ಯಳಂದೂರಿನ ಗೌಡಹಳ್ಳಿಯಲ್ಲಿ ನೀರಿನಲ್ಲಿ ಹುಳ ಪತ್ತೆ: ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

KannadaprabhaNewsNetwork |  
Published : Apr 06, 2026, 01:45 AM IST
5ಸಿಎಚ್‌ಎನ್‌55ಯಳಂದೂರು ತಾಲೂಕಿನ ಗೌಡಹಳ್ಳಿ ಗ್ರಾಮದ ಉಪ್ಪಾರ ಬಡಾವಣೆಯ ಮನೆಯೊಂದರಲ್ಲಿ ಕುಡಿಯುವ ನೀರಿನೊಂದಿಗೆ ಬಂದಿರುವ ಹುಳುಗಳು | Kannada Prabha

ಸಾರಾಂಶ

ತಾಲೂಕಿನ ಗೌಡಹಳ್ಳಿ ಗ್ರಾಮದ ಉಪ್ಪಾರ ಬಡಾವಣೆಯಲ್ಲಿ ಕಳೆದ 3 ದಿನಗಳಿಂದ ಕುಡಿಯುವ ನೀರಿನೊಂದಿಗೆ ಹುಳುಗಳು ಬರುತ್ತಿದ್ದು ಸಾರ್ವಜನಿಕರು ಆತಂಕಗೊಂಡಿದ್ದಾರೆ.

- ಕುಡಿಯುವ ನೀರಿನ ಪೈಪ್‌ ಒಡೆದಿರುವ ಶಂಕೆ

- ಕಳೆದ 4 ದಿನಗಳಿಂದ ನೀರಿನ ಜೊತೆ ಹುಳ ಪತ್ತೆ

- ಗ್ರಾಮ ಪಂಚಾಯ್ತಿ ನಿರಾಸಕ್ತಿ ಬಗ್ಗೆ ಜನರ ಬೇಸರ

- ಕಲುಷಿತ ನೀರಿನಿಂದ ರೋಗ ಹರಡುವ ಆತಂಕ

---

ಕನ್ನಡಪ್ರಭ ವಾರ್ತೆ ಯಳಂದೂರು

ತಾಲೂಕಿನ ಗೌಡಹಳ್ಳಿ ಗ್ರಾಮದ ಉಪ್ಪಾರ ಬಡಾವಣೆಯಲ್ಲಿ ಕಳೆದ 3 ದಿನಗಳಿಂದ ಕುಡಿಯುವ ನೀರಿನೊಂದಿಗೆ ಹುಳುಗಳು ಬರುತ್ತಿದ್ದು ಸಾರ್ವಜನಿಕರು ಆತಂಕಗೊಂಡಿದ್ದಾರೆ.

ಇಲ್ಲಿಗೆ ಪೂರೈಕೆಯಾಗುವ ಕುಡಿಯುವ ನೀರಿನೊಂದಿಗೆ ಹುಳುಗಳು ಬರುತ್ತಿವೆ. ಹಾಗಾಗಿ ಇಲ್ಲಿನ ವಾಸಿಗಳು ಅನಿವಾರ್ಯವಾಗಿ ದೂರರಿಂದ ನೀರು ತರುವ ಪರಿಸ್ಥಿತಿ ಬಂದೊದಗಿದೆ. ಈ ಬಗ್ಗೆ ಸಂಬಂಧಪಟ್ಟ ಗ್ರಾಮ ಪಂಚಾಯ್ತಿ ಗಮನ ಹರಿಸದೆ ಇರುವುದು ಇಲ್ಲಿನ ಜನರ ಆತಂಕಕ್ಕೆ ಕಾರಣವಾಗಿದೆ.

ಈ ಬಡಾವಣೆಯಲ್ಲಿ ಮಾತ್ರ ಈ ಸಮಸ್ಯೆ ಇದ್ದು, ಕುಡಿಯುವ ನೀರಿನ ಪೈಪ್ ಒಡೆದು ಕಲುಷಿತ ನೀರು ಇದಕ್ಕೆ ಸೇರಿರುವ ಬಗ್ಗೆ ಅನುಮಾನಗಳಿವೆ. ಈಗ ಬೇಸಿಗೆವಾಗಿರುವುದರಿಂದ ನೀರಿನಿಂದ ಅಪಾಯಕಾರಿ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆಗಳು ದಟ್ಟವಾಗಿವೆ. ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟವರು ಈ ಬಗ್ಗೆ ಸೂಕ್ತ ಕ್ರಮ ವಹಿಸಬೇಕು. ಈ ಸಮಸ್ಯೆಗೆ ಪರಿಹಾರವನ್ನು ಒದಗಿಸಬೇಕು ಎಂದು ಇಲ್ಲಿನ ವಾಸಿಗಳಾದ ಮಹೇಶ್, ಪೂಜಾ ಸೇರಿದಂತೆ ಅನೇಕರ ಆಗ್ರಹವಾಗಿದೆ.

---

ಗೌಡಹಳ್ಳಿ ಗ್ರಾಮದ ಉಪ್ಪಾರ ಬಡಾವಣೆಯಲ್ಲಿ ಕುಡಿಯುವ ನೀರಿನಲ್ಲಿ ಹುಳುಗಳು ಬರುತ್ತಿವೆ ಎಂಬುದರ ಬಗ್ಗೆ ನನಗೆ ಮಾಹಿತಿ ಇಲ್ಲ. ಸಂಬಂಧಪಟ್ಟ ಪಿಡಿಒಗಳೊಂದಿಗೆ ಸಂಪರ್ಕಿಸಿ ಆದಷ್ಟು ಬೇಗ ಈ ಸಮಸ್ಯೆಯನ್ನು ಬಗೆಹರಿಸಲು ಕ್ರಮ ವಹಿಸಲಾಗುವುದು.

- ಎ.ಬಿ. ವೇಣು, ಯಳಂದೂರು ತಾಪಂ ಇಒ

---5ಸಿಎಚ್‌ಎನ್‌55

ಯಳಂದೂರು ತಾಲೂಕಿನ ಗೌಡಹಳ್ಳಿ ಗ್ರಾಮದ ಉಪ್ಪಾರ ಬಡಾವಣೆಯ ಮನೆಯೊಂದರಲ್ಲಿ ಕುಡಿಯುವ ನೀರಿನೊಂದಿಗೆ ಬಂದಿರುವ ಹುಳುಗಳು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಟ್ಟಸೋಗೆಯಲ್ಲಿ ಶಾಸಕ ಮಂಜು ಕ್ರಿಕೆಟ್‌ ಕಪ್‌
ಏಕಶಿಲಾ ಆಂಜನೇಯ ಸ್ವಾಮಿ ವಿಗ್ರಹ ಪ್ರತಿಷ್ಠಾಪನೆ