ರೋಣ: ಏ. 5ರಂದು ಹಸಿರು ಕ್ರಾಂತಿ ಹರಿಕಾರ ಬಾಬು ಜಗಜೀವನರಾಮ, ಏ. 14ರಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರ ಪೂಜೆಯನ್ನು ಪ್ರತಿಯೊಂದು ಕಚೇರಿ, ಶಾಲಾ, ಕಾಲೇಜಗಳಲ್ಲಿ ಕಡ್ಡಾಯವಾಗಿ ಮಾಡಬೇಕು ಎಂದು ತಹಸೀಲ್ದಾರ್ ನಾಗರಾಜ.ಕೆ. ಸೂಚನೆ ನೀಡಿದರು.
ಜಯಂತಿ ಆಚರಣೆಯಲ್ಲಿ ಭಾರತ ರತ್ನ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಹಾಗೂ ಹಸಿರು ಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನರಾಂ ಅವರ ಭಾವಚಿತ್ರ ಪೂಜೆ ಮಾಡುವಂತೆ ತಾಲೂಕಿನ ಎಲ್ಲಾ ಸಂಘ ಸಂಸ್ಥೆ, ಶಾಲೆ ಕಾಲೇಜುಗಳಿಗೆ ಸುತ್ತೋಲೆ ನೀಡುವಂತೆ ಸಭೆಯಲ್ಲಿದ್ದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಗೀತಾ ಆಲೂರ ಅವರಿಗೆ ಸೂಚನೆ ನೀಡಿದರು.
ಅಧಿಕಾರಿಗಳ ಗೈರು, ಆಕ್ರೋಶ: ಪಟ್ಟಣದ ತಹಸೀಲ್ದಾರ್ ಸಭಾಂಗಣದಲ್ಲಿ ಜರುಗಿದ ಪೂರ್ವಭಾವಿ ಸಭೆಯಲ್ಲಿ ತಾಲೂಕು ಮಟ್ಟದ ಕೆಲ ಮುಖ್ಯ ಅಧಿಕಾರಿಗಳು ಗೈರಾಗಿದ್ದು, ಇದನ್ನು ಕಂಡ ದಲಿತ ಸಮಾಜದ ಮುಖಂಡರು, ಮಹನೀಯರ ಜಯಂತಿ ಆಚರಣೆ ಪೂರ್ವಭಾವಿ ಸಭೆಗೆ ಕಲ ಅಧಿಕಾರಿಗಳು ಉದ್ದೇಶಪೂರ್ವಕವಾಗಿಯೇ ಗೈರಾಗುತ್ತಾರೆ. ಹೀಗಾದರೆ ಜಯಂತಿಗಳ ಆಚರಣೆ ಅರ್ಥಪೂರ್ಣವಾಗಲು ಶ್ರಮಿಸುವರಾದರು ಯಾರು ಎಂದು ಆಕ್ರೋಶ ವ್ಯಕ್ತಪಡಿಸಿ, ಅಂತಹ ಅಧಿಕಾರಿಗಳ ಮೇಲೆ ಕ್ರಮ ಜರುಗಿಸಬೇಕು ಒತ್ತಾಯಿಸಿದರು. ಪೂರ್ವಭಾವಿ ಗೈರಾದ ಅಧಿಕಾರಿಗಳ ಮಾಹಿತಿ ಪಡೆದು ಅವರಿಗೆ ನೋಟಿಸ್ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಾಲೂಕು ದಂಡಾಧಿಕಾರಿ ಸೂಚಿಸಿದರು.ಈ ಸಂದರ್ಭದಲ್ಲಿ ಮುಖಂಡರಾದ ಪ್ರಕಾಶ ಹೊಸಳ್ಳಿ, ಸೋಮು ನಾಗರಾಜ, ಶರಣಪ್ಪ ದೊಡ್ಡಮನಿ, ಸಂಜಯ ದೊಡಮನಿ, ಬಸವರಾಜ ತಳವಾರ, ದೇವಿಂದ್ರಪ್ಪ ಕೊಳಪ್ಪನ್ನವರ, ಭೀಮಪ್ಪ ಮಾದರ, ಮಜುರಪ್ಪ ಮಾದ,ಪಿಎಸ್ಐ ಪ್ರಕಾಶ ಬಣಕಾರ, ತಾಲೂಕು ಸಮಾಜ ಕಲ್ಯಾಣ ಸಹಾಯಕ ನಿರ್ದೇಶಕಿ ಗೀತಾ ಆಲೂರ. ತಾಪಂ ಇಓ ಚಂದ್ರಶೇಖರ್ ಕಂದಕೂರ, ಪುರಸಭೆ ಅಧ್ಯಕ್ಷೆ ಗೀತಾ ಮಾಡಲಗೇರಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.