- ಕಾಡುಗೊಲ್ಲರ ಸಂಘದ ರಾಜ್ಯಾಧ್ಯಕ್ಷ ದೊಡ್ಡರಾಜಣ್ಣ ಸಲಹೆ । ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯ ಚಿಂತನ-ಮಂಥನ ಸಭೆ - - -
ರಾಜ್ಯಾದ್ಯಂತ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ 2025-26ನೇ ಸಾಲಿನಲ್ಲಿ ಸೆ.22ರಿಂದ 15 ದಿನಗಳ ಕಾಲ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಜಾತಿಗಣತಿ ಕೈಗೊಂಡಿದೆ. ಕಾಡುಗೊಲ್ಲ ಸಮಾಜ ಬಾಂಧವರು ಜಾತಿ ಕಾಲಂನಲ್ಲಿ ಕಾಡುಗೊಲ್ಲ ಅಂತಲೇ ಬರೆಸಬೇಕು ಎಂದು ಕಾಡುಗೊಲ್ಲರ ಸಂಘದ ರಾಜ್ಯಾಧ್ಯಕ್ಷ ದೊಡ್ಡರಾಜಣ್ಣ ಹೇಳಿದರು.
ನಗರದ ರೋಟರಿ ಬಾಲಭವನದಲ್ಲಿ ಭಾನುವಾರ ಜಿಲ್ಲಾ ಕಾಡುಗೊಲ್ಲರ ಸಂಘದಿಂದ ಹಮ್ಮಿಕೊಂಡಿದ್ದ ರಾಜ್ಯ ಸರ್ಕಾರದ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯ ಚಿಂತನ-ಮಂಥನ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.ಜಗಳೂರು, ಚನ್ನಗಿರಿ, ಮಾಯಕೊಂಡ ವಿಧಾನಸಭಾ ಕ್ಷೇತ್ರಗಳಲ್ಲಿ ನಮ್ಮ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿದ್ದಾರೆ. ಇಂದಿಗೂ ಶೈಕ್ಷಣಿಕ, ಆರ್ಥಿಕ, ಸಾಮಾಜಿಕ, ರಾಜಕೀಯವಾಗಿ ಅತ್ಯಂತ ಹಿಂದುಳಿದ ಬುಡಕಟ್ಟು ಸಮುದಾಯ ಕಾಡುಗೊಲ್ಲರದ್ದು. ಅತ್ಯಂತ ಶೋಚನೀಯ ಸ್ಥಿತಿಯಲ್ಲಿ ಇಂದಿಗೂ ನಮ್ಮ ಸಮುದಾಯ ಬಾಂಧವರು ಜೀವನ ನಡೆಸುತ್ತಿದ್ದಾರೆ. ಕಾಡುಗೊಲ್ಲ ಸಮುದಾಯವನ್ನು ಈಗಾಗಲೇ ಕುಲಶಾಸ್ತ್ರ ಅಧ್ಯಯನ ಮಾಡಿ, ಕೇಂದ್ರದ ಎಸ್ಟಿ ಪಟ್ಟಿಗೆ ಸೇರಿಸಲು ರಾಜ್ಯ ಸರ್ಕಾರ ಶಿಫಾರಸು ಮಾಡಿದೆ. ಆದರೆ, ಇಂದಿಗೂ ಕೇಂದ್ರವು ನಮ್ಮನ್ನು ಎಸ್ಟಿ ಪಟ್ಟಿಗೆ ಸೇರಿಸದಿರುವುದು ದುರಂತ ಎಂದರು.
ಹೋರಾಟ ಮನಸ್ಥಿತಿ ಮುಖ್ಯ:
ಜಾತಿ ಪತ್ರ ತಾರತಮ್ಯ:
ಕಾಡುಗೊಲ್ಲರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಪ್ರಭುದೇವ, ಜಿಲ್ಲಾಧ್ಯಕ್ಷ ಸುಂಕಪ್ಪ, ಬಿಜೆಪಿ ಮುಖಂಡರಾದ ಜಿ.ಆರ್. ಶಶಿಧರ, ಹೊನ್ನೂರು ಗಂಗಾಧರ, ಪ್ರಾಧ್ಯಾಪಕ ಶೇಷಪ್ಪ ರುದ್ರನಕಟ್ಟೆ, ಏಕಾಂತಪ್ಪ, ತುಮಕೂರು ದೊಡ್ಡೇಗೌಡ, ಜಗಳೂರು ಚಿತ್ತಪ್ಪ, ಚನ್ನಗಿರಿ ರಂಗನಾಥ, ಗುಡಾಳ್ ಐಗೂರು ಹನುಮಂತಪ್ಪ, ಜಗಳೂರು ಜೆ.ಸಿ. ಕೃಷ್ಣಮೂರ್ತಿ, ಕೆಆರ್ಎಸ್ ಪಕ್ಷದ ವೀರಭದ್ರಪ್ಪ, ಚನ್ನಗಿರಿ ಶಿಕ್ಷಕ ದೇವೇಂದ್ರಪ್ಪ, ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಐಗೂರು ದೇವೇಂದ್ರಪ್ಪ, ಬೋಧಕ ನಾಗರಾಜ, ಸಮಾಜದ ಮುಖಂಡರು ಇದ್ದರು.
(ಬಾಕ್ಸ್)
- ಯಾದವ ಶ್ರೀಗಳೂ ಸಮಾಜದ ದಿಕ್ಕು ತಪ್ಪಿಸುತ್ತಿದ್ದಾರೆ: ಪ್ರಭುದೇವ ಆರೋಪ
ಚಿಂತನ-ಮಂಥನ ಸಭೆಯಲ್ಲಿ ಮಾತನಾಡಿದ ಅವರು, ಚಿತ್ರದುರ್ಗದ ಶ್ರೀಕೃಷ್ಣ ಮಠದ ಶ್ರೀ ಕೃಷ್ಣ ಯಾದವ ಮಠದ ಶ್ರೀ ಕೃಷ್ಣ ಯಾದವಾನಂದ ಸ್ವಾಮೀಜಿ ಪೂರ್ವಾಶ್ರಮದಲ್ಲಿ ಕಾಡುಗೊಲ್ಲರಾಗಿದ್ದು, ಜಾತಿ ಕಾಲಂನಲ್ಲಿ ಗೊಲ್ಲ, ಉಪ ಜಾತಿ ಕಾಲಂನಲ್ಲಿ ಕಾಡುಗೊಲ್ಲರೆಂದು ಬರೆಸಲು ಹೇಳಿ, ಸಮಾಜವನ್ನು ದಿಕ್ಕು ತಪ್ಪಿಸುತ್ತಿರುವುದು ತರವಲ್ಲ ಎಂದು ಅವರು ಆಕ್ಷೇಪಿಸಿದರು.
ನಮ್ಮ ಕಾಡುಗೊಲ್ಲ ಸಮುದಾಯಕ್ಕೂ, ಯಾದವರಿಗೂ ಯಾವುದೇ ಸಂಬಂಧವಿಲ್ಲ. ನಾವು ಮೂಲತಃ ಬುಡಕಟ್ಟು ಕಾಡುಗೊಲ್ಲರು. ಹಾಗಾಗಿ, ನಾವು ಯಾವುದೇ ಷಡ್ಯಂತ್ರಕ್ಕೆ ಬಲಿಯಾಗುವುದು ಬೇಡ. ನಾವೆಲ್ಲರೂ ಒಂದಾಗಿ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ನಮ್ಮದೇ ಕಾಡುಗೊಲ್ಲ ಸಮುದಾಯದ ವ್ಯಕ್ತಿಯನ್ನು ಆಯ್ಕೆ ಮಾಡಿಕೊಳ್ಳಬೇಕು. ಹಾಗಾಗಿ ಸಂಘದಿಂದ ಕಾಡುಗೊಲ್ಲ ಸಮುದಾಯದಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದೇವೆ. ಕಾಡುಗೊಲ್ಲರೂ ಜಾಗೃತರಾಗಬೇಕು ಎಂದರು.- - -
-14ಕೆಡಿವಿಜಿ1, 2.ಜೆಪಿಜಿ:ದಾವಣಗೆರೆಯಲ್ಲಿ ಭಾನುವಾರ ಜಿಲ್ಲಾ ಕಾಡುಗೊಲ್ಲರ ಸಂಘ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯ ಸರ್ಕಾರದ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯ ಚಿಂತನ-ಮಂಥನ ಸಭೆಯಲ್ಲಿ ಸಮಾಜದ ರಾಜ್ಯಾಧ್ಯಕ್ಷ ದೊಡ್ಡರಾಜಣ್ಣ ಮಾತನಾಡಿದರು.