ಕನಕಪುರ: ಯುವಕರ ನಿರ್ಲಕ್ಷ್ಯ ಹಾಗೂ ಪ್ರೋತ್ಸಾಹದ ಕೊರತೆಯಿಂದ ಕುಸ್ತಿ ಪಟುಗಳ ಸಂಖ್ಯೆ ಕ್ಷೀಣಿಸುತ್ತಿದೆ ಎಂದು ಪೈಲ್ವಾನ್ ಮಿಠಾಯಿ ಕೃಷ್ಣಪ್ಪ ವಿಷಾದಿಸಿದರು.
ಪೈಲ್ವಾನ್ ಚನ್ನಕೃಷ್ಣಪ್ಪ ಮಾತನಾಡಿ, ಈಗಲೂ ವಯಸ್ಸಾದವರು ಬೆಳಗಿನ ಜಾವ ಬಂದು ಯುವಕರೊಂದಿಗೆ ತಮ್ಮ ಕೈಲಾದಷ್ಟು ಕಸರತ್ತು ನಡೆಸುತ್ತಾರೆ. ಬೇಸರವೆನಿಸಿದಾಗ ಕಸರತ್ತು ನಡೆಸಿದ ಮನಸ್ಸಿನ ನೋವುಗಳೆಲ್ಲ ಕ್ಷಣಾರ್ಧದಲ್ಲಿ ಮರೆಯಾಗುತ್ತದೆ. ಯುವಕರು ಇಂದು ಕುಸ್ತಿ ಕಲೆ ಬಗ್ಗೆ ಆಸಕ್ತಿ ತೋರುತ್ತಿಲ್ಲ. ಸರ್ಕಾರಗಳು ಕೂಡ ಕುಸ್ತಿ ಕಲೆ ಅಭಿವೃದ್ಧಿಗೆ ಯೋಜನೆಯನ್ನೂ ಹಮ್ಮಿಕೊಳ್ಳುವಂತೆ ಮನವಿ ಮಾಡಿದರು.
ಪೈಲ್ವಾನ್ ಹಾಗೂ ರಾಜ್ಯ ಕುಸ್ತಿಪಟುಗಳ ಸಂಘದ ಪ್ರಧಾನ ಕಾರ್ಯದರ್ಶಿ ವಿಜಯ್ ಕುಮಾರ್ ಮಾತನಾಡಿ, ಕುಸ್ತಿಪಟುಗಳು ದಿನನಿತ್ಯದ ಆಹಾರ ಸೇವನೆಗೆ ವಿಶೇಷ ಮಹತ್ವ ನೀಡಬೇಕು. ಬಾದಾಮಿ ಹಾಲು, ರಾಗಿಮುದ್ದೆ, ಬೆಲ್ಲ ಮತ್ತು ರವೆಯಿಂದ ಮಾಡಿದ ಸಿಹಿ ತಿನಿಸು, ಬೆಣ್ಣೆ, ತುಪ್ಪ ಸೇವಿಸಬೇಕು ಎಂದರು.ಸುಮಾರು 80ರಿಂದ 100 ಯುವಕರು ಬರುತ್ತಿದ್ದ ಗರಡಿ ಮನೆಯಲ್ಲಿ ಹಿಂದಿದ್ದ ವೈಭವ ಈಗಿಲ್ಲ. ಆ ಕಾಲದಲ್ಲಿ ಸ್ಪರ್ಧಿಗಳ ನಡುವಿನ ಜಟಾಪಟಿ ಕಣ್ಣಿಗೆ ಮುದ ನೀಡುತ್ತಿತ್ತು. ಗರಡಿ ಮನೆಯೆಂದರೆ ಅಭಿಮಾನ, ಗೌರವ ಇತ್ತು. ಆದರೆ ಇಂದು ಯುವಕರು ಪಾಶ್ಚಾತ್ಯ ಸಂಸ್ಕೃತಿಗೆ ಮುಗಿಬಿದ್ದು, ಕುಸ್ತಿ ಕಲೆ ಮರೆಯಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಕೆ ಕೆ ಪಿ ಸುದ್ದಿ 3::
ಕನಕಪುರದ ಚಾವಡಿ ಗರಡಿಯಲ್ಲಿ ವಾರ್ಷಿಕ ಮಟ್ಟಿ ಪೂಜೆ ನೆರವೇರಿಸಲಾಯಿತು.