ದಾಬಸ್ಪೇಟೆ: ಅಕ್ಷರ ದಾಸೋಹದ ಬಿಸಿಯೂಟ ಸೇವಿಸುತ್ತಿದ್ದ ಮಕ್ಕಳ ತಟ್ಟೆಯಲ್ಲಿ ಹುಳಗಳು ಕಂಡು ಬಂದಿದ್ದು, ಬೇಜವಾಬ್ದಾರಿ ವಹಿಸಿರುವ ಮುಖ್ಯಶಿಕ್ಷಕಿ ಅಮಾನತಿಗೆ ಆಗ್ರಹಿಸಿ ಮಕ್ಕಳು ಹಾಗೋ ಪೋಷಕರು ಶಿವಗಂಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಂದೆ ಪ್ರತಿಭಟನೆ ನಡೆಸಿದರು.
ಕೊಳೆತ ತರಕಾರಿಗಳನ್ನೇ ಸಾರಿಗೆ ಬಳಸುತ್ತಾರೆ. ಅದಲ್ಲದೆ ಸರಸ್ವತಿ ಪೂಜೆ ದಿನ ಹಾಲಿನ ಪುಡಿಯಿಂದ ಮೊಸರನ್ನ ಮಾಡಿಸಿ ಬಡಿಸಿದ್ದರು. ಕೇಳಿದರೆ ಫೇಲ್ ಮಾಡ್ತೀನಿ ಅಂತ ಹೆದರಿಸ್ತಾರೆಂದು ಶಾಲಾ ಮಕ್ಕಳು ಮುಖ್ಯ ಶಿಕ್ಷಕಿ ಮೇಲೆ ಗಂಭೀರ ಆರೋಪ ಮಾಡಿದರು. ಬಿಸಿಯೂಟದಲ್ಲಿ ಹುಳಗಳು ಪತ್ತೆಯಾದ್ದರಿಂದ ಮಕ್ಕಳಿಗೆ ಮನೆಯಿಂದಲೇ ಊಟ ಕೊಡುತ್ತಿದ್ದೇವೆ ಎಂದು ಪೋಷಕರು ತಿಳಿಸಿದರು.
ಮುಖ್ಯಶಿಕ್ಷಕಿ ವಿರುದ್ದ ಕ್ರಮ ಕೈಗೊಳ್ಳಿ:ಮಕ್ಕಳು ಆರೋಗ್ಯ ಕಾಪಾಡಬೇಕಾದದ್ದು ಶಿಕ್ಷಕರ ಜವಾಬ್ದಾರಿ. ಮಕ್ಕಳ ಜೀವದ ಜತೆ ಚೆಲ್ಲಾಟ ಆಡಬಾರದು. ಅಧಿಕಾರಿಗಳು ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ಇಂತಹ ಘಟನೆ ಜರುಗದಂತೆ ಎಚ್ಚರ ವಹಿಸಬೇಕು ಎಂದು ಎಸ್ಡಿಎಂಸಿ ಅಧ್ಯಕ್ಷ ನಾಗೇಶ್ ನಾಯಕ್ ಒತ್ತಾಯಿಸಿದರು.
ಮುಖ್ಯಶಿಕ್ಷಕಿ ಅಮಾನತಿಗೆ ಪೋಷಕರ ಆಗ್ರಹ: ಅಧಿಕಾರಿಗಳ ನೇತೃತ್ವದಲ್ಲಿ ನಡೆದ ಪೋಷಕರು, ಎಸ್ಡಿಎಂಸಿ ಸಭೆಯಲ್ಲಿ ಬಿಇಒ ಅವರು ಬಿಸಿಯೂಟದ ದಾಸ್ತಾನು ಪುಸ್ತಕದಲ್ಲಿ ಮಾಹಿತಿ ಬರೆಯದೇ ಇರುವುದು, ಅನುದಾನ ದುರುಪಯೋಗ, ಮಕ್ಕಳಿಂದ ಹಣ ಸಂಗ್ರಹ ಸೇರಿದಂತೆ ಎಸ್ಡಿಎಂಸಿ ಪುಸ್ತಕ, ಲೆಕ್ಕಪುಸ್ತಕಗಳನ್ನು ತೋರಿಸದೇ ಮನೆಯಲ್ಲಿಟ್ಟಿರುವುದಾಗಿ ಮುಖ್ಯಶಿಕ್ಷಕಿ ತಿಳಿಸಿದ್ದಕ್ಕೆ ಆಕ್ರೋಶಗೊಂಡ ಪೋಷಕರು ಕೂಡಲೇ ಅಮಾನತು ಮಾಡಬೇಕೆಂದು ಆಗ್ರಹಿಸಿದರು.ತಾಲೂಕು ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಶಿವಕುಮಾರ್ ಮಾತನಾಡಿ, ಆಹಾರ ಧಾನ್ಯಗಳನ್ನು ಶೇಖರಣೆ ಮಾಡುವ ಬಗ್ಗೆ ಅಡುಗೆ ಸಿಬ್ಬಂದಿಗೆ ಈಗಾಗಲೇ ತರಬೇತಿ ನೀಡಲಾಗಿದೆ. ಇದರಲ್ಲಿ ಮುಖ್ಯಶಿಕ್ಷಕಿಯ ನಿರ್ಲಕ್ಷ್ಯ ಕಾಣುತ್ತಿದ್ದು ಈ ಬಗ್ಗೆ ಮೇಲಧಿಕಾರಿಗಳ ಗಮನಕ್ಕೆ ತರುತ್ತೇವೆ ಎಂದರು.
ಶಿವಗಂಗೆಯ ಸರ್ಕಾರಿ ಶಾಲೆಯ ಬಿಸಿಯೂಟದಲ್ಲಿ ಹುಳ.
ಪೋಟೋ 2 :ಶಾಲೆ ಮುಂದೆ ಮಕ್ಕಳು ಹಾಗೂ ಪೋಷಕರು ಪ್ರತಿಭಟನೆ ನಡೆಸಿದರು.
ಬಿಇಒ ಸೇರಿದಂತೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಸಿದರು.
ಪೋಟೋ 4 :ಮುಖ್ಯಶಿಕ್ಷಕಿ ಸುಮಂಗಳ.