ಎಂ.ಶಿವಕುಮಾರ್, ಲಿಂಗಾಯತ ಮಹಾಸಭಾ ಅಧ್ಯಕ್ಷ ಎಂ.ಎಸ್.ಮಂಜುನಾಥ್ ಬೆಟ್ಟಹಳ್ಳಿ, ಅಖಿಲಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಎಂ.ಸುಬ್ರಹ್ಮಣ್ಯ, ಬಸಂತ್, ಬಿಜೆಪಿ ಮುಖಂಡರಾದ ರಾಜು, ರೈತಸಂಘ ಮುಖಂಡ ಸಂತೋಷ್ ಕುಮಾರ್, ಜೆಡಿಎಸ್ ಮುಖಂಡ ಶಿವರಾಜ್, ಚೇತನ್, ತಮ್ಮಣ್ಣ, ಹುಲಿಕೆರೆಕೊಪ್ಪಲು ಕುಮಾರ್ ಮತ್ತಿತರರಿದ್ದರು.