ಜಾತಿ ಸಮಾವೇಶಗಳಿಂದ ತಪ್ಪು ಸಂದೇಶ: ಹೊರಟ್ಟಿ

KannadaprabhaNewsNetwork |  
Published : Sep 19, 2025, 01:00 AM IST
ಹೊರಟ್ಟಿ | Kannada Prabha

ಸಾರಾಂಶ

ರಾಜ್ಯ ಸರ್ಕಾರ ಆರ್ಥಿಕ, ಸಾಮಾಜಿಕ ಸಮೀಕ್ಷೆಯ ಗಣತಿಗೆ ಮುಂದಾಗುತ್ತಿದ್ದಂತೆ ರಾಜ್ಯದ ಎಲ್ಲೆಡೆ ಈಗ "ಜಾತಿ ಸಮಾವೇಶ "ಗಳ ಅಬ್ಬರ ಕೇಳಿಬರುತ್ತಿರುವ ಹಿನ್ನಲೆಯಲ್ಲಿ ಕನ್ನಡಪ್ರಭದೊಂದಿಗೆ ತಮ್ಮ ನೋವು ತೋಡಿಕೊಂಡ ಅವರು, ಜಾತಿ ಜಾತಿ ಎಂದು ಬಡಿದಾಡಿ ಏನನ್ನು ಸಾಧಿಸ ಹೊರಟಿದ್ದೇವೆ?.

ಹುಬ್ಬಳ್ಳಿ: ಜಾತ್ಯತೀತರು ಎಂದು ಹೇಳುತ್ತಲೇ ಮುಂದಿನ ಪೀಳಿಗೆಯನ್ನು ಇನ್ನಷ್ಟು ಜಾತಿವಾದಿಗಳನ್ನಾಗಿ ಮಾಡುತ್ತಿದ್ದೇವೆ. ಜಾತಿ ಸಮಾವೇಶಗಳಿಂದ ತಪ್ಪು ಸಂದೇಶ ಹೋಗುತ್ತಿದೆ ಎಂದು ಸಭಾಪತಿ ಬಸವರಾಜ ಹೊರಟ್ಟಿ ತೀವ್ರ ಬೇಸರ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರ ಆರ್ಥಿಕ, ಸಾಮಾಜಿಕ ಸಮೀಕ್ಷೆಯ ಗಣತಿಗೆ ಮುಂದಾಗುತ್ತಿದ್ದಂತೆ ರಾಜ್ಯದ ಎಲ್ಲೆಡೆ ಈಗ "ಜಾತಿ ಸಮಾವೇಶ "ಗಳ ಅಬ್ಬರ ಕೇಳಿಬರುತ್ತಿರುವ ಹಿನ್ನಲೆಯಲ್ಲಿ ಕನ್ನಡಪ್ರಭದೊಂದಿಗೆ ತಮ್ಮ ನೋವು ತೋಡಿಕೊಂಡ ಅವರು, ಜಾತಿ ಜಾತಿ ಎಂದು ಬಡಿದಾಡಿ ಏನನ್ನು ಸಾಧಿಸ ಹೊರಟಿದ್ದೇವೆ? ಎಂದು ಪ್ರಶ್ನಿಸಿದರು.

ಸಮಾಜಕ್ಕೆ ಮಾರ್ಗದರ್ಶನ ಮಾಡಬೇಕಿದ್ದ ಮಠಾಧೀಶರು, ರಾಜ್ಯಭಾರ ಮಾಡಿದ, ಮಾಡುತ್ತಿರುವ ಮಂತ್ರಿ-ಮಹೋದಯರು, ಮುಖಂಡರು, ಗಣ್ಯರು ಎನಿಸಿಕೊಂಡವರು ಇಂದು ತಮ್ಮ ತಮ್ಮ ಜಾತಿಗಳ ಜನರನ್ನು ದೊಡ್ಡ ಸಂಖ್ಯೆಯಲ್ಲಿ ಕೂಡಿಸಿ ಸಮಾವೇಶ ಮಾಡುವ ಮೂಲಕ ಅವರಿಗೆ ಜಾತಿಯ ವಿಷಯವನ್ನು ಒತ್ತಿ ಒತ್ತಿ ಹೇಳುತ್ತಿದ್ದಾರೆ. ಬೇರೆ ಸಮುದಾಯದವರನ್ನು ದ್ವೇಷಿಸುವಂತೆ ಮಾಡುತ್ತಿದ್ದಾರೆ. ಹಾಗಿದ್ದರೆ ಇವರೆಲ್ಲ ಬೇರೆ ವೇದಿಕೆಗಳಲ್ಲಿ ಜಾತ್ಯಾತೀತೆಯ ಭಾಷಣ ಬಿಗಿಯುದು ಬೂಟಾಟಿಕೆ ಅನಿಸುವುದಿಲ್ಲವೇ? ಎಂದರು.

ಹಿಂದೆ ನಾನು ಯಾರೋ ಒತ್ತಾಯ ಮಾಡಿದರು ಎನ್ನುವ ಕಾರಣಕ್ಕೆ ಒಂದು ಸಮಾವೇಶದಲ್ಲಿ ಭಾಗವಹಿಸಿದ್ದೆ. ಅ ಬಳಿಕ ಯಾವುದೇ ಜಾತಿ ಸಮಾವೇಶದಲ್ಲಿ ಭಾಗಿಯಾಗಿಲ್ಲ, ಮುಂದೆಯೂ ಯಾವುದೇ ಜಾತಿಯ ಸಮಾವೇಶದಲ್ಲಿ ಭಾಗವಹಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ ಬಸವರಾಜ ಹೊರಟ್ಟಿ, ಜಾತಿವಿನಾಶದಿಂದ ಮಾತ್ರ ಶಾಂತಿ, ಸಮಾನತೆ, ಸಹೋದರತ್ವ ಬೆಳೆಯಲು ಸಾಧ್ಯ ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮೈಸೂರು ಹೀಲಿಯಂ ಸಿಲಿಂಡರ್‌ ಸ್ಫೋಟ : ಎನ್‌ಐಎ ಭೇಟಿ
ಹಸೆಮಣೆ ಏರಬೇಕಿದ್ದ ಬಾಲ್ಯದ ಗೆಳತಿಯರು ಬೆಂಕಿಯಲ್ಲಿ ಭಸ್ಮ!