ರಾಘವೇಂದ್ರ ಸ್ವಾಮಿಗಳ ಆರಾಧನೆ ಆಗಸ್ಟ್‌ ೧೦ರಿಂದ ಆರಂಭ

KannadaprabhaNewsNetwork |  
Published : Aug 06, 2025, 01:15 AM IST
ಪೊಟೋ- ಪಟ್ಟಣದ ರಾಘವೇಂದ್ರ ಸ್ವಾಮಿಗಳ ಬೃಂದಾವನದ ದೃಶ್ಯ. | Kannada Prabha

ಸಾರಾಂಶ

ಲಕ್ಷ್ಮೇಶ್ವರ ಪಟ್ಟಣದ ರಾಘವೇಂದ್ರ ಸ್ವಾಮಿಗಳ ಬೃಂದಾವನ ಪುರಾತನ ಇತಿಹಾಸ ಹೊಂದಿರುವ ಜಾಗೃತ ಸ್ಥಳವಾಗಿದ್ದು, ಕಲಿಯುಗದ ಕಲ್ಪವೃಕ್ಷವಾಗಿರುವ ರಾಘವೇಂದ್ರ ಸ್ವಾಮಿಗಳ ರಾಯರ ಆರಾಧನೆಯನ್ನು ಪ್ರತಿವರ್ಷ ಆಚರಿಸುತ್ತಿದ್ದು, ಈ ವರ್ಷ ಆ.೧೦, ೧೧ ಮತ್ತು ೧೨ರಂದು ೩೦೫ನೇ ವರ್ಷದ ಆರಾಧನಾ ಮಹೋತ್ಸವವು ಶ್ರೀಮಠದಲ್ಲಿ ವಿಜೃಂಭಣೆಯಿಂದ ಆಚರಿಸುವ ನಿಟ್ಟಿನಲ್ಲಿ ಎಲ್ಲ ಸಮಾಜ ಬಾಂಧವರು ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ಶ್ರೀಮಠದ ಧರ್ಮದರ್ಶಿ ಹನುಮಂತಾಚಾರ್ಯ ಹೊಂಬಳ ಹೇಳಿದರು.

ಲಕ್ಷ್ಮೇಶ್ವರ: ಪಟ್ಟಣದ ರಾಘವೇಂದ್ರ ಸ್ವಾಮಿಗಳ ಬೃಂದಾವನ ಪುರಾತನ ಇತಿಹಾಸ ಹೊಂದಿರುವ ಜಾಗೃತ ಸ್ಥಳವಾಗಿದ್ದು, ಕಲಿಯುಗದ ಕಲ್ಪವೃಕ್ಷವಾಗಿರುವ ರಾಘವೇಂದ್ರ ಸ್ವಾಮಿಗಳ ರಾಯರ ಆರಾಧನೆಯನ್ನು ಪ್ರತಿವರ್ಷ ಆಚರಿಸುತ್ತಿದ್ದು, ಈ ವರ್ಷ ಆ.೧೦, ೧೧ ಮತ್ತು ೧೨ರಂದು ೩೦೫ನೇ ವರ್ಷದ ಆರಾಧನಾ ಮಹೋತ್ಸವವು ಶ್ರೀಮಠದಲ್ಲಿ ವಿಜೃಂಭಣೆಯಿಂದ ಆಚರಿಸುವ ನಿಟ್ಟಿನಲ್ಲಿ ಎಲ್ಲ ಸಮಾಜ ಬಾಂಧವರು ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ಶ್ರೀಮಠದ ಧರ್ಮದರ್ಶಿ ಹನುಮಂತಾಚಾರ್ಯ ಹೊಂಬಳ ಹೇಳಿದರು. ಸೋಮವಾರ ಪಟ್ಟಣದ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಆರಾಧನೆಯ ಕುರಿತು ವಿಪ್ರಬಾಂಧವರ ಮತ್ತು ಭಕ್ತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ನೂರಾರು ವರ್ಷಗಳ ಭವ್ಯ ಇತಿಹಾಸ ಹೊಂದಿರುವ ಪಟ್ಟಣದ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಎಲ್ಲರ ಸಹಾಯ ಸಹಕಾರದಿಂದ ಆರಾಧನೆ ಸೇರಿದಂತೆ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳು ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿದ್ದು, ಇದೇ ಆ. ೧೦, ೧೧ ಮತ್ತು ೧೨ರಂದು ಮೂರು ದಿನಗಳ ಕಾಲ ಆರಾಧನೆ ಕಾರ್ಯಕ್ರಮವು ಸಂಪ್ರದಾಯದಂತೆ ನಡೆಯಲಿದ್ದು, ನಿತ್ಯ ರಾಘವೇಂದ್ರ ಸ್ತೋತ್ತ್ರ, ಅಷ್ಟೋತ್ತರ, ಅಭಿಷೇಕ, ವಿಶೇಷ ಅಲಂಕಾರ, ಪುರಾಣ, ಪಾರಾಯಣ, ಸಂಗೀತ ಸೇವೆ ನಡೆಯಲಿದ್ದು, ಪ್ರತಿದಿನ ಬೆಳಿಗ್ಗೆ ೧೦ರಿಂದ ೧೧.೩೦ ರವರೆಗೆ ವಿದ್ವತ್ ಜನರಿಂದ ಪುರಾಣ ಪ್ರವಚನ ಮತ್ತು ಉಪನ್ಯಾಸ ನಡೆಯಲಿದೆ.

ದಿ.೧೨ರಂದು ಬೆಳಗ್ಗೆ ೧೦ ಗಂಟೆಗೆ ರಾಘವೇಂದ್ರ ಸ್ವಾಮಿಗಳ ರಥೋತ್ಸವವು ಸಕಲ ವಾಧ್ಯ ವೈಭವ, ಭಜನೆಗಳಿಂದ ನೆರವೇರಲಿದ್ದು, ಸಕಲರು ಪ್ರತಿವರ್ಷದಂತೆ ಯಶಸ್ವಿಗೊಳಿಸುತ್ತಿರುವ ಆರಾಧನೆ ಕಾರ್ಯಕ್ರಮವು ಈ ವರ್ಷವು ಸಾಂಗವಾಗಿ ನೆರವೇರಿಸುವ ಸಂಕಲ್ಪ ಮಾಡಿ ಯಶಸ್ವಿಗೊಳಿಸುವವಲ್ಲಿ ಸಹಕಾರ ನೀಡುವಂತೆ ಮನವಿ ಮಾಡಿದರು.ಸಮಾಜದ ಹಿರಿಯ ಮುಖಂಡ ವಿ.ಎಲ್. ಪೂಜಾರ ಮತ್ತು ಬ್ರಹ್ಮವೃಂದದ ಅಧ್ಯಕ್ಷ ಗೋಪಾಲ ಪಡ್ನೀಸ್, ತಾಲೂಕು ಬ್ರಾಹ್ಮಣ ಸಂಘದ ಅಧ್ಯಕ್ಷ ಕೃಷ್ಣ ಕುಲಕರ್ಣಿ ಮಾತನಾಡಿ, ಬ್ರಾಹ್ಮಣ ಸಮಾಜದೊಂದಿಗೆ ಎಲ್ಲ ಸಮಾಜ ಬಾಂಧವರು ಸಹ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿದ್ದು, ಸೇವೆ ಮಾಡಿದವರಿಗೆ ಇಷ್ಟಾರ್ಥ ಈಡೇರಿಸುವ ರಾಯರ ಕಾರ್ಯಕ್ರಮಕ್ಕೆ ಸಮಾಜ ಬಾಂಧವರು ಪಾಲ್ಗೊಂಡು ಯಶಸ್ವಿಗೊಳಿಸುವ ಭರವಸೆ ನೀಡಿದರು.ಸಭೆಯಲ್ಲಿ ವೆಂಕಟೇಶ ಗುಡಿ, ಡಿ.ಪಿ.ಹೇಮಾದ್ರಿ, ನಾರಾಯಣಭಟ್ ಪುರಾಣಿಕ, ಎಸ್.ಜಿ.ಹೊಂಬಳ, ಅರವಿಂದ ದೇಶಪಾಂಡೆ, ಎ.ಪಿ.ಕುಲಕರ್ಣಿ, ವರದೇಂದ್ರ ಪುರೋಹಿತ್, ಕೆ.ಎಸ್.ಕುಲಕರ್ಣಿ, ಬಿ.ಕೆ.ಕುಲಕರ್ಣಿ, ಅನಿಲ ಕುಲಕರ್ಣಿ, ಕೃಷ್ಣಕುಮಾರ ಕುಲಕರ್ಣಿ, ದಿಗಂಬರ ಪೂಜಾರ, ಗುರಣ್ಣ ಪಾಟೀಲಕುಲಕರ್ಣಿ, ರಾಘವೇಂದ್ರ ಪೂಜಾರ, ಶ್ರೀಕಾಂತ ಪೂಜಾರ, ಆರ್.ಎನ್. ಪಂಚಬಾವಿ, ರಮೇಶ ತೊರಗಲ್, ಬಾಬು ಅಳವಂಡಿ, ಮಂಜುನಾಥ ವಂಟಿ, ಮುಂತಾದವರು ಭಾಗವಹಿಸಿ ಸಲಹೆ ಸೂಚನೆ ನೀಡಿದರು.

PREV

Recommended Stories

ಧರ್ಮಸ್ಥಳ ಗ್ರಾಮದಲ್ಲಿ ಕಳೇಬರ ಸಿಗದಿದ್ರೆ ಮುಸುಕುಧಾರಿ ಲೋಪವಲ್ಲ
ಪ್ರಧಾನಿ ಆಗಮನ ಹಿನ್ನೆಲೆಯಲ್ಲಿ 35 ಬೀದಿ ನಾಯಿಗಳ ಬಂಧನ