ನಿರ್ವಾಣ ಶ್ರೀಗಳ ಗದ್ದುಗೆ ಪೂಜೆ, ಪುಣ್ಯಸ್ಮರಣೆ

KannadaprabhaNewsNetwork |  
Published : Jul 04, 2026, 01:30 AM IST
ಕೆಕೆಪಿ ಸುದ್ದಿ 02 : ಕನಕಪುರ ದೇಗುಲ ಮಠದ ಶ್ರೀಗಳ ಗದ್ದುಗೆಗೆ ಸಿದ್ದಗಂಗಾ ಮಠದ  ಶ್ರೀ ಸಿದ್ದಲಿಂಗ ಸ್ವಾಮೀಜಿ, ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಕರಿ ವೃಷಬೇಂದ್ರ ಸ್ವಾಮೀಜಿ ಸೇರಿದಂತೆ ಹರಗುರು ಚರ ಮೂರ್ತಿ ಗಳು, ಗಣ್ಯರು ಪುಷ್ಪ ನಮನ ಸಲ್ಲಿಸಿದರು. ಉಪಸ್ಥಿತರಿದ್ದರು.  | Kannada Prabha

ಸಾರಾಂಶ

ಕನಕಪುರ: ಶ್ರೀಮಠದ ಆವರಣದಲ್ಲಿ ಹಿಮ್ಮಡಿ ನಿರ್ವಾಣ ಸ್ವಾಮೀಜಿಗಳ ಹಾಗೂ ಮುಮ್ಮಡಿ ಮಹಾಲಿಂಗ ಸ್ವಾಮೀಜಿಗಳ ಪಕ್ಕದಲ್ಲಿಯೇ ಇರುವ ಲಿಂಗೈಕ್ಯ ಶ್ರೀಗಳ ಗದ್ದುಗೆ ಬಳಿ ಬೆಳಗಿನ ಜಾವ 4 ಗಂಟೆಗೆ ಶ್ರೀ ಮಠದ ಕಿರಿಯ ಚನ್ನಬಸವ ಸ್ವಾಮೀಜಿ ಹಲವು ಮಠಾಧೀಶರ ಸಮ್ಮುಖದಲ್ಲಿ ಮಹಾರುದ್ರಾಭಿಷೇಕದೊಂದಿಗೆ ಆರಂಭಿಸಿ ಇಷ್ಟಲಿಂಗ ಪೂಜೆ ನೆರವೇರಿಸಿ ಧಾರ್ಮಿಕ ಪೂಜಾ ವಿಧಾನಗಳಿಗೆ ಚಾಲನೆ ನೀಡಿದರು

ಕನಕಪುರ: ಶ್ರೀಮಠದ ಆವರಣದಲ್ಲಿ ಹಿಮ್ಮಡಿ ನಿರ್ವಾಣ ಸ್ವಾಮೀಜಿಗಳ ಹಾಗೂ ಮುಮ್ಮಡಿ ಮಹಾಲಿಂಗ ಸ್ವಾಮೀಜಿಗಳ ಪಕ್ಕದಲ್ಲಿಯೇ ಇರುವ ಲಿಂಗೈಕ್ಯ ಶ್ರೀಗಳ ಗದ್ದುಗೆ ಬಳಿ ಬೆಳಗಿನ ಜಾವ 4 ಗಂಟೆಗೆ ಶ್ರೀ ಮಠದ ಕಿರಿಯ ಚನ್ನಬಸವ ಸ್ವಾಮೀಜಿ ಹಲವು ಮಠಾಧೀಶರ ಸಮ್ಮುಖದಲ್ಲಿ ಮಹಾರುದ್ರಾಭಿಷೇಕದೊಂದಿಗೆ ಆರಂಭಿಸಿ ಇಷ್ಟಲಿಂಗ ಪೂಜೆ ನೆರವೇರಿಸಿ ಧಾರ್ಮಿಕ ಪೂಜಾ ವಿಧಾನಗಳಿಗೆ ಚಾಲನೆ ನೀಡಿದರು.

ಬಳಿಕ ಪಂಚಾಮೃತ ಅಭಿಷೇಕ, ರುದ್ರಾಭಿಷೇಕ ಮತ್ತು ವಿಶೇಷ ಪೂಜೆಗಳನ್ನು ನೆರವೇರಿಸಿ ಬಿಲ್ವಪತ್ರೆ ಹಾಗೂ ವಿಭೂತಿಗಳ ಮೂಲಕ ಸಾಂಪ್ರದಾಯಿಕವಾಗಿ ವೇದ ಘೋಷಗಳೊಂದಿಗೆ ಗದ್ದುಗೆ ಪೂಜೆ ನೆರವೇರಿಸಿದರು. ಬೆಳಗ್ಗೆ 8 ಗಂಟೆಗೆ ಪೂಜ್ಯ ಶ್ರೀಗಳ ಮೂರ್ತಿ ಪಲ್ಲಕ್ಕಿ ಮೆರವಣಿಗೆ ಶ್ರೀಮಠದ ಭಕ್ತರು ಹಾಗೂ ಸಾರ್ವಜನಿಕರ ನೇತೃತ್ವದಲ್ಲಿ ನಗರದ ಪ್ರಮುಖ ಬೀದಿ ಗಳಲ್ಲಿ ವಿಜೃಂಭಣೆಯಿಂದ ನೆರವೇರಿಸಲಾಯಿತು. ಬೆಳಿಗ್ಗೆ 9 ಗಂಟೆಗೆ ಗಾಯಕ ಅಜಯ್ ವಾರಿಯರ್ ಮತ್ತು ಇಂದು ನಾಗರಾಜ್ ತಂಡದಿಂದ ಭಕ್ತಿ ಸಂಗೀತ ನಡೆಯಿತು. ಮಠದ ಆವರಣದಲ್ಲಿ 108 ಪರಮ ಪೂಜ್ಯರ ಪಾದಪೂಜೆಯನ್ನು ಶ್ರೀ ಚನ್ನಬಸವ ಸ್ವಾಮೀಜಿ ನೆರವೇರಿಸಿದರು.

ವೇದಿಕೆ ಕಾರ್ಯಕ್ರಮದ ಬಳಿಕ ಸಂಜೆ 5 ಗಂಟೆಯವರೆಗೂ ಗಾಯಕ ರಾಜೇಶ್ ಕೃಷ್ಣನ್ ಮತ್ತು ತಂಡದವರಿಂದ ಗೀತ ನಮನ, ಸಂಜೆ 5 ಗಂಟೆಯಿಂದ ಅಮೃತಾ ನಾಯ್ಡು ಮತ್ತು ತಂಡದವರಿಂದ ಭೂಕೈಲಾಸ ಹರಿಕಥೆ ನಡೆಯಿತು. ಸಂಜೆ 6- 7ರವರೆಗೆ ಬೆಂಗಳೂರಿನ ಗ್ರಾಂಡ್ ಸಿತಾರ್ ಸಿಂಘನಿ ತಂಡದವರಿಂದ ನಾದ ಸ್ವರಾಂಜಲಿ ಹಾಗೂ ಸಂಜೆ 7 -8.30 ರವರೆಗೆ ಪಶ್ಚಿಮ ಬಂಗಾಳದ ರೈಬೋ ನೃತ್ಯ ತಂಡದವರಿಂದ ನೃತ್ಯ ನಮನ ಹಾಗೂ ರಾತ್ರಿ 8.30ರಿಂದ ಮೈಸೂರಿನ ಬಿದಿರು ಥಿಯೇಟರ್ ವತಿಯಿಂದ ಉರಿ ಚಮ್ಮಾಳಿಗೆ ಎಂಬ ಮಹದೇಶ್ವರ ನೃತ್ಯ ರೂಪಕ ನಡೆಯಿತು.

ಬೆಳಿಗ್ಗೆಯಿಂದಲೇ ಶ್ರೀ ಮಠಕ್ಕೆ ಭಕ್ತರು ಸಾಗರೋಪಾದಿಯಲ್ಲಿ ಆಗಮಿಸಿ ಪೂಜ್ಯ ಶ್ರೀಗಳ ಗದ್ದುಗೆ ದರ್ಶನ ಪಡೆದು ಧನ್ಯರಾದರು. 25 ಸಾವಿರಕ್ಕೂ ಹೆಚ್ಚು ಭಕ್ತರಿಗೆ ನಿರಂತರ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.

ತುಮಕೂರು ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ, ಸುತ್ತೂರು ಮಠದ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಕರಿ ವೃಷಬೇಂದ್ರ ಸ್ವಾಮೀಜಿ ಸೇರಿದಂತೆ ನಾಡಿನ ಹಲವು ಮಠಾಧೀಶರು ಉಪಸ್ಥಿತರಿದ್ದು ಶ್ರೀಗಳ ಗದ್ದುಗೆಗೆ ಪುಷ್ಪನಮನ ಸಲ್ಲಿಸಿದರು .

ಕೆಕೆಪಿ ಸುದ್ದಿ 02 :

ಕನಕಪುರ ದೇಗುಲ ಮಠದ ಶ್ರೀಗಳ ಗದ್ದುಗೆಗೆ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ, ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಕರಿ ವೃಷಬೇಂದ್ರ ಸ್ವಾಮೀಜಿ ಸೇರಿದಂತೆ ಹರಗುರು ಚರಮೂರ್ತಿ ಗಳು, ಗಣ್ಯರು ಪುಷ್ಪ ನಮನ ಸಲ್ಲಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸರ್ಕಾರದ ಸವವಲತ್ತುಗಳನ್ನು ಶ್ರಮಿಕ ವರ್ಗದವರು ಸದ್ಭಳಕೆ ಮಾಡಬೇಕು: ಡಾ.ಕೆ.ಪಿ.ಅಂಶುಮಂತ್
ಡೇರಿ ಸಿಬ್ಬಂದಿ ಆರೋಗ್ಯ ಕಾಳಜಿ ವಹಿಸಿ: ಬಮೂಲ್‌ ನಿರ್ದೇಶಕ